ಸುಕೇಶ್​ ಚಂದ್ರಶೇಖರ್ ಜತೆಗಿನ ಜಾಕ್ವೆಲಿನ್ ಹೊಸ ಫೋಟೋ ವೈರಲ್​; ಕತ್ತಿನ ಮೇಲಿರುವ ಅಚ್ಚೇನು?

ಜಾಕ್ವೆಲಿನ್ ಫರ್ನಾಂಡಿಸ್​ ಮತ್ತು ಸುಕೇಶ್ ಚಂದ್ರಶೇಖರ್ ಇಬ್ಬರ ನಡುವಿನ ಹೊಸ ರೋಮ್ಯಾಂಟಿಕ್ ಪೋಟೋ ಬಿಡುಗಡೆ ಆಗಿದೆ. ಜಾಕ್ವೆಲಿನ್​ಗೆ ಸುಕೇಶ್​ ಕಿಸ್​ ಮಾಡುತ್ತಿದ್ದಾರೆ. ಜಾಕ್ವೆಲಿನ್​ ಕತ್ತಿನಲ್ಲಿ ಒಂದು ಕಲೆ ಕಂಡಿದೆ.

ಸುಕೇಶ್​ ಚಂದ್ರಶೇಖರ್ ಜತೆಗಿನ ಜಾಕ್ವೆಲಿನ್ ಹೊಸ ಫೋಟೋ ವೈರಲ್​; ಕತ್ತಿನ ಮೇಲಿರುವ ಅಚ್ಚೇನು?
ಸುಕೇಶ್​ ಚಂದ್ರಶೇಖರ್​. ​ಜಾಕ್ವೆಲಿನ್​ ಫರ್ನಾಂಡಿಸ್
Follow us
| Updated By: ರಾಜೇಶ್ ದುಗ್ಗುಮನೆ

Updated on: Jan 08, 2022 | 6:13 PM

ಉದ್ಯಮಿಗಳಿಗೆ 200 ಕೋಟಿ ರೂಪಾಯಿ ವಂಚನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರಕರಣದ ಕಿಂಗ್​ಪಿನ್​ ಸುಕೇಶ್​ ಚಂದ್ರಶೇಖರ್ ಜತೆ ಅವರು ಲಿಂಕ್ ಹೊಂದಿದ್ದರು ಎನ್ನಲಾಗಿದೆ. ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್​ ಚಂದ್ರಶೇಖರ್​ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್​ ಫರ್ನಾಂಡಿಸ್​ ​ಮೇಲೂ ಅನುಮಾನ ಮೂಡಿದೆ. ಇತ್ತೀಚೆಗೆ ಇಬ್ಬರೂ ಆಪ್ತವಾಗಿದ್ದ ಫೋಟೋ ವೈರಲ್​ ಆಗಿತ್ತು. ಈಗ ಮತ್ತೊಂದು ಹೊಸ ಫೋಟೋ ಹೊರಬಿದ್ದಿದೆ.

ಮುಖ್ಯ ಆರೋಪಿ ಸುಕೇಶ್​ ಚಂದ್ರಶೇಖರ್​ ಜತೆ ​ಜಾಕ್ವೆಲಿನ್​ ಫರ್ನಾಂಡಿಸ್ ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​ ​ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಇದಕ್ಕೆ ಸಂಬಂಧಿಸಿ ಅವರು ಹಲವು ಬಾರಿ ವಿಚಾರಣೆ ಎದುರಿಸಿದ್ದಾರೆ.

ಜಾಕ್ವೆಲಿನ್ ಫರ್ನಾಂಡಿಸ್​ ಮತ್ತು ಸುಕೇಶ್ ಚಂದ್ರಶೇಖರ್ ಇಬ್ಬರ ನಡುವಿನ ಹೊಸ ರೊಮ್ಯಾಂಟಿಕ್ ಪೋಟೋ ಬಿಡುಗಡೆ ಆಗಿದೆ. ಜಾಕ್ವೆಲಿನ್​ಗೆ ಸುಕೇಶ್​ ಕಿಸ್​ ಮಾಡುತ್ತಿದ್ದಾರೆ. ಜಾಕ್ವೆಲಿನ್​ ಕತ್ತಿನಲ್ಲಿ ಒಂದು ಕಲೆ ಕಂಡಿದೆ. ಸುಕೇಶ್​ ಅವರೇ ಈ ಕಲೆ ಮಾಡಿದ್ದಾರೆ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಈ ಫೋಟೋ ತೆಗೆಯಲಾಗಿದೆ ಎನ್ನಲಾಗಿದೆ.

ದೆಹಲಿ ಜೈಲಿನಲ್ಲಿ ಸುಕೇಶ್ ಚಂದ್ರಶೇಖರ್ ಇದ್ದಾರೆ. ಈತ ದೆಹಲಿ ಜೈಲಿನಲ್ಲಿ ಇದ್ದುಕೊಂಡೇ ಉದ್ಯಮಿಗಳ ಪತ್ನಿಯರಿಗೆ ಕಾಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದರು ಎಂದು ವರದಿ ಆಗಿದೆ. ಈ ಮೊದಲು ತಮಿಳುನಾಡಿನ ಟಿಟಿವಿ ದಿನಕರನ್​​ಗೆ ಎಐಎಡಿಎಂಕೆ ಪಕ್ಷದ ಚಿಹ್ನೆ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚನೆ ಮಾಡಿದ್ದ ಬಗ್ಗೆ ದೂರು ದಾಖಲಾಗಿದೆ. ಇವರ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದರು.

ಇದನ್ನೂ ಓದಿ: ಜಾಕ್ವೆಲಿನ್​ಗೆ ನೀಡಿದ ಉಡುಗೊರೆ ಲಿಸ್ಟ್​ ತೆಗೆದಿಟ್ಟ ಸುಕೇಶ್​ ಚಂದ್ರಶೇಖರ್; ಅಬ್ಬಬ್ಬಾ ಇಷ್ಟೊಂದಾ?

‘ಜಾಕ್ವೆಲಿನ್​ ಜತೆ ಸಂಬಂಧ ಇದ್ದಿದ್ದು ನಿಜ; ಆದರೆ ನಾನು ವಂಚಕ ಅಲ್ಲ’: ಸುಕೇಶ್​ ಚಂದ್ರಶೇಖರ್​ ಹೊಸ ಪುರಾಣ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ