AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್ ರೋಣ’ ಸಿನಿಮಾ ಪ್ರಚಾರದ ಮಧ್ಯೆ ಇಡಿ ವಿಚಾರಣೆ ಎದುರಿಸಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್​

ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಪ್ರಮುಖ ಆರೋಪಿ. ಸುಕೇಶ್ ಜತೆ ಜಾಕ್ವೆಲಿನ್ ನಿರಂತರ ಸಂಪರ್ಕದಲ್ಲಿ ಇದ್ದರು. ಈ ಕಾರಣಕ್ಕೆ ಇಡಿ ಅಧಿಕಾರಿಗಳ ದೃಷ್ಟಿ ಜಾಕ್ವೆಲಿನ್ ಮೇಲೆ ಬಿದ್ದಿದೆ.

‘ವಿಕ್ರಾಂತ್ ರೋಣ’ ಸಿನಿಮಾ ಪ್ರಚಾರದ ಮಧ್ಯೆ ಇಡಿ ವಿಚಾರಣೆ ಎದುರಿಸಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್​
ಜಾಕ್ವೆಲಿನ್
TV9 Web
| Edited By: |

Updated on: Jun 27, 2022 | 4:37 PM

Share

ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಅವರು ‘ವಿಕ್ರಾಂತ್​ ರೋಣ’ ಸಿನಿಮಾ (Vikrant Rona) ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಬೆಂಗಳೂರು, ಮುಂಬೈಗೆ ತೆರಳಿ ಸಿನಿಮಾ ಪ್ರಚಾರ ಮಾಡಿದ್ದಾರೆ. ಈ ಮಧ್ಯೆ ಅವರು ಒಂದು ದಿನ ಬ್ರೇಕ್ ತೆಗೆದುಕೊಂಡು, ಜಾರಿ ನಿರ್ದೇಶನಾಲಯದ (ಇಡಿ) ವಿಚಾರಣೆಗೆ ಒಳಪಟ್ಟಿದ್ದಾರೆ. ನೂರಾರು ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ (ಜೂನ್ 27) ನವದೆಹಲಿಯ ಕಚೇರಿಗೆ ತೆರಳಿರುವ ಜಾಕ್ವೆಲಿನ್ ಇಡಿ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಸುಕೇಶ್ ಚಂದ್ರಶೇಖರ್ ಪ್ರಮುಖ ಆರೋಪಿ. ಸುಕೇಶ್ ಜತೆ ಜಾಕ್ವೆಲಿನ್ ನಿರಂತರ ಸಂಪರ್ಕದಲ್ಲಿ ಇದ್ದರು. ಸುಕೇಶ್​ನಿಂದ ಹಲವು ದುಬಾರಿ ಗಿಫ್ಟ್​​ಗಳನ್ನು ಪಡೆದಿದ್ದರು. ಈ ಕಾರಣಕ್ಕೆ ಇಡಿ ಅಧಿಕಾರಿಗಳ ದೃಷ್ಟಿ ಜಾಕ್ವೆಲಿನ್ ಮೇಲೆ ಬಿದ್ದಿದೆ. ಈ ಕಾರಣಕ್ಕೆ ಅವರನ್ನು ಹಲವು ಬಾರಿ ವಿಚಾರಣೆಗೆ ಒಳಪಡಿಸಲಾಗಿದೆ. ಈ ಪ್ರಕರಣದಲ್ಲಿ ಬಾಲಿವುಡ್​ ನಟಿ ನೋರಾ ಫತೇಹಿ ಅವರ ಹೆಸರು ಕೂಡ ತಳುಕು ಹಾಕಿಕೊಂಡಿದೆ. ಕಳೆದ ವರ್ಷ ಅವರು ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆ ನೀಡಿದ್ದಾರೆ. ಜಾಕ್ವೆಲಿನ್​ಗೂ ತನಗೂ ಸಂಬಂಧ ಇರುವ ಬಗ್ಗೆ ಸುಕೇಶ್ ಹೇಳಿಕೆ ನೀಡಿದ್ದ. ಜಾಕ್ವೆಲಿನ್ ಜತೆ ಕಳೆದ ಖಾಸಗಿ ಕ್ಷಣದ ಫೋಟೋಗಳನ್ನು ಆತ ಲೀಕ್ ಮಾಡಿದ್ದ. ಇದರಿಂದ ನಟಿಗೆ ಸಾಕಷ್ಟು ಮುಜುಗರ ಎದುರಾಗಿತ್ತು. ‘ಸುಕೇಶ್ ಓರ್ವ ಉದ್ಯಮಿ ಆಗಿ ನನಗೆ ಗೊತ್ತು. ಆತ ಮಾಡಿದ ವಂಚನೆಗೂ ತಮಗೂ ಯಾವುದೇ ಸಂಬಂಧ ಇಲ್ಲ’ ಎಂದು ಜಾಕ್ವೆಲಿನ್ ಹೇಳಿಕೆ ನೀಡಿದ್ದರು.

ಏಪ್ರಿಲ್​ ತಿಂಗಳಲ್ಲಿ ಇಡಿ ಅಧಿಕಾರಿಗಳು ಜಾಕ್ವೆಲಿನ್​ಗೆ ಸಂಬಂಧಿಸಿದ 7.12 ಕೋಟಿ ರೂಪಾಯಿ ಎಫ್​ಡಿ ಹಾಗೂ 15 ಲಕ್ಷ ರೂಪಾಯಿ ಕ್ಯಾಶ್​ಅನ್ನು ಮುಟ್ಟುಗೋಲು ಹಾಕಿಕೊಂಡಿದ್ದರು. ಈ ಹಣವನ್ನು ಇಡಿ ಅಧಿಕಾರಿಗಳು ಅಕ್ರಮ ಎಂದು ಪರಿಗಣಿಸಿದ್ದರು.

ಇದನ್ನೂ ಓದಿ
Image
‘ಡ್ಯಾನ್ಸ್​ ಕರ್ನಾಟಕ ಡ್ಯಾನ್ಸ್’ ವೇದಿಕೆ ಮೇಲೆ ಶಿವರಾಜ್​ಕುಮಾರ್ ಎನರ್ಜೆಟಿಕ್ ಡ್ಯಾನ್ಸ್; ಎದ್ದು ನಿಂತು ಚಪ್ಪಾಳೆ ತಟ್ಟಿದ ರಕ್ಷಿತಾ
Image
Kichcha Sudeep: ಕೆಲವೇ ಗಂಟೆಗಳಲ್ಲಿ ಕೋಟ್ಯಂತರ ಬಾರಿ ವೀಕ್ಷಣೆ ಕಂಡ ‘ವಿಕ್ರಾಂತ್​ ರೋಣ’ ಟ್ರೇಲರ್​
Image
‘ವಿಕ್ರಾಂತ್ ರೋಣ’ ಸಿನಿಮಾ ಕಲೆಕ್ಷನ್​ ಎಷ್ಟಾಗಲಿದೆ? ‘ಕಿಚ್ಚ’ ಸುದೀಪ್ ಕೊಟ್ರು ಲೆಕ್ಕಾಚಾರ
Image
ಶಿವಣ್ಣ ಜತೆ ನಟಿಸುವ ಚಾನ್ಸ್​ ಸಿಕ್ಕರೂ ಮುಹೂರ್ತಕ್ಕೆ ಪ್ರಭುದೇವ ಬರಲಿಲ್ಲ; ಕಾರಣ ತಿಳಿಸಿ ಕ್ಷಮೆ ಕೇಳಿದ ನಟ

ಸಿನಿಮಾ ವಿಚಾರಕ್ಕೆ ಬರುವುದಾದರೆ ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಜುಲೈ 28ರಂದು ತೆರೆಗೆ ಬರುತ್ತಿದೆ. ಈ ಸಿನಿಮಾದಲ್ಲಿ ವಿಶೇಷ ಹಾಡಿಗೆ ಜಾಕ್ವೆಲಿನ್ ಹೆಜ್ಜೆ ಹಾಕಿದ್ದು, ಕೆಲ ದೃಶ್ಯಗಳಲ್ಲೂ ಕಾಣಿಸಿಕೊಳ್ಳಲಿದ್ದಾರೆ. ನಟಿಗೆ ಬಾಲಿವುಡ್​ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ‘ವಿಕ್ರಾಂತ್​ ರೋಣ’ ಮೂಲಕ ಮೊದಲ ಬಾರಿಗೆ ಅವರು ಕನ್ನಡಕ್ಕೆ ಕಾಲಿಡುತ್ತಿದ್ದಾರೆ.

ಇದನ್ನೂ ಓದಿ: ಕಿಚ್ಚ ಸುದೀಪ್​ಗೆ ಸಿಕ್ತು ಮತ್ತೊಂದು ಬ್ಯಾಟ್ ಗಿಫ್ಟ್​; ಇದರಲ್ಲಿದೆ ಹಲವು ದಿಗ್ಗಜರ ಆಟೋಗ್ರಾಫ್​

‘ವಿಕ್ರಾಂತ್ ರೋಣ’ ಚಿತ್ರದ ಪ್ರಚಾರದ ವೇಳೆ ಕಪ್ಪುಡುಗೆ ತೊಟ್ಟು ಮಿಂಚಿದ ಜಾಕ್ವೆಲಿನ್ ಫರ್ನಾಂಡಿಸ್

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು