AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacqueline Fernandez: ನಟಿ ಜಾಕ್ವೆಲಿನ್​ ತಾಯಿ ಕಿಮ್ ಫೆರ್ನಾಂಡಿಸ್​ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

Kim Fernandez: ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಇತ್ತೀಚೆಗೆ ವೈಯಕ್ತಿಕ ಕಾರಣಗಳಿಗಾಗಿ ಹೆಚ್ಚು ಸುದ್ದಿಯಲ್ಲಿದ್ದಾರೆ. ಈ ಘಟನೆಗಳ ಬೆನ್ನಲ್ಲೇ ನಟಿಗೆ ಮತ್ತೊಂದು ಆಘಾತ ಎದುರಾಗಿದ್ದು, ಅವರ ತಾಯಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Jacqueline Fernandez: ನಟಿ ಜಾಕ್ವೆಲಿನ್​ ತಾಯಿ ಕಿಮ್ ಫೆರ್ನಾಂಡಿಸ್​ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
ಜಾಕ್ವೆಲಿನ್ ಫೆರ್ನಾಂಡಿಸ್ ತಮ್ಮ ತಾಯಿ ಕಿಮ್ ಫೆರ್ನಾಂಡಿಸ್ ಅವರೊಂದಿಗೆ
TV9 Web
| Edited By: |

Updated on:Jan 04, 2022 | 3:49 PM

Share

ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ (Jacqueline Fernandez) ಇತ್ತೀಚೆಗೆ ವೈಯಕ್ತಿಕ ಜೀವನದ ಹಲವು ಘಟನೆಗಳಿಂದ ಆಘಾತ ಎದುರಿಸಿದ್ದಾರೆ. ಇದೀಗ ಜಾಕ್ವೆಲಿನ್​ಗೆ ಮತ್ತೊಂದು ಆಘಾತ ಎದುರಾಗಿದೆ. ನಟಿಯ ತಾಯಿ ಕಿಮ್ ಫೆರ್ನಾಂಡಿಸ್ (Kim Fernandez) ಅವರಿಗೆ ಹೃದಯಾಘಾತವಾಗಿದೆ. ಖಾಸಗಿ ಮಾಧ್ಯಮವು ನಟಿಯ ಆಪ್ತಮೂಲಗಳನ್ನು ಉಲ್ಲೇಖಿಸಿ ಜಾಕ್ವೆಲಿನ್ ತಾಯಿಯ ಆರೋಗ್ಯದ ಕುರಿತು ಮಾಹಿತಿ ನೀಡಿದೆ. ಕಿಮ್ ಅವರು ಬಹ್ರೈನ್​ನಲ್ಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಕಳೆದ ಕೆಲವು ಸಮಯದಿಂದ ಜೆಕ್ವೆಲಿನ್ ಫೆರ್ನಾಂಡಿಸ್ ಪೋಷಕರು ಬಹ್ರೈನ್​ನಲ್ಲಿ ನೆಲೆಸಿದ್ದಾರೆ. ಪ್ರಸ್ತುತ ಕಿಮ್ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ಕೆಲವು ಸಮಯದಿಂದ ಸುದ್ದಿಯಲ್ಲಿರುವ ವಿಕ್ರಾಂತ್ ರೋಣ ಬೆಡಗಿ ಜಾಕ್ವೆಲಿನ್: ಜಾಕ್ವೆಲಿನ್ ಬಾಲಿವುಡ್​ನಲ್ಲಿ ಹಲವು ಹಿಟ್ ಚಿತ್ರಗಳನ್ನು ಕೊಟ್ಟವರು. ಇತ್ತೀಚೆಗೆ ಅವರು ‘ವಿಕ್ರಾಂತ್ ರೋಣ’ದ ಮೂಲಕ ಸ್ಯಾಂಡಲ್​ವುಡ್​ಗೂ ಕಾಲಿಟ್ಟಿದ್ದರು. ಗಡಂಗ್ ರಕ್ಕಮ್ಮನಾಗಿ ಕಾಣಿಸಿಕೊಂಡಿದ್ದ ಅವರ ಚಿತ್ರಗಳು ವೈರಲ್ ಆಗಿದ್ದವು. ಅಭಿಮಾನಿಗಳು ಅವರ ವಿಭಿನ್ನ ಪಾತ್ರವನ್ನು ಕಣ್ತುಂಬಿಕೊಳ್ಳಲು ಎದುರು ನೋಡುತ್ತಿದ್ದರು. ಬಾಲಿವುಡ್​ನಲ್ಲೂ ಬ್ಯುಸಿಯಿದ್ದ ಜಾಕ್ವೆಲಿನ್ ಅವರ ‘ಭೂತ್ ಪೊಲೀಸ್ 2’ ಇತ್ತೀಚೆಗೆ ತೆರೆಕಂಡಿತ್ತು.

ಆದರೆ ಈಗ ನಟಿಯ ಹೆಸರು ವಂಚಕ ಸುಕೇಶ್ ಚಂದ್ರಶೇಖರ್ ಜತೆ ಕೇಳಿಬಂದ ನಂತರ ಸಿನಿಮಾ ಹೊರತಾದ ವಿಚಾರಗಳಿಗೆ ಸುದ್ದಿಯಲ್ಲಿದ್ದಾರೆ. ಸುಕೇಶ್ ನೀಡಿದ್ದ ಉಡುಗೊರೆಗಳು, ವಿವಿಧ ಪ್ರಾಣಿಗಳು, ಐಷಾರಾಮಿ ಕಾರುಗಳು ಸೇರಿದಂತೆ ಒಂದೊಂದೇ ವಿಚಾರ ಹೊರಬಂದಂತೆ ಜಾಕ್ವೆಲಿನ್​ಗೆ ಸಂಕಷ್ಟ ಜೋರಾಗಿತ್ತು. ಈ ಕುರಿತು ‘ಇಡಿ’ ಕೂಡ ತನ್ನ ವರದಿಯಲ್ಲಿ ಜಾಕ್ವೆಲಿನ್ ಹೇಳಿಕೆಗಳನ್ನು ಉಲ್ಲೇಖಿಸಿತ್ತು.

ಇದನ್ನೂ ಓದಿ:

Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ ‘ನವನಕ್ಷತ್ರ ಸನ್ಮಾನ 2021’ ಪ್ರಶಸ್ತಿ

GGVV: ರಾಜ್​ ಶೆಟ್ಟಿಗೆ ಶಿವಣ್ಣ ಸರ್ಪ್ರೈಸ್ ಫೋನ್ ಕಾಲ್; ಶಿವ- ಶಿವ ಮಾತುಕತೆಯಲ್ಲಿ ಹೊರಬಿತ್ತು ಸಂತಸದ ವಿಚಾರ!

Published On - 3:46 pm, Tue, 4 January 22

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?