AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಕ್ವೆಲಿನ್​ ಫರ್ನಾಂಡಿಸ್​ಗೂ ವಂಚನೆ? 36 ಲಕ್ಷ ರೂ ಬೆಕ್ಕು, 52 ಲಕ್ಷ ರೂ. ಬೆಲೆಯ ಕುದುರೆ ಬಗ್ಗೆ ಬಾಯ್ಬಿಟ್ಟ ನಟಿ

ಅಚ್ಚರಿ ಎಂದರೆ ಜಾಕ್ವೆಲಿನ್​​ಗೆ ಪ್ರಕರಣದ ಕಿಂಗ್​ಪಿನ್ ಸುಕೇಶ್​ ಚಂದ್ರಶೇಖರ್ ವಂಚನೆ ಮಾಡಿದ್ದಾರಂತೆ! ಶ್ರೀಲಂಕಾ ಮೂಲದ ಈ ನಟಿಗೆ ಸುಕೇಶ್​ ಅವರಿಂದ ಮೋಸ ಆಗಿದೆ. ಈ ಬಗ್ಗೆ ಅವರು​ ಮಾಹಿತಿ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಜಾಕ್ವೆಲಿನ್​ ಫರ್ನಾಂಡಿಸ್​ಗೂ ವಂಚನೆ? 36 ಲಕ್ಷ ರೂ ಬೆಕ್ಕು, 52 ಲಕ್ಷ ರೂ. ಬೆಲೆಯ ಕುದುರೆ ಬಗ್ಗೆ ಬಾಯ್ಬಿಟ್ಟ ನಟಿ
ಜಾಕ್ವೆಲಿನ್ ಫರ್ನಾಂಡಿಸ್
TV9 Web
| Edited By: |

Updated on: Dec 18, 2021 | 2:50 PM

Share

ನಟಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಅವರಿಗೆ ಸಂಕಷ್ಟ ಹೆಚ್ಚುತ್ತಲೇ ಇದೆ. ಉದ್ಯಮಿಗಳಿಗೆ ಬಹುಕೋಟಿ ರೂಪಾಯಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಸುಕೇಶ್​ ಚಂದ್ರಶೇಖರ್​ (Sukesh Chandrasekhar) ಜತೆಗೆ ಜಾಕ್ವೆಲಿನ್​ ಹೆಸರು ತಳುಕು ಹಾಕಿಕೊಂಡಿದೆ. ಅವರಿಬ್ಬರ ನಡುವೆ ಲವ್ವಿಡವ್ವಿ ನಡೆದಿತ್ತು ಎಂಬುದಕ್ಕೆ ಹಲವು ಫೋಟೋಗಳು ಸಾಕ್ಷಿ ಒದಗಿಸುತ್ತಿವೆ. ಜಾರಿ ನಿರ್ದೇಶನಾಲಯ (Enforcement Directorate) ಈ ಪ್ರಕರಣದ ತನಿಖೆ ಮಾಡುತ್ತಿದ್ದು, ಬರೋಬ್ಬರಿ 7 ಸಾವಿರ ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದೆ. ವಿಚಾರಣೆ ವೇಳೆ ಜಾಕ್ವೆಲಿನ್​ ಹಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಅಚ್ಚರಿ ಎಂದರೆ ಜಾಕ್ವೆಲಿನ್​​ಗೆ ಪ್ರಕರಣದ ಕಿಂಗ್​ಪಿನ್ ಸುಕೇಶ್​ ಚಂದ್ರಶೇಖರ್ ವಂಚನೆ ಮಾಡಿದ್ದಾರಂತೆ! ಶ್ರೀಲಂಕಾ ಮೂಲದ ಈ ನಟಿಗೆ ಸುಕೇಶ್​ ಅವರಿಂದ ಮೋಸ ಆಗಿದೆ. ಈ ಬಗ್ಗೆ ಅವರು​ ಮಾಹಿತಿ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ‘ನನಗೆ ಸುಕೇಶ್​ ಯಾರು ಎಂಬುದು ಗೊತ್ತಿಲ್ಲ. ಏಕೆಂದರೆ ಈಗ ಬಂಧನಕ್ಕೆ ಒಳಗಾದ ವ್ಯಕ್ತಿ ನನ್ನ ಬಳಿ ಬಂದು ಶೇಖರ್​ ರತ್ನ ವೇಲಾ ಎಂದು ಪರಿಚಯಿಸಿಕೊಂಡಿದ್ದ. ಸನ್ ಟಿವಿ ನೆಟ್ವರ್ಕ್​​ನ ಮಾಲೀಕ ನಾನು ಎಂದು ಆತ ಪರಿಚಯಿಸಿಕೊಂಡಿದ್ದ. ತಮಿಳುನಾಡಿನ ಮಾಜಿ ಸಿಎಂ ಜೆ. ಜಯಲಿತಾ ಅವರ ಸಂಬಂಧಿ ಎಂದೂ ಹೇಳಿದ್ದ. ಆತ ನನ್ನ ದೊಡ್ಡ ಫ್ಯಾನ್​ ಎಂದು ಬಿಂಬಿಸಿಕೊಂಡಿದ್ದ. ಸನ್​ ಟಿವಿ ದಕ್ಷಿಣದಲ್ಲಿ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಅದರಲ್ಲಿ ನೀವು ನಟಿಸಬೇಕು ಎಂದು ಆತ ಹೇಳಿಕೊಂಡಿದ್ದ’ ಎಂದಿದ್ದಾರೆ ಅವರು.

‘ನನಗೆ ಫೆಬ್ರವರಿ ತಿಂಗಳಲ್ಲಿ ಶೇಖರ್​ (ಸುಕೇಶ್​) ಪರಿಚಯ ಆಗಿತ್ತು. ಸಿನಿಮಾದಲ್ಲಿ ನಟಿಸೋ ಆಫರ್​ಅನ್ನು ಆತ ಕೊಟ್ಟಿದ್ದ. ಆತನನ್ನು ನಾನು ನಂಬಿದ್ದೆ. ಇದರ ಜತೆಗೆ ನನ್ನ ಸೋದರ ಸಂಬಂಧಿಗೆ ಆತ ಸಾಲದ ರೂಪದಲ್ಲಿ ಹಣ ನೀಡಿದ್ದ’ ಎಂದು ಜಾಕ್ವೆಲಿನ್​ ಹೇಳಿಕೊಂಡಿದ್ದಾರೆ ಎಂದು ವರದಿ ಆಗಿದೆ. ಇದರ ಜತೆಗೆ ಬೆಕ್ಕು ಹಾಗೂ ಕುದುರೆಯನ್ನು ಗಿಫ್ಟ್​ ಆಗಿ ನೀಡಿದ್ದನ್ನು ಅವರು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಜಾಕ್ವೆಲಿನ್​ ಕಿಸ್ಸಿಂಗ್​ ಪ್ರಕರಣ: ನಟಿಯನ್ನು ದೂರ ಇಡೋಕೆ ಮುಂದಾದ ಸಲ್ಮಾನ್​ ಖಾನ್

Jacqueline Fernandez: ವಂಚನೆ ಪ್ರಕರಣದ ಕಿಂಗ್​ ಪಿನ್​ ಜತೆ ಕಿಸ್ಸಿಂಗ್​; ನಟಿ ಜಾಕ್ವೆಲಿನ್​ಗೆ ನೋಟಿಸ್

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್