AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಕ್ವೆಲಿನ್ ಫರ್ನಾಂಡಿಸ್​ಗೆ ಶಾಕ್; 7 ಕೋಟಿ ರೂಪಾಯಿ ಆಸ್ತಿ ಮುಟ್ಟುಗೋಲು ಹಾಕಿದ ಜಾರಿ ನಿರ್ದೇಶನಾಲಯ

ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​​ ಫರ್ನಾಂಡಿಸ್​ ಅವರು ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಜಾಕ್ವೆಲಿನ್ ಫರ್ನಾಂಡಿಸ್​ಗೆ ಶಾಕ್; 7 ಕೋಟಿ ರೂಪಾಯಿ ಆಸ್ತಿ ಮುಟ್ಟುಗೋಲು ಹಾಕಿದ ಜಾರಿ ನಿರ್ದೇಶನಾಲಯ
ಜಾಕ್ವೆಲಿನ್
TV9 Web
| Edited By: |

Updated on: Apr 30, 2022 | 6:07 PM

Share

ನಟಿ ಜಾಕ್ವೆಲಿನ್​ ಫರ್ನಾಂಡಿಸ್​ಗೆ (Jacqueline Fernandez) ಸಾಕಷ್ಟು ಸಂಕಷ್ಟ ಎದುರಾಗುತ್ತಿದೆ. ಅವರ ವರ್ಚಸ್ಸಿಗೆ ಹಾನಿ ಆಗುವಂತಹ ಘಟನೆ ನಡೆಯುತ್ತಿದೆ. ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದ ಕಿಂಗ್​ಪಿನ್​ ಸುಕೇಶ್​ ಚಂದ್ರಶೇಖರ್ (Sukesh Chandrashekhar)​ ಜತೆ ಜಾಕ್ವೆಲಿನ್​ಗೆ ನಂಟು ಇದೆ ಎನ್ನಲಾಗುತ್ತಿದೆ. ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯ (Enforcement Directorate) ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಪ್ರಕರಣದಲ್ಲಿ ತನಿಖೆ ಪ್ರಗತಿಯಲ್ಲಿದ್ದು, ಜಾಕ್ವೆಲಿನ್​ಗೆ ಸಂಬಂಧಿಸಿದ 7.27 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಇದರಲ್ಲಿ ಎಫ್​ಡಿ ಹಣ ಕೂಡ ಸೇರಿದೆ.

‘ಅಕ್ರಮವಾಗಿ ಗಳಿಸಿದ ಹಣದಿಂದ ವಿವಿಧ ಉಡುಗೊರೆಗಳನ್ನು ಸುಕೇಶ್ ಚಂದ್ರಶೇಖರ್ ಅವರು ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ನೀಡಿರುವುದು ತನಿಖೆಯ ವೇಳೆ ಬಹಿರಂಗವಾಗಿದೆ. ಇದರ ಮೌಲ್ಯ 5.71 ಕೋಟಿ ರೂಪಾಯಿ ಆಗಿದೆ. ಸುಕೇಶ್ ಚಂದ್ರಶೇಖರ್ ಅವರು ತಮ್ಮ ಸಹವರ್ತಿ ಮತ್ತು ಈ ಪ್ರಕರಣದ ಆರೋಪಿ ಪಿಂಕಿ ಇರಾನಿ ಮೂಲಕ ಉಡುಗರೆಗಳನ್ನು ಜಾಕ್ವೆಲಿನ್​ಗೆ ತಲುಪಿಸಿದ್ದರು. ಈ ಉಡುಗೊರೆಗಳ ಜೊತೆಗೆ, ಸುಕೇಶ್ ಚಂದ್ರಶೇಖರ್ 1.32 ಕೋಟಿ (1,72,913 ಡಾಲರ್) ಹಾಗೂ 14 ಲಕ್ಷ  ರೂಪಾಯಿಯನ್ನು ಜಾಕ್ವೆಲಿನ್ ಅವರ ಕುಟುಂಬ ಸದಸ್ಯರಿಗೆ ಹವಾಲ ಮೂಲಕ ತಲುಪಿಸಿದ್ದರು’ ಎಂದು ಇಡಿ ಸ್ಟೇಟ್​ಮೆಂಟ್​ನಲ್ಲಿ ತಿಳಿಸಿದೆ.

‘ವೆಬ್-ಸರಣಿ ಪ್ರಾಜೆಕ್ಟ್‌ನ ಸ್ಕ್ರಿಪ್ಟ್ ಬರೆಯಲು ಜಾಕ್ವೆಲಿನ್ ಫರ್ನಾಂಡೀಸ್ ಪರವಾಗಿ ಸ್ಕ್ರಿಪ್ಟ್ ರೈಟರ್‌ಗೆ ಸುಕೇಶ್ ಚಂದ್ರಶೇಖರ್ ಮುಂಗಡವಾಗಿ 15 ಲಕ್ಷ ರೂಪಾಯಿಗಳ ಹಣವನ್ನು ತಲುಪಿಸಿದ್ದರು. ಈ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ’ ಎಂದು ಇಡಿ ತಿಳಿಸಿದೆ.

ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​​ ಫರ್ನಾಂಡಿಸ್​ ಅವರು ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಸುಕೇಶ್​ ಚಂದ್ರಶೇಖರ್ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ಈ ಮೊದಲೇ ಮುಟ್ಟುಗೋಲು ಹಾಕಿಕೊಂಡಿದ್ದರು.

ಇದನ್ನೂ ಓದಿ: ‘ಜಾಕ್ವೆಲಿನ್​ ಜತೆ ಸಂಬಂಧ ಇದ್ದಿದ್ದು ನಿಜ; ಆದರೆ ನಾನು ವಂಚಕ ಅಲ್ಲ’: ಸುಕೇಶ್​ ಚಂದ್ರಶೇಖರ್​ ಹೊಸ ಪುರಾಣ

ಸುಕೇಶ್​ ಚಂದ್ರಶೇಖರ್ ಜತೆಗಿನ ಜಾಕ್ವೆಲಿನ್ ಹೊಸ ಫೋಟೋ ವೈರಲ್​; ಕತ್ತಿನ ಮೇಲಿರುವ ಅಚ್ಚೇನು?

Follow Us
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ