AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಕೇಶ್​ ಚಂದ್ರಶೇಖರ್​ ವಿರುದ್ಧವೇ ತಿರುಗಿಬಿದ್ದ ಜಾಕ್ವೆಲಿನ್​ ಫರ್ನಾಂಡಿಸ್​; ದೂರು ದಾಖಲು

ಈ ಮೊದಲು ಜಾಕ್ವೆಲಿನ್​ ಫರ್ನಾಂಡಿಸ್​ಗೆ ಸುಕೇಶ್​ ಚಂದ್ರಶೇಖರ್​ ಕೇವಲ ಪ್ರೇಮಪತ್ರ ಬರೆಯುತ್ತಿದ್ದ. ಹಾಗಾಗಿ ಆತನ ವಿರುದ್ಧ ಜಾಕ್ವೆಲಿನ್​ ಫರ್ನಾಂಡಿಸ್​ ಸಿಟ್ಟಾಗಿದ್ದರು. ನಂತರ ಸುಕೇಶ್​ ಚಂದ್ರಶೇಖರ್​ಗೂ ಕೋಪ ಬಂತು. ಈವರೆಗೂ ಮುಚ್ಚಿಟ್ಟಿದ್ದ ಸತ್ಯವನ್ನು ಬಹಿರಂಗ ಮಾಡುವುದಾಗಿ ಆತ ಎಚ್ಚರಿಕೆ ನೀಡಿದ್ದ. ಆತನಿಂದ ನಟಿಗೆ ಕಿರಿಕಿರಿ ಆಗುತ್ತಿದೆ. ಹಾಗಾಗಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ಸುಕೇಶ್​ ಚಂದ್ರಶೇಖರ್​ ವಿರುದ್ಧವೇ ತಿರುಗಿಬಿದ್ದ ಜಾಕ್ವೆಲಿನ್​ ಫರ್ನಾಂಡಿಸ್​; ದೂರು ದಾಖಲು
ಜಾಕ್ವೆಲಿನ್​ ಫರ್ನಾಂಡಿಸ್​, ಸುಕೇಶ್​ ಚಂದ್ರಶೇಖರ್​
ಮದನ್​ ಕುಮಾರ್​
|

Updated on: Feb 13, 2024 | 11:16 AM

Share

ಬಾಲಿವುಡ್​ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಅವರು ಸುಕೇಶ್​ ಚಂದ್ರಶೇಖರ್​ ಜೊತೆ ಸ್ನೇಹ ಬೆಳೆಸಿದ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಕೋಟಿ ರೂಪಾಯಿ ವಂಚನೆ ಕೇಸ್​ನಲ್ಲಿ ಸುಕೇಶ್​ ಜೈಲು ಪಾಲಾಗಿದ್ದಾನೆ. ಅಲ್ಲಿಂದಲೇ ಆತ ಪತ್ರಗಳನ್ನು ಬರೆಯುವ ಮೂಲಕ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಕಾಟ ಕೊಡುತ್ತಿದ್ದಾನೆ. ಆತನ ವರ್ತನೆಯಿಂದ ಜಾಕ್ವೆಲಿನ್​ ಫರ್ನಾಂಡಿಸ್​ ಬೇಸತ್ತಿದ್ದಾರೆ. ಸುಕೇಶ್​ (Sukesh Chandrasekhar) ವಿರುದ್ಧ ಅವರೀಗ ಗರಂ ಆಗಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ. ಸುಕೇಶ್​ನಿಂದ ತಮಗೆ ಬೆದರಿಕೆ ಇದೆ. ಹಾಗಾಗಿ ರಕ್ಷಣೆ ನೀಡಬೇಕು ಎಂದು ಜಾಕ್ವೆಲಿನ್​ ಫರ್ನಾಂಡಿಸ್​ ಅವರು ದೆಹಲಿ ಪೊಲೀಸ್​ ಕಮಿಷನರ್​ಗೆ ಮನವಿ ಸಲ್ಲಿಸಿದ್ದಾರೆ.

ಕ್ರೈಂ ಬ್ರ್ಯಾಂಚ್​​ನ ಸ್ಪೆಷಲ್​ ಪೊಲೀಸ್​ ಕಮಿಷನರ್​ಗೂ ಜಾಕ್ವೆಲಿನ್​ ಅವರು ಪತ್ರ ಬರೆದಿದ್ದಾರೆ. ತಮ್ಮ ಸುರಕ್ಷತೆಗೆ ಅಪಾಯ ಎದುರಾಗಿದೆ. ಆದ್ದರಿಂದ ಪೊಲೀಸರು ಕೂಡಲೇ ಈ ವಿಚಾರದ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಶೇಷ ತಂಡ ರಚಿಸಿ, ವಿಚಾರಣೆ ನಡೆಸುವಂತೆ ಸೂಚಿಸಲಾಗಿದೆ ಎಂದು ವರದಿ ಆಗಿದೆ.

ಇದನ್ನೂ ಓದಿ: 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ತಮ್ಮ ಹೆಸರು ಕೈ ಬಿಡುವಂತೆ ಕೋರಿ ಕೋರ್ಟ್​ಗೆ ಜಾಕ್ವೆಲಿನ್ ಅರ್ಜಿ

ಜಾಕ್ವೆಲಿನ್​ ಫರ್ನಾಂಡಿಸ್​ ಅವರು ಸುಕೇಶ್​ ಚಂದ್ರಶೇಖರ್​ನಿಂದ ಅನೇಕ ದುಬಾರಿ ಉಡುಗೊರೆಗಳನ್ನು ಸ್ವೀಕರಿಸಿದ್ದರು ಎಂಬ ಆರೋಪ ಇದೆ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಕೂಡ ಹೇಳಲಾಗಿದೆ. ಅದಕ್ಕೆ ಸಾಕ್ಷಿ ಎಂಬಂತೆ ಜಾಕ್ವೆಲಿನ್​ ಫರ್ನಾಂಡಿಸ್​ ಮತ್ತು ಸುಕೇಶ್​ ಚಂದ್ರಶೇಖರ್​ ಬಹಳ ಆಪ್ತವಾಗಿರುವ ಫೋಟೋಗಳು ವೈರಲ್​ ಆಗಿವೆ. ಅಕ್ರಮ ಹಣ ವರ್ಗಾವಣೆ ಕೇಸ್​ನ ಚಾರ್ಜ್​​ಶೀಟ್​ನಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರ ಹೆಸರು ಸಹ ಸೇರಿದೆ. ಆದರೆ ತಮ್ಮ ಹೆಸರನ್ನು ಕೈ ಬಿಡುವಂತೆ ಅವರು ಈಗಾಗಲೇ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಜೈಲಿನಿಂದ ಮತ್ತೆ ಜಾಕ್ವೆಲಿನ್​ಗೆ ಲವ್ ಲೆಟರ್ ಬರೆದ ಸುಕೇಶ್ ಚಂದ್ರಶೇಖರ್

ಮೊದಲೆಲ್ಲ ಜಾಕ್ವೆಲಿನ್​ ಫರ್ನಾಂಡಿಸ್​ಗೆ ಸುಕೇಶ್​ ಚಂದ್ರಶೇಖರ್​ ಪ್ರೇಮ ಪತ್ರ ಬರೆಯುತ್ತಿದ್ದ. ಅದಕ್ಕೆ ಜಾಕ್ವೆಲಿನ್​ ಸಿಟ್ಟಾಗಿದ್ದರು. ಆ ಬಳಿಕ ಸುಕೇಶ್​ ಚಂದ್ರಶೇಖರ್​ಗೂ ಕೋಪ ಬಂತು. ಇಷ್ಟು ದಿನ ಮುಚ್ಚಿಟ್ಟಿದ್ದ ಎಲ್ಲ ಸತ್ಯವನ್ನು ಬಹಿರಂಗಪಡಿಸುವುದಾಗಿ ಆತ ಪತ್ರದ ಮೂಲಕ ಎಚ್ಚರಿಕೆ ನೀಡಿದ. ಒಟ್ಟಿನಲ್ಲಿ ಆತನಿಂದ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೆ ಕಿರಿಕಿರಿ ಆಗುತ್ತಿದೆ. ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿರುವ ಅವರು ಈ ಕಿರಿಕ್​ಗಳನ್ನು ಕೂಡ ನಿಭಾಯಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ