ಜಾಕ್ವೆಲಿನ್​ ಫರ್ನಾಂಡಿಸ್​ಗೂ ವಂಚನೆ? 36 ಲಕ್ಷ ರೂ ಬೆಕ್ಕು, 52 ಲಕ್ಷ ರೂ. ಬೆಲೆಯ ಕುದುರೆ ಬಗ್ಗೆ ಬಾಯ್ಬಿಟ್ಟ ನಟಿ

ಅಚ್ಚರಿ ಎಂದರೆ ಜಾಕ್ವೆಲಿನ್​​ಗೆ ಪ್ರಕರಣದ ಕಿಂಗ್​ಪಿನ್ ಸುಕೇಶ್​ ಚಂದ್ರಶೇಖರ್ ವಂಚನೆ ಮಾಡಿದ್ದಾರಂತೆ! ಶ್ರೀಲಂಕಾ ಮೂಲದ ಈ ನಟಿಗೆ ಸುಕೇಶ್​ ಅವರಿಂದ ಮೋಸ ಆಗಿದೆ. ಈ ಬಗ್ಗೆ ಅವರು​ ಮಾಹಿತಿ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಜಾಕ್ವೆಲಿನ್​ ಫರ್ನಾಂಡಿಸ್​ಗೂ ವಂಚನೆ? 36 ಲಕ್ಷ ರೂ ಬೆಕ್ಕು, 52 ಲಕ್ಷ ರೂ. ಬೆಲೆಯ ಕುದುರೆ ಬಗ್ಗೆ ಬಾಯ್ಬಿಟ್ಟ ನಟಿ
ಜಾಕ್ವೆಲಿನ್ ಫರ್ನಾಂಡಿಸ್
Follow us
| Updated By: ರಾಜೇಶ್ ದುಗ್ಗುಮನೆ

Updated on: Dec 18, 2021 | 2:50 PM

ನಟಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಅವರಿಗೆ ಸಂಕಷ್ಟ ಹೆಚ್ಚುತ್ತಲೇ ಇದೆ. ಉದ್ಯಮಿಗಳಿಗೆ ಬಹುಕೋಟಿ ರೂಪಾಯಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಸುಕೇಶ್​ ಚಂದ್ರಶೇಖರ್​ (Sukesh Chandrasekhar) ಜತೆಗೆ ಜಾಕ್ವೆಲಿನ್​ ಹೆಸರು ತಳುಕು ಹಾಕಿಕೊಂಡಿದೆ. ಅವರಿಬ್ಬರ ನಡುವೆ ಲವ್ವಿಡವ್ವಿ ನಡೆದಿತ್ತು ಎಂಬುದಕ್ಕೆ ಹಲವು ಫೋಟೋಗಳು ಸಾಕ್ಷಿ ಒದಗಿಸುತ್ತಿವೆ. ಜಾರಿ ನಿರ್ದೇಶನಾಲಯ (Enforcement Directorate) ಈ ಪ್ರಕರಣದ ತನಿಖೆ ಮಾಡುತ್ತಿದ್ದು, ಬರೋಬ್ಬರಿ 7 ಸಾವಿರ ಪುಟಗಳ ಚಾರ್ಜ್​ಶೀಟ್​ ಸಲ್ಲಿಕೆ ಮಾಡಿದೆ. ವಿಚಾರಣೆ ವೇಳೆ ಜಾಕ್ವೆಲಿನ್​ ಹಲವು ವಿಚಾರಗಳನ್ನು ಬಾಯ್ಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

ಅಚ್ಚರಿ ಎಂದರೆ ಜಾಕ್ವೆಲಿನ್​​ಗೆ ಪ್ರಕರಣದ ಕಿಂಗ್​ಪಿನ್ ಸುಕೇಶ್​ ಚಂದ್ರಶೇಖರ್ ವಂಚನೆ ಮಾಡಿದ್ದಾರಂತೆ! ಶ್ರೀಲಂಕಾ ಮೂಲದ ಈ ನಟಿಗೆ ಸುಕೇಶ್​ ಅವರಿಂದ ಮೋಸ ಆಗಿದೆ. ಈ ಬಗ್ಗೆ ಅವರು​ ಮಾಹಿತಿ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ‘ನನಗೆ ಸುಕೇಶ್​ ಯಾರು ಎಂಬುದು ಗೊತ್ತಿಲ್ಲ. ಏಕೆಂದರೆ ಈಗ ಬಂಧನಕ್ಕೆ ಒಳಗಾದ ವ್ಯಕ್ತಿ ನನ್ನ ಬಳಿ ಬಂದು ಶೇಖರ್​ ರತ್ನ ವೇಲಾ ಎಂದು ಪರಿಚಯಿಸಿಕೊಂಡಿದ್ದ. ಸನ್ ಟಿವಿ ನೆಟ್ವರ್ಕ್​​ನ ಮಾಲೀಕ ನಾನು ಎಂದು ಆತ ಪರಿಚಯಿಸಿಕೊಂಡಿದ್ದ. ತಮಿಳುನಾಡಿನ ಮಾಜಿ ಸಿಎಂ ಜೆ. ಜಯಲಿತಾ ಅವರ ಸಂಬಂಧಿ ಎಂದೂ ಹೇಳಿದ್ದ. ಆತ ನನ್ನ ದೊಡ್ಡ ಫ್ಯಾನ್​ ಎಂದು ಬಿಂಬಿಸಿಕೊಂಡಿದ್ದ. ಸನ್​ ಟಿವಿ ದಕ್ಷಿಣದಲ್ಲಿ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಅದರಲ್ಲಿ ನೀವು ನಟಿಸಬೇಕು ಎಂದು ಆತ ಹೇಳಿಕೊಂಡಿದ್ದ’ ಎಂದಿದ್ದಾರೆ ಅವರು.

‘ನನಗೆ ಫೆಬ್ರವರಿ ತಿಂಗಳಲ್ಲಿ ಶೇಖರ್​ (ಸುಕೇಶ್​) ಪರಿಚಯ ಆಗಿತ್ತು. ಸಿನಿಮಾದಲ್ಲಿ ನಟಿಸೋ ಆಫರ್​ಅನ್ನು ಆತ ಕೊಟ್ಟಿದ್ದ. ಆತನನ್ನು ನಾನು ನಂಬಿದ್ದೆ. ಇದರ ಜತೆಗೆ ನನ್ನ ಸೋದರ ಸಂಬಂಧಿಗೆ ಆತ ಸಾಲದ ರೂಪದಲ್ಲಿ ಹಣ ನೀಡಿದ್ದ’ ಎಂದು ಜಾಕ್ವೆಲಿನ್​ ಹೇಳಿಕೊಂಡಿದ್ದಾರೆ ಎಂದು ವರದಿ ಆಗಿದೆ. ಇದರ ಜತೆಗೆ ಬೆಕ್ಕು ಹಾಗೂ ಕುದುರೆಯನ್ನು ಗಿಫ್ಟ್​ ಆಗಿ ನೀಡಿದ್ದನ್ನು ಅವರು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಜಾಕ್ವೆಲಿನ್​ ಕಿಸ್ಸಿಂಗ್​ ಪ್ರಕರಣ: ನಟಿಯನ್ನು ದೂರ ಇಡೋಕೆ ಮುಂದಾದ ಸಲ್ಮಾನ್​ ಖಾನ್

Jacqueline Fernandez: ವಂಚನೆ ಪ್ರಕರಣದ ಕಿಂಗ್​ ಪಿನ್​ ಜತೆ ಕಿಸ್ಸಿಂಗ್​; ನಟಿ ಜಾಕ್ವೆಲಿನ್​ಗೆ ನೋಟಿಸ್

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ