AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಕ್ವೆಲಿನ್ ಫರ್ನಾಂಡಿಸ್​ಗೆ ದುಬೈಗೆ ತೆರಳಲು ಅವಕಾಶ ನೀಡಿದ ಕೋರ್ಟ್​; ಷರತ್ತುಗಳು ಅನ್ವಯ

IIFA ಕಾರ್ಯಕ್ರಮ ದುಬೈನಲ್ಲಿ ನಡೆಯುತ್ತಿದೆ. ಈ ಅವಾರ್ಡ್​ ಫಂಕ್ಷನ್​ಗೆ ಜಾಕ್ವೆಲಿನ್​ ಅವರಿಗೂ ಆಮಂತ್ರಣ ಇದೆ. ಅವರು ತನಿಖೆ ಎದುರಿಸುತ್ತಿರುವುದರಿಂದ ವಿದೇಶಕ್ಕೆ ತೆರಳಲು ಸಾಧ್ಯವಿಲ್ಲ. ಹೀಗಾಗಿ, ದೆಹಲಿ ಕೋರ್ಟ್​ಗೆ ಜಾಕ್ವೆಲಿನ್ ವಿಶೇಷ ಮನವಿ ಸಲ್ಲಿಕೆ ಮಾಡಿದ್ದರು.

ಜಾಕ್ವೆಲಿನ್ ಫರ್ನಾಂಡಿಸ್​ಗೆ ದುಬೈಗೆ ತೆರಳಲು ಅವಕಾಶ ನೀಡಿದ ಕೋರ್ಟ್​; ಷರತ್ತುಗಳು ಅನ್ವಯ
ಜಾಕ್ವೆಲಿನ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: May 29, 2022 | 7:09 AM

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರು (Jacqueline Fernandez) ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಸಿನಿಮಾಗಿಂತ ಅವರ ವೈಯಕ್ತಿಕ ಜೀವನದ ವಿಚಾರ ಹೆಚ್ಚು ಚರ್ಚೆಯಲ್ಲಿದೆ. ಉದ್ಯಮಿಗಳಿಗೆ ನೂರಾರು ಕೋಟಿ ವಂಚನೆ ಮಾಡಿರುವ ಆರೋಪ ಹೊತ್ತಿರುವ ಸುಕೇಶ್ ಚಂದ್ರಶೇಖರ್ (Sukesh Chandrashekhar) ಜತೆ ಜಾಕ್ವೆಲಿನ್ ಸಂಪರ್ಕದಲ್ಲಿ ಇದ್ದರು. ಜತೆಗೆ ಅವರಿಂದ ಉಡುಗೊರೆ ಪಡೆದಿದ್ದರು. ಆ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ಇತ್ತೀಚೆಗೆ ಅವರಿಗೆ ಸಂಬಂಧಿಸಿದ 7.27 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಅವರು ದೆಹಲಿ ಕೋರ್ಟ್​ ಮೆಟ್ಟಿಲೇರಿದ್ದರು. ವಿದೇಶಕ್ಕೆ ತೆರಳಲು ಅವಕಾಶ ಕೋರಿ ಅವರು ಮನವಿ ಸಲ್ಲಿಕೆ ಮಾಡಿದ್ದರು. ಇದಕ್ಕೆ ಕೋರ್ಟ್ ಒಪ್ಪಿಗೆ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರೋಪಿಗಳಾದರೆ ಅವರ ಪಾಸ್​ಪೋರ್ಟ್​ಅನ್ನು ಅಧಿಕಾರಿಗಳು ವಶಕ್ಕೆ ಪಡೆಯುತ್ತಾರೆ. ಒಂದೊಮ್ಮೆ ಅವರು ವಿದೇಶಕ್ಕೆ ತೆರಳಿದರೆ ಮತ್ತೆ ಅವರು ಹಿಂದಿರುಗದೆ ಇರಬಹುದು ಎನ್ನುವ ಕಾರಣಕ್ಕೆ ಈ ರೀತಿ ಮಾಡಲಾಗುತ್ತದೆ. ಅದೇ ರೀತಿ ಜಾಕ್ವೆಲಿನ್​ಗೆ ವಿದೇಶಕ್ಕೆ ತೆರಳುವುದರ ಮೇಲೆ ನಿರ್ಬಂಧ ಹೇರಲಾಗಿದೆ. ಈ ಮೊದಲು ವಿದೇಶಕ್ಕೆ ಹೊರಟಿದ್ದ ಅವರನ್ನು ವಿಮಾನ ನಿಲ್ದಾಣದಲ್ಲೇ ತಡೆಯಲಾಗಿತ್ತು. ಹೀಗಾಗಿ ಜಾಕ್ವೆಲಿನ್ ಅವರು ದೆಹಲಿ ಕೋರ್ಟ್ ಮೊರೆ ಹೋಗಿದ್ದರು.

ಅಂತರರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಕಾರ್ಯಕ್ರಮ ದುಬೈನಲ್ಲಿ ನಡೆಯುತ್ತಿದೆ. ಈ ಅವಾರ್ಡ್​ ಫಂಕ್ಷನ್​ಗೆ ಜಾಕ್ವೆಲಿನ್​ ಅವರಿಗೂ ಆಮಂತ್ರಣ ಇದೆ. ಅವರು ತನಿಖೆ ಎದುರಿಸುತ್ತಿರುವುದರಿಂದ ವಿದೇಶಕ್ಕೆ ತೆರಳಲು ಸಾಧ್ಯವಿಲ್ಲ. ಹೀಗಾಗಿ, ದೆಹಲಿ ಕೋರ್ಟ್​ಗೆ ಜಾಕ್ವೆಲಿನ್ ವಿಶೇಷ ಮನವಿ ಸಲ್ಲಿಕೆ ಮಾಡಿದ್ದರು. ಅವಾರ್ಡ್​ ಫಂಕ್ಷನ್ ನಿಮಿತ್ತ 15 ದಿನ ದುಬೈಗೆ ತೆರಳಲು ಅವಕಾಶ ಕೇಳಿದ್ದರು. ಕೆಲ ಷರತ್ತುಗಳನ್ನು ವಿಧಿಸಿ ಕೋರ್ಟ್ ಇದಕ್ಕೆ​ ಅನುಮತಿ ನೀಡಿದೆ.

ಇದನ್ನೂ ಓದಿ
Image
Jacqueline Fernandez: ವಿಶೇಷ ಗೆಟಪ್​ನಲ್ಲಿ ಮಿಂಚಿದ ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್
Image
Jacqueline Fernandez: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಮನಮೋಹಕ ಫೋಟೋಗಳು ಇಲ್ಲಿವೆ
Image
Jacqueline Fernandez: ಹೊಸ ಗೆಟಪ್​ನಲ್ಲಿ ಜಾಕ್ವೆಲಿನ್; ವಿಕ್ರಾಂತ್ ರೋಣ ಬೆಡಗಿಯ ಫೋಟೋಗಳು ವೈರಲ್
Image
ಜಾಕ್ವೆಲಿನ್​​ಗಾಗಿ ಬರೋಬ್ಬರಿ ₹ 500 ಕೋಟಿ ಬಜೆಟ್​ನ ಸೂಪರ್​ಹೀರೋ​ ಚಿತ್ರ ನಿರ್ಮಿಸುವುದಾಗಿ ಭರವಸೆ ನೀಡಿದ್ದ ವಂಚಕ ಸುಕೇಶ್

ಇದನ್ನೂ ಓದಿ: ವಂಚನೆ ಆರೋಪಿ ಜತೆಗಿನ​ ಖಾಸಗಿ ಫೋಟೋ ವೈರಲ್​ ಆದ ಬಳಿಕ ಅಧ್ಯಾತ್ಮದ ಮೊರೆಹೋದ ಜಾಕ್ವೆಲಿನ್​ ಫರ್ನಾಂಡಿಸ್​

‘ಮೇ 31ರಿಂದ ಜೂನ್ 6ವರೆಗೆ ಮಾತ್ರ ಅವರು ದುಬೈ ಪ್ರಯಾಣ ಬೆಳೆಸಬಹುದು. ದುಬೈನಲ್ಲಿ ಎಲ್ಲಿ ಉಳಿದುಕೊಳ್ಳುತ್ತಾರೆ, ಅಲ್ಲಿ ಬಳಕೆ ಮಾಡುವ ಮೊಬೈಲ್ ಸಂಖ್ಯೆ ಯಾವುದು ಎನ್ನುವ ಬಗ್ಗೆ ಮಾಹಿತಿ ನೀಡಬೇಕು. 50 ಲಕ್ಷ ರೂಪಾಯಿ ಬಾಂಡ್​ನ ಶ್ಯೂರಿಟಿ ನೀಡಬೇಕು’ ಎಂದು ಕೋರ್ಟ್ ಹೇಳಿದೆ. ಈ ಷರತ್ತುಗಳಿಗೆ ಜಾಕ್ವೆಲಿನ್ ಪರ ವಕೀಲರು ಸಮ್ಮತಿ ಸೂಚಿಸಿದ್ದಾರೆ. ಜೂನ್ 2ರಿಂದ ಜೂನ್ 4ವರೆಗೆ ಅಂತರರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ ಪ್ರಶಸ್ತಿ ಕಾರ್ಯಕ್ರಮ ನಡೆಯಲಿದೆ.

ಸುಕೇಶ್ ಕಡೆಯಿಂದ ಜಾಕ್ವೆಲಿನ್​ಗೆ ಸಾಕಷ್ಟು ದುಬಾರಿ ಉಡುಗೊರೆಗಳು ಸಿಕ್ಕಿದ್ದವು. ಇದನ್ನು ಇತ್ತೀಚೆಗೆ ಇಡಿ ವಶಕ್ಕೆ ಪಡೆದಿದೆ. ಜಾಕ್ವೆಲಿನ್​ ಓಡಾಟಕ್ಕೆ ಸುಕೇಶ್​ ಪ್ರೈವೇಟ್ ಜೆಟ್ ವ್ಯವಸ್ಥೆ ಮಾಡಿದ್ದ ಎಂಬುದಾಗಿ ವರದಿ ಆಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ