AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಕ್ವೆಲಿನ್​ ಫರ್ನಾಂಡಿಸ್​ಗೂ ವಂಚನೆ? 36 ಲಕ್ಷ ರೂ ಬೆಕ್ಕು, 52 ಲಕ್ಷ ರೂ. ಬೆಲೆಯ ಕುದುರೆ ಬಗ್ಗೆ ಬಾಯ್ಬಿಟ್ಟ ನಟಿ

ಅಚ್ಚರಿ ಎಂದರೆ ಜಾಕ್ವೆಲಿನ್​​ಗೆ ಪ್ರಕರಣದ ಕಿಂಗ್​ಪಿನ್ ಸುಕೇಶ್​ ಚಂದ್ರಶೇಖರ್ ವಂಚನೆ ಮಾಡಿದ್ದಾರಂತೆ! ಶ್ರೀಲಂಕಾ ಮೂಲದ ಈ ನಟಿಗೆ ಸುಕೇಶ್​ ಅವರಿಂದ ಮೋಸ ಆಗಿದೆ. ಈ ಬಗ್ಗೆ ಅವರು​ ಮಾಹಿತಿ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಜಾಕ್ವೆಲಿನ್​ ಫರ್ನಾಂಡಿಸ್​ಗೂ ವಂಚನೆ? 36 ಲಕ್ಷ ರೂ ಬೆಕ್ಕು, 52 ಲಕ್ಷ ರೂ. ಬೆಲೆಯ ಕುದುರೆ ಬಗ್ಗೆ ಬಾಯ್ಬಿಟ್ಟ ನಟಿ
ಜಾಕ್ವೆಲಿನ್ ಫರ್ನಾಂಡಿಸ್
TV9 Web
| Edited By: |

Updated on: Dec 18, 2021 | 2:50 PM

Share

ನಟಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಅವರಿಗೆ ಸಂಕಷ್ಟ ಹೆಚ್ಚುತ್ತಲೇ ಇದೆ. ಉದ್ಯಮಿಗಳಿಗೆ ಬಹುಕೋಟಿ ರೂಪಾಯಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಸುಕೇಶ್​ ಚಂದ್ರಶೇಖರ್​ (Sukesh Chandrasekhar) ಜತೆಗೆ ಜಾಕ್ವೆಲಿನ್​ ಹೆಸರು ತಳುಕು ಹಾಕಿಕೊಂಡಿದೆ. ಅವರಿಬ್ಬರ ನಡುವೆ ಲವ್ವಿಡವ್ವಿ ನಡೆದಿತ್ತು ಎಂಬುದಕ್ಕೆ ಹಲವು ಫೋಟೋಗಳು ಸಾಕ್ಷಿ ಒದಗಿಸುತ್ತಿವೆ. ಜಾರಿ ನಿರ್ದೇಶನಾಲಯ (Enforcement Directorate) ಈ ಪ್ರಕರಣದ ತನಿಖೆ ಮಾಡುತ್ತಿದ್ದು, ಬರೋಬ್ಬರಿ 7 ಸಾವಿರ ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದೆ. ವಿಚಾರಣೆ ವೇಳೆ ಜಾಕ್ವೆಲಿನ್​ ಹಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಅಚ್ಚರಿ ಎಂದರೆ ಜಾಕ್ವೆಲಿನ್​​ಗೆ ಪ್ರಕರಣದ ಕಿಂಗ್​ಪಿನ್ ಸುಕೇಶ್​ ಚಂದ್ರಶೇಖರ್ ವಂಚನೆ ಮಾಡಿದ್ದಾರಂತೆ! ಶ್ರೀಲಂಕಾ ಮೂಲದ ಈ ನಟಿಗೆ ಸುಕೇಶ್​ ಅವರಿಂದ ಮೋಸ ಆಗಿದೆ. ಈ ಬಗ್ಗೆ ಅವರು​ ಮಾಹಿತಿ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ‘ನನಗೆ ಸುಕೇಶ್​ ಯಾರು ಎಂಬುದು ಗೊತ್ತಿಲ್ಲ. ಏಕೆಂದರೆ ಈಗ ಬಂಧನಕ್ಕೆ ಒಳಗಾದ ವ್ಯಕ್ತಿ ನನ್ನ ಬಳಿ ಬಂದು ಶೇಖರ್​ ರತ್ನ ವೇಲಾ ಎಂದು ಪರಿಚಯಿಸಿಕೊಂಡಿದ್ದ. ಸನ್ ಟಿವಿ ನೆಟ್ವರ್ಕ್​​ನ ಮಾಲೀಕ ನಾನು ಎಂದು ಆತ ಪರಿಚಯಿಸಿಕೊಂಡಿದ್ದ. ತಮಿಳುನಾಡಿನ ಮಾಜಿ ಸಿಎಂ ಜೆ. ಜಯಲಿತಾ ಅವರ ಸಂಬಂಧಿ ಎಂದೂ ಹೇಳಿದ್ದ. ಆತ ನನ್ನ ದೊಡ್ಡ ಫ್ಯಾನ್​ ಎಂದು ಬಿಂಬಿಸಿಕೊಂಡಿದ್ದ. ಸನ್​ ಟಿವಿ ದಕ್ಷಿಣದಲ್ಲಿ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಅದರಲ್ಲಿ ನೀವು ನಟಿಸಬೇಕು ಎಂದು ಆತ ಹೇಳಿಕೊಂಡಿದ್ದ’ ಎಂದಿದ್ದಾರೆ ಅವರು.

‘ನನಗೆ ಫೆಬ್ರವರಿ ತಿಂಗಳಲ್ಲಿ ಶೇಖರ್​ (ಸುಕೇಶ್​) ಪರಿಚಯ ಆಗಿತ್ತು. ಸಿನಿಮಾದಲ್ಲಿ ನಟಿಸೋ ಆಫರ್​ಅನ್ನು ಆತ ಕೊಟ್ಟಿದ್ದ. ಆತನನ್ನು ನಾನು ನಂಬಿದ್ದೆ. ಇದರ ಜತೆಗೆ ನನ್ನ ಸೋದರ ಸಂಬಂಧಿಗೆ ಆತ ಸಾಲದ ರೂಪದಲ್ಲಿ ಹಣ ನೀಡಿದ್ದ’ ಎಂದು ಜಾಕ್ವೆಲಿನ್​ ಹೇಳಿಕೊಂಡಿದ್ದಾರೆ ಎಂದು ವರದಿ ಆಗಿದೆ. ಇದರ ಜತೆಗೆ ಬೆಕ್ಕು ಹಾಗೂ ಕುದುರೆಯನ್ನು ಗಿಫ್ಟ್​ ಆಗಿ ನೀಡಿದ್ದನ್ನು ಅವರು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಜಾಕ್ವೆಲಿನ್​ ಕಿಸ್ಸಿಂಗ್​ ಪ್ರಕರಣ: ನಟಿಯನ್ನು ದೂರ ಇಡೋಕೆ ಮುಂದಾದ ಸಲ್ಮಾನ್​ ಖಾನ್

Jacqueline Fernandez: ವಂಚನೆ ಪ್ರಕರಣದ ಕಿಂಗ್​ ಪಿನ್​ ಜತೆ ಕಿಸ್ಸಿಂಗ್​; ನಟಿ ಜಾಕ್ವೆಲಿನ್​ಗೆ ನೋಟಿಸ್

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ