AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ಕು ಬಾರಿ ವಿಚಾರಣೆಯಿಂದ ತಪ್ಪಿಸಿಕೊಂಡ ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್; ಮುಂದಿನ ಕ್ರಮ ಏನು?

ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್​ ಚಂದ್ರಶೇಖರ್​ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್​ ಮೇಲೂ ಅನುಮಾನ ಎದುರಾಗಿದೆ.

ನಾಲ್ಕು ಬಾರಿ ವಿಚಾರಣೆಯಿಂದ ತಪ್ಪಿಸಿಕೊಂಡ ‘ವಿಕ್ರಾಂತ್​ ರೋಣ’ ನಟಿ ಜಾಕ್ವೆಲಿನ್​ ಫರ್ನಾಂಡಿಸ್; ಮುಂದಿನ ಕ್ರಮ ಏನು?
ಜಾಕ್ವೆಲಿನ್ ಫರ್ನಾಂಡಿಸ್
ರಾಜೇಶ್ ದುಗ್ಗುಮನೆ
|

Updated on:Oct 18, 2021 | 5:31 PM

Share

ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿ ಅನೇಕ ನಟಿಯರ ಹೆಸರು ತಳುಕು ಹಾಕಿಕೊಳ್ಳುತ್ತಿದೆ. ಜನಪ್ರಿಯ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ ಅವರಿಗೂ ಈಗ ಸಂಕಷ್ಟ ಎದುರಾಗಿದೆ. ಬರೋಬ್ಬರಿ 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿದೆ. ಇದಕ್ಕೆ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ, ಸತತ ನಾಲ್ಕನೇ ಬಾರಿಗೆ ಅವರು ವಿಚಾರಣೆಯಿಂದ ತಪ್ಪಿಸಿಕೊಂಡಿದ್ದಾರೆ.

ಉದ್ಯಮಿಗಳಿಗೆ 200 ಕೋಟಿ ರೂ. ವಂಚಿಸಿದ ಆರೋಪದಲ್ಲಿ ಸುಕೇಶ್​ ಚಂದ್ರಶೇಖರ್​ ವಿಚಾರಣೆ ಎದುರಿಸುತ್ತಿದ್ದಾರೆ. ಅವರ ಜೊತೆ ಸಂಪರ್ಕದಲ್ಲಿ ಇದ್ದರು ಎಂಬ ಕಾರಣಕ್ಕೆ ಜಾಕ್ವೆಲಿನ್​ ಮೇಲೂ ಅನುಮಾನ ಎದುರಾಗಿದೆ.  ಶ್ರೀಲಂಕಾ ಮೂಲಕ ಜಾಕ್ವೆಲಿನ್​ ಅವರು ಬಾಲಿವುಡ್​ನಲ್ಲಿ ಭಾರಿ ಬೇಡಿಕೆಯ ನಟಿಯಾಗಿದ್ದಾರೆ. ಸಲ್ಮಾನ್​ ಖಾನ್​ ವಲಯದಲ್ಲಿ ಅವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ಕಿಚ್ಚ ಸುದೀಪ್​ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ಮೂಲಕ ಅವರು ಕನ್ನಡ ಚಿತ್ರರಂಗಕ್ಕೂ ಕಾಲಿಡುತ್ತಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈ ಹಿಂದೆ ಜಾಕ್ವೆಲಿನ್​ ಅವರನ್ನು 5 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದರು. ಇತ್ತೀಚೆಗೆ ಅನೇಕ ಬಾರಿಗೆ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ ಅವರು ಜಾರಿ ನಿರ್ದೇಶನಾಲಯದ ಕಚೇರಿಗೆ ಬಂದಿಲ್ಲ ಎಂಬುದು ತಿಳಿದುಬಂದಿದೆ. ಈ ಮೂಲಕ ಅವರು ನಾಲ್ಕು ಬಾರಿ ವಿಚಾರಣೆಯಿಂದ ತಪ್ಪಿಸಿಕೊಂಡಂತೆ ಆಗಿದೆ. ಅವರ ವಿರುದ್ಧ ಯಾವ ರೀತಿಯ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

ಮುಖ್ಯ ಆರೋಪಿ ಸುಕೇಶ್​ ಚಂದ್ರಶೇಖರ್​ ಮತ್ತು ಜಾಕ್ವೆಲಿನ್​​ ಫರ್ನಾಂಡಿಸ್​ ಅವರು ಹಲವು ಬಾರಿ ದೂರವಾಣಿ ಮೂಲಕ ಮಾತನಾಡಿರುವುದು ಅಧಿಕಾರಿಗಳಿಗೆ ತಿಳಿದುಬಂದಿದೆ. ಇಬ್ಬರ ನಡುವಿನ ವ್ಯವಹಾರ ಯಾವ ರೀತಿ ಇತ್ತು? 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜಾಕ್ವೆಲಿನ್​ ಕೈವಾಡ ಇದೆಯೋ ಇಲ್ಲವೋ ಎಂಬುದನ್ನು ಅಧಿಕಾರಿಗಳು ಪತ್ತೆ ಹಚ್ಚುತ್ತಿದ್ದಾರೆ. ಸುಕೇಶ್​ ಚಂದ್ರಶೇಖರ್ ಒಡೆತನದಲ್ಲಿ ಇದ್ದ ಚೆನ್ನೈನ ಬಂಗಲೆ, 82 ಲಕ್ಷ ರೂ. ಹಣ ಹಾಗೂ 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ದುಬೈನಲ್ಲಿ ಕಿಚ್ಚ; ಬುರ್ಜ್​ ಖಲೀಫಾ ಫೋಟೋ ಹಾಕಿ ‘ವಿಕ್ರಾಂತ್​ ರೋಣ’ ಟೈಟಲ್​ ಲಾಂಚ್​ ನೆನಪಿಸಿಕೊಂಡ ಸುದೀಪ್​

Published On - 5:31 pm, Mon, 18 October 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!