AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಕ್ವೆಲಿನ್ ಫರ್ನಾಂಡಿಸ್​ಗೆ ಶಾಕ್; 7 ಕೋಟಿ ರೂಪಾಯಿ ಆಸ್ತಿ ಮುಟ್ಟುಗೋಲು ಹಾಕಿದ ಜಾರಿ ನಿರ್ದೇಶನಾಲಯ

ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​​ ಫರ್ನಾಂಡಿಸ್​ ಅವರು ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಜಾಕ್ವೆಲಿನ್ ಫರ್ನಾಂಡಿಸ್​ಗೆ ಶಾಕ್; 7 ಕೋಟಿ ರೂಪಾಯಿ ಆಸ್ತಿ ಮುಟ್ಟುಗೋಲು ಹಾಕಿದ ಜಾರಿ ನಿರ್ದೇಶನಾಲಯ
ಜಾಕ್ವೆಲಿನ್
TV9 Web
| Edited By: |

Updated on: Apr 30, 2022 | 6:07 PM

Share

ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ (Jacqueline Fernandez) ಸಾಕಷ್ಟು ಸಂಕಷ್ಟ ಎದುರಾಗುತ್ತಿದೆ. ಅವರ ವರ್ಚಸ್ಸಿಗೆ ಹಾನಿ ಆಗುವಂತಹ ಘಟನೆ ನಡೆಯುತ್ತಿದೆ. ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದ ಕಿಂಗ್​ಪಿನ್​ ಸುಕೇಶ್​ ಚಂದ್ರಶೇಖರ್ (Sukesh Chandrashekhar)​ ಜತೆ ಜಾಕ್ವೆಲಿನ್​ಗೆ ನಂಟು ಇದೆ ಎನ್ನಲಾಗುತ್ತಿದೆ. ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಪ್ರಕರಣದಲ್ಲಿ ತನಿಖೆ ಪ್ರಗತಿಯಲ್ಲಿದ್ದು, ಜಾಕ್ವೆಲಿನ್​ಗೆ ಸಂಬಂಧಿಸಿದ 7.27 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಇದರಲ್ಲಿ ಎಫ್​ಡಿ ಹಣ ಕೂಡ ಸೇರಿದೆ.

‘ಅಕ್ರಮವಾಗಿ ಗಳಿಸಿದ ಹಣದಿಂದ ವಿವಿಧ ಉಡುಗೊರೆಗಳನ್ನು ಸುಕೇಶ್ ಚಂದ್ರಶೇಖರ್ ಅವರು ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ನೀಡಿರುವುದು ತನಿಖೆಯ ವೇಳೆ ಬಹಿರಂಗವಾಗಿದೆ. ಇದರ ಮೌಲ್ಯ 5.71 ಕೋಟಿ ರೂಪಾಯಿ ಆಗಿದೆ. ಸುಕೇಶ್ ಚಂದ್ರಶೇಖರ್ ಅವರು ತಮ್ಮ ಸಹವರ್ತಿ ಮತ್ತು ಈ ಪ್ರಕರಣದ ಆರೋಪಿ ಪಿಂಕಿ ಇರಾನಿ ಮೂಲಕ ಉಡುಗರೆಗಳನ್ನು ಜಾಕ್ವೆಲಿನ್​ಗೆ ತಲುಪಿಸಿದ್ದರು. ಈ ಉಡುಗೊರೆಗಳ ಜೊತೆಗೆ, ಸುಕೇಶ್ ಚಂದ್ರಶೇಖರ್ 1.32 ಕೋಟಿ (1,72,913 ಡಾಲರ್) ಹಾಗೂ 14 ಲಕ್ಷ  ರೂಪಾಯಿಯನ್ನು ಜಾಕ್ವೆಲಿನ್ ಅವರ ಕುಟುಂಬ ಸದಸ್ಯರಿಗೆ ಹವಾಲ ಮೂಲಕ ತಲುಪಿಸಿದ್ದರು’ ಎಂದು ಇಡಿ ಸ್ಟೇಟ್​ಮೆಂಟ್​ನಲ್ಲಿ ತಿಳಿಸಿದೆ.

‘ವೆಬ್-ಸರಣಿ ಪ್ರಾಜೆಕ್ಟ್‌ನ ಸ್ಕ್ರಿಪ್ಟ್ ಬರೆಯಲು ಜಾಕ್ವೆಲಿನ್ ಫರ್ನಾಂಡೀಸ್ ಪರವಾಗಿ ಸ್ಕ್ರಿಪ್ಟ್ ರೈಟರ್‌ಗೆ ಸುಕೇಶ್ ಚಂದ್ರಶೇಖರ್ ಮುಂಗಡವಾಗಿ 15 ಲಕ್ಷ ರೂಪಾಯಿಗಳ ಹಣವನ್ನು ತಲುಪಿಸಿದ್ದರು. ಈ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ’ ಎಂದು ಇಡಿ ತಿಳಿಸಿದೆ.

ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​​ ಫರ್ನಾಂಡಿಸ್​ ಅವರು ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸುಕೇಶ್​ ಚಂದ್ರಶೇಖರ್ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ಈ ಮೊದಲೇ ಮುಟ್ಟುಗೋಲು ಹಾಕಿಕೊಂಡಿದ್ದರು.

ಇದನ್ನೂ ಓದಿ: ‘ಜಾಕ್ವೆಲಿನ್​ ಜತೆ ಸಂಬಂಧ ಇದ್ದಿದ್ದು ನಿಜ; ಆದರೆ ನಾನು ವಂಚಕ ಅಲ್ಲ’: ಸುಕೇಶ್​ ಚಂದ್ರಶೇಖರ್​ ಹೊಸ ಪುರಾಣ

ಸುಕೇಶ್​ ಚಂದ್ರಶೇಖರ್ ಜತೆಗಿನ ಜಾಕ್ವೆಲಿನ್ ಹೊಸ ಫೋಟೋ ವೈರಲ್​; ಕತ್ತಿನ ಮೇಲಿರುವ ಅಚ್ಚೇನು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್