AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನುಮತಿ ಪಡೆಯದೆಯೂ ವಿದೇಶಕ್ಕೆ ತೆರಳಬಹುದು’; ಕೋರ್ಟ್​ ಆದೇಶದಿಂದ ಜಾಕ್ವೆಲಿನ್ ನಿರಾಳ

ದೆಹಲಿ ಹೈಕೋರ್ಟ್​ನಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಲ್ಲಿಕೆ ಮಾಡಿದ ಅರ್ಜಿ ವಿಚಾರಣೆಗೆ ಬಂದಿದೆ.  ಈ ವೇಳೆ ವಿಶೇಷ ನ್ಯಾಯಮೂರ್ತಿ ಶೈಲೇಂದ್ರ ಮಲಿಕ್ ಅವರು ಹೊಸ ಆದೇಶ ನೀಡಿದ್ದಾರೆ. ‘ಇನ್ನುಮುಂದೆ ವಿದೇಶಕ್ಕೆ ತೆರಳಬೇಕಾದರೆ ಜಾಕ್ವೆಲಿನ್ ಒಪ್ಪಿಗೆ ಪಡೆಯಬೇಕು ಎಂದಿಲ್ಲ’ ಎಂದು ಅವರು ಹೇಳಿದ್ದಾರೆ.

‘ಅನುಮತಿ ಪಡೆಯದೆಯೂ ವಿದೇಶಕ್ಕೆ ತೆರಳಬಹುದು’; ಕೋರ್ಟ್​ ಆದೇಶದಿಂದ ಜಾಕ್ವೆಲಿನ್ ನಿರಾಳ
ಜಾಕ್ವೆಲಿನ್
Follow us
ರಾಜೇಶ್ ದುಗ್ಗುಮನೆ
|

Updated on: Aug 17, 2023 | 7:15 AM

ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez)  ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. 200 ಕೋಟಿ ರೂಪಾಯಿ ವಂಚನೆ ಪ್ರಕರಣದ ಪ್ರಮುಖ ರುವಾರಿ ಸುಕೇಶ್ ಚಂದ್ರಶೇಖರ್ (Sukesh Chandrashekhar) ಜೊತೆ ಜಾಕ್ವೆಲಿನ್ ಆತ್ಮೀಯತೆ ಬೆಳೆಸಿಕೊಂಡಿದ್ದರು. ಈತನಿಂದ ಜಾಕ್ವೆಲಿನ್ ಉಡುಗೊರೆ ಕೂಡ ಪಡೆದಿದ್ದರು. ಇದು ಅವರಿಗೆ ಮುಳುವಾಗಿದೆ. ಈ ಪ್ರಕರಣದಲ್ಲಿ ಜಾಕ್ವೆಲಿನ್ ಕೂಡ ವಿಚಾರಣೆ ಎದುರಿಸುತ್ತಿದ್ದಾರೆ. ಆರಂಭದಲ್ಲಿ ಅವರಿಗೆ ವಿದೇಶಕ್ಕೆ ತೆರಳಲು ನಿರ್ಬಂಧ ಇತ್ತು. ಬಳಿಕ ಒಪ್ಪಿಗೆ ಪಡೆದು ವಿದೇಶಕ್ಕೆ ಹೋಗಲು ಅವಕಾಶ ನಿಡಲಾಯಿತು. ಈಗ ಒಪ್ಪಿಗೆ ಇಲ್ಲದೆಯೂ ಅವರು ವಿದೇಶಕ್ಕೆ ತೆರಳಬಹುದು ಎಂದು ಕೋರ್ಟ್ ಆದೇಶ ನೀಡಿದೆ. ಇದರಿಂದ ಜಾಕ್ವೆಲಿನ್ ಫರ್ನಾಂಡಿಸ್ ಅವರು ನಿರಾಳ ಆಗಿದ್ದಾರೆ.

ದೆಹಲಿ ಹೈಕೋರ್ಟ್​ನಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ಅವರು ಸಲ್ಲಿಕೆ ಮಾಡಿದ ಅರ್ಜಿ ವಿಚಾರಣೆಗೆ ಬಂದಿದೆ.  ಈ ವೇಳೆ ವಿಶೇಷ ನ್ಯಾಯಮೂರ್ತಿ ಶೈಲೇಂದ್ರ ಮಲಿಕ್ ಅವರು ಹೊಸ ಆದೇಶ ನೀಡಿದ್ದಾರೆ. ‘ಜಾಮೀನಿನ ಷರತ್ತುಗಳನ್ನು ಜಾಕ್ವೆಲಿನ್ ದುರ್ಬಳಕೆ ಮಾಡಿಕೊಂಡಿಲ್ಲ. ಇನ್ನುಮುಂದೆ ವಿದೇಶಕ್ಕೆ ತೆರಳಬೇಕಾದರೆ ಜಾಕ್ವೆಲಿನ್ ಒಪ್ಪಿಗೆ ಪಡೆಯಬೇಕು ಎಂದಿಲ್ಲ. ಮೂರು ದಿನ ಮೊದಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೆ ಸಾಕು’ ಎಂದು ಶೈಲೇಂದ್ರ ಮಲಿಕ್ ಹೊಸ ಆದೇಶದಲ್ಲಿ ಹೇಳಿದ್ದಾರೆ.

‘ಕೆಲಸದ ಕಾರಣದಿಂದ ನಟಿ ತಕ್ಷಣಕ್ಕೆ ವಿದೇಶಕ್ಕೆ ತೆರಳುವ ಪರಿಸ್ಥಿತಿಗಳು ಬಂದೊದಗುತ್ತವೆ. ಈಗಿರುವ ತೊಡಕಿನಿಂದ ಅವರಿಗೆ ಅವಕಾಶ ಕೈತಪ್ಪಬಹುದು. ಹೀಗಾಗಿ, ಇನ್ನುಮುಂದೆ ಅವರು ಒಪ್ಪಿಗೆ ಪಡೆಯಬೇಕಿಲ್ಲ’ ಎಂದು ಶೈಲೇಂದ್ರ ಮಲಿಕ್ ಹೇಳಿದ್ದಾರೆ. ‘ಕೋರ್ಟ್​ನ ಒಪ್ಪಿಗೆ ಇಲ್ಲದೆ ವಿದೇಶಕ್ಕೆ ತೆರಳಬಾರದು’ ಎಂದು ಜಾಮೀನು ನೀಡುವಾಗ ಆದೇಶಿಸಲಾಗಿತ್ತು.

ಇದನ್ನೂ ಓದಿ: ವಿವಾದಗಳನ್ನು ಮರೆತು ಮುಂಬೈನಲ್ಲಿ ಐಷಾರಾಮಿ ಮನೆ ಖರೀದಿಸಿದ ಜಾಕ್ವೆಲಿನ್ ಫರ್ನಾಂಡಿಸ್

‘ಜಾಕ್ವೆಲಿನ್ ಫರ್ನಾಂಡಿಸ್ ಶ್ರೀಲಂಕಾದ ಪೌರತ್ವ ಹೊಂದಿದ್ದಾರೆ. ಅವರು ಭಾರತದಲ್ಲಿ 2009ರಿಂದ ವಾಸಿಸುತ್ತಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ಅವರು ತಪ್ಪದೇ ತೆರಿಗೆ ಪಾವತಿ ಮಾಡುತ್ತಿದ್ದಾರೆ’ ಎಂದು ಜಡ್ಜ್ ಹೇಳಿದ್ದಾರೆ.

ಸುಕೇಶ್ ಚಂದ್ರಶೇಖರ್ 200 ಕೋಟಿ ರೂಪಾಯಿ ವಂಚನೆ ಮಾಡಿದ್ದಾನೆ. ಆತನ ಜೊತೆ ಜಾಕ್ವೆಲಿನ್ ಹೆಸರು ಕೇಳಿ ಬಂದಿದ್ದರಿಂದ ನಟಿಗೆ ಸಾಕಷ್ಟು ತೊಂದರೆ ಆಗಿದೆ. ಹಲವು ಆಫರ್​ಗಳನ್ನು ಅವರು ಕಳೆದುಕೊಂಡಿದ್ದಾರೆ. ಇತ್ತೀಚೆಗೆ ಬರ್ತ್​ಡೇ ಪ್ರಯುಕ್ತ ಜಾಕ್ವೆಲಿನ್​ಗೆ ಸುಕೇಶ್ ಪ್ರೇಮಪತ್ರ ಬರೆದಿದ್ದ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ