AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಕ್ವೆಲಿನ್ ಫರ್ನಾಂಡಿಸ್​ಗೆ ಶಾಕ್; 7 ಕೋಟಿ ರೂಪಾಯಿ ಆಸ್ತಿ ಮುಟ್ಟುಗೋಲು ಹಾಕಿದ ಜಾರಿ ನಿರ್ದೇಶನಾಲಯ

ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​​ ಫರ್ನಾಂಡಿಸ್​ ಅವರು ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಜಾಕ್ವೆಲಿನ್ ಫರ್ನಾಂಡಿಸ್​ಗೆ ಶಾಕ್; 7 ಕೋಟಿ ರೂಪಾಯಿ ಆಸ್ತಿ ಮುಟ್ಟುಗೋಲು ಹಾಕಿದ ಜಾರಿ ನಿರ್ದೇಶನಾಲಯ
ಜಾಕ್ವೆಲಿನ್
TV9 Web
| Edited By: |

Updated on: Apr 30, 2022 | 6:07 PM

Share

ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ (Jacqueline Fernandez) ಸಾಕಷ್ಟು ಸಂಕಷ್ಟ ಎದುರಾಗುತ್ತಿದೆ. ಅವರ ವರ್ಚಸ್ಸಿಗೆ ಹಾನಿ ಆಗುವಂತಹ ಘಟನೆ ನಡೆಯುತ್ತಿದೆ. ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದ ಕಿಂಗ್​ಪಿನ್​ ಸುಕೇಶ್​ ಚಂದ್ರಶೇಖರ್ (Sukesh Chandrashekhar)​ ಜತೆ ಜಾಕ್ವೆಲಿನ್​ಗೆ ನಂಟು ಇದೆ ಎನ್ನಲಾಗುತ್ತಿದೆ. ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಪ್ರಕರಣದಲ್ಲಿ ತನಿಖೆ ಪ್ರಗತಿಯಲ್ಲಿದ್ದು, ಜಾಕ್ವೆಲಿನ್​ಗೆ ಸಂಬಂಧಿಸಿದ 7.27 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಇದರಲ್ಲಿ ಎಫ್​ಡಿ ಹಣ ಕೂಡ ಸೇರಿದೆ.

‘ಅಕ್ರಮವಾಗಿ ಗಳಿಸಿದ ಹಣದಿಂದ ವಿವಿಧ ಉಡುಗೊರೆಗಳನ್ನು ಸುಕೇಶ್ ಚಂದ್ರಶೇಖರ್ ಅವರು ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ನೀಡಿರುವುದು ತನಿಖೆಯ ವೇಳೆ ಬಹಿರಂಗವಾಗಿದೆ. ಇದರ ಮೌಲ್ಯ 5.71 ಕೋಟಿ ರೂಪಾಯಿ ಆಗಿದೆ. ಸುಕೇಶ್ ಚಂದ್ರಶೇಖರ್ ಅವರು ತಮ್ಮ ಸಹವರ್ತಿ ಮತ್ತು ಈ ಪ್ರಕರಣದ ಆರೋಪಿ ಪಿಂಕಿ ಇರಾನಿ ಮೂಲಕ ಉಡುಗರೆಗಳನ್ನು ಜಾಕ್ವೆಲಿನ್​ಗೆ ತಲುಪಿಸಿದ್ದರು. ಈ ಉಡುಗೊರೆಗಳ ಜೊತೆಗೆ, ಸುಕೇಶ್ ಚಂದ್ರಶೇಖರ್ 1.32 ಕೋಟಿ (1,72,913 ಡಾಲರ್) ಹಾಗೂ 14 ಲಕ್ಷ  ರೂಪಾಯಿಯನ್ನು ಜಾಕ್ವೆಲಿನ್ ಅವರ ಕುಟುಂಬ ಸದಸ್ಯರಿಗೆ ಹವಾಲ ಮೂಲಕ ತಲುಪಿಸಿದ್ದರು’ ಎಂದು ಇಡಿ ಸ್ಟೇಟ್​ಮೆಂಟ್​ನಲ್ಲಿ ತಿಳಿಸಿದೆ.

‘ವೆಬ್-ಸರಣಿ ಪ್ರಾಜೆಕ್ಟ್‌ನ ಸ್ಕ್ರಿಪ್ಟ್ ಬರೆಯಲು ಜಾಕ್ವೆಲಿನ್ ಫರ್ನಾಂಡೀಸ್ ಪರವಾಗಿ ಸ್ಕ್ರಿಪ್ಟ್ ರೈಟರ್‌ಗೆ ಸುಕೇಶ್ ಚಂದ್ರಶೇಖರ್ ಮುಂಗಡವಾಗಿ 15 ಲಕ್ಷ ರೂಪಾಯಿಗಳ ಹಣವನ್ನು ತಲುಪಿಸಿದ್ದರು. ಈ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ’ ಎಂದು ಇಡಿ ತಿಳಿಸಿದೆ.

ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​​ ಫರ್ನಾಂಡಿಸ್​ ಅವರು ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸುಕೇಶ್​ ಚಂದ್ರಶೇಖರ್ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ಈ ಮೊದಲೇ ಮುಟ್ಟುಗೋಲು ಹಾಕಿಕೊಂಡಿದ್ದರು.

ಇದನ್ನೂ ಓದಿ: ‘ಜಾಕ್ವೆಲಿನ್​ ಜತೆ ಸಂಬಂಧ ಇದ್ದಿದ್ದು ನಿಜ; ಆದರೆ ನಾನು ವಂಚಕ ಅಲ್ಲ’: ಸುಕೇಶ್​ ಚಂದ್ರಶೇಖರ್​ ಹೊಸ ಪುರಾಣ

ಸುಕೇಶ್​ ಚಂದ್ರಶೇಖರ್ ಜತೆಗಿನ ಜಾಕ್ವೆಲಿನ್ ಹೊಸ ಫೋಟೋ ವೈರಲ್​; ಕತ್ತಿನ ಮೇಲಿರುವ ಅಚ್ಚೇನು?

Follow Us
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ