AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacqueline Fernandez: 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​ಗೆ ಜಾಮೀನು; ಮುತ್ತಿಗೆ ಹಾಕಿಕೊಂಡ ಕ್ಯಾಮೆರಾಗಳು

Jacqueline Fernandez Case | Sukesh Chandrasekhar: ನ್ಯಾಯಾಲಯದಿಂದ ಹೊರಬರುವಾಗ ಜಾಕ್ವಲಿನ್​ ಫರ್ನಾಂಡಿಸ್​ ಅವರನ್ನು ಮಾಧ್ಯಮದ ಕ್ಯಾಮೆರಾಗಳು ಮುತ್ತಿಕೊಂಡವು. ಈ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ.

Jacqueline Fernandez: 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​ಗೆ ಜಾಮೀನು; ಮುತ್ತಿಗೆ ಹಾಕಿಕೊಂಡ ಕ್ಯಾಮೆರಾಗಳು
ಜಾಕ್ವೆಲಿನ್ ಫರ್ನಾಂಡಿಸ್
TV9 Web
| Edited By: |

Updated on: Nov 16, 2022 | 1:26 PM

Share

ಖ್ಯಾತಿ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಅವರಿಗೆ ಸಣ್ಣ ರಿಲೀಫ್​ ಸಿಕ್ಕಿದೆ. 200 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಅವರು ಜಾಮೀನು ಪಡೆದುಕೊಂಡಿದ್ದಾರೆ. ದೆಹಲಿಯ ಪಟಿಯಾಲಾ ಕೋರ್ಟ್​ನಲ್ಲಿ ಅವರಿಗೆ ಬೇಲ್​ (Jacqueline Fernandez Bail) ಸಿಕ್ಕಿದೆ. ವಿಚಾರಣೆ ಮುಗಿಸಿ ಹೊರಬಂದ ಅವರನ್ನು ಅನೇಕರು ಮುತ್ತಿಕೊಂಡಿದ್ದಾರೆ. ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಂದ ಪ್ರತಿಕ್ರಿಯೆ ಪಡೆಯಲು ಮತ್ತು ಅವರ ಫೋಟೋ, ವಿಡಿಯೋಗಳನ್ನು ಚಿತ್ರಿಸಲು ಮಾಧ್ಯಮದ ಕ್ಯಾಮೆರಾಗಳು ಮುಗಿಬಿದ್ದಿವೆ. ಈ ಸಂದರ್ಭದ ವಿಡಿಯೋ ವೈರಲ್​ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಇದನ್ನು (Jacqueline Fernandez Viral Video) ನೋಡಿದ ನೆಟ್ಟಿಗರು ಖಾರವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಇದು ಸರಿಯಾದ ನಡೆ ಅಲ್ಲ ಎಂದು ಛಾಟಿ ಬೀಸುತ್ತಿದ್ದಾರೆ.

ಬಾಲಿವುಡ್​ನಲ್ಲಿ ಹಾಯಾಗಿ ಸಿನಿಮಾ ಮಾಡಿಕೊಂಡಿದ್ದ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಸುಕೇಶ್ ಚಂದ್ರಶೇಖರ್​ ಸಹವಾಸದಿಂದ ಕಾನೂನಿನ ಸಂಕಷ್ಟ ಎದುರಾಗುವಂತಾಯಿತು. ಉದ್ಯಮಿಗಳಿಗೆ ಬರೋಬ್ಬರಿ 200 ಕೋಟಿ ರೂಪಾಯಿ ವಂಚಿಸಿದ ಆರೋಪ ಸುಕೇಶ್​ ಚಂದ್ರಶೇಖರ್​ ಮೇಲಿದೆ. ಅವರ ಜೊತೆ ಆಪ್ತವಾಗಿದ್ದರು ಮತ್ತು ಅನೇಕ ಗಿಫ್ಟ್​ಗಳನ್ನು ಪಡೆದಿದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್​ ಫರ್ನಾಂಡಿಸ್​ ಹೆಸರು ಕೂಡ ಈ ಪ್ರಕರಣದಲ್ಲಿ ತಳುಕು ಹಾಕಿಕೊಂಡಿದೆ. ತನಿಖಾಧಿಕಾರಿಗಳು ಹಲವು ಬಾರಿ ಜಾಕ್ವೆಲಿನ್​ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ನವೆಂಬರ್​ 15ರಂದು ಅವರಿಗೆ ಜಾಮೀನು ಸಿಕ್ಕಿದೆ.

ಇದನ್ನೂ ಓದಿ
Image
ಸುಕೇಶ್ ಚಂದ್ರಶೇಖರ್ ಬಹು ಕೋಟಿ​ ವಂಚನೆ ಪ್ರಕರಣ: ಜಾಕ್ವೆಲಿನ್ ಬಳಿಕ ನೋರಾಗೆ ಹೆಚ್ಚಿತು ಸಂಕಷ್ಟ
Image
ಸುಕೇಶ್ ಕಳ್ಳಾಟ ಜಾಕ್ವೆಲಿನ್​ಗೆ ಗೊತ್ತಿತ್ತು, ಆದರೂ ರಿಲೇಶನ್​ಶಿಪ್​ನಲ್ಲಿದ್ದರು; ಚಾರ್ಜ್​ಶೀಟ್​​ನಲ್ಲಿ ಅಚ್ಚರಿಯ ಉಲ್ಲೇಖ
Image
‘ವಿಕ್ರಾಂತ್ ರೋಣ’ ಸಿನಿಮಾ ಪ್ರಚಾರದ ಮಧ್ಯೆ ಇಡಿ ವಿಚಾರಣೆ ಎದುರಿಸಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್​
Image
‘ದುಬೈಗೆ ಹೋಗಿ ಬರುತ್ತೇನೆ, ಅವಕಾಶ ನೀಡಿ’; ಕೋರ್ಟ್ ಮುಂದೆ ಅಲವತ್ತುಕೊಂಡ ಜಾಕ್ವೆಲಿನ್ ಫರ್ನಾಂಡಿಸ್

ತಮ್ಮ ಲೀಗಲ್​ ಟೀಮ್ ಸದಸ್ಯರ ಜೊತೆ ನ್ಯಾಯಾಲಯದಿಂದ ಹೊರಬರುವಾಗ ಜಾಕ್ವಲಿನ್​ ಫರ್ನಾಂಡಿಸ್​ ಅವರನ್ನು ಮಾಧ್ಯಮದವರು ಸುತ್ತುವರಿಸಿದ್ದಾರೆ. ಈ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ‘ಅವರಿಗೆ ಕನಿಷ್ಠ ಉಸಿರಾಡಲು ಬಿಡಿ..’ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ವಂಚನೆ ಪ್ರಕರಣದಲ್ಲಿ ತಮ್ಮ ಮೇಲೆ ಕೇಳಿಬಂದಿರುವ ಆರೋಪಗಳು ಆಧಾರ ರಹಿತವಾಗಿವೆ ಎಂದು ಜಾಕ್ವಲಿನ್​ ಫರ್ನಾಂಡಿಸ್​ ವಾದ ಮಂಡಿಸುತ್ತಿದ್ದಾರೆ.

ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​ ಫರ್ನಾಂಡಿಸ್​ ಅವರು ತುಂಬ ಆಪ್ತವಾಗಿರುವ ಫೋಟೋಗಳು ಈ ಮೊದಲು ಲೀಕ್​ ಆಗಿದ್ದವು. ಸುಕೇಶ್​ ಅವರಿಂದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಉಡುಗೊರೆಗಳನ್ನು ಜಾಕ್ವೆಲಿನ್​ ಪಡೆದುಕೊಂಡಿದ್ದರು. ಸುಕೇಶ್​ ನಡೆಸುವ ವ್ಯವಹಾರಗಳ ಬಗ್ಗೆ ನಟಿಗೆ ಮಾಹಿತಿ ಇತ್ತು ಎಂಬ ಆರೋಪ ಕೂಡ ಇದೆ. ಅಂತಿಮವಾಗಿ ಕೇಸ್​ ಏನಾಗಲಿದೆ ಎಂಬ ಕೌತುಕ ನಿರ್ಮಾಣ ಆಗಿದೆ.

ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಬಾಲಿವುಡ್​ನಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ‘ವಿಕ್ರಾಂತ್​ ರೋಣ’ ಚಿತ್ರದ ‘ರಾ ರಾ ರಕ್ಕಮ್ಮ..’ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಕನ್ನಡದ ಪ್ರೇಕ್ಷಕರಿಗೂ ಅವರು ಪರಿಚಿತರಾಗಿದ್ದಾರೆ. ಸದ್ಯ ಅವರ ಕೈಯಲ್ಲಿ ಹಲವು ಆಫರ್​ಗಳಿವೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್