AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshay Kumar: ಆಗಸದಲ್ಲಿ ಹಾರಾಡುತ್ತಾ ಕೇಶ ವಿನ್ಯಾಸ ಮಾಡಿಕೊಳ್ಳುವುದು ಹೇಗೆ; ಜಾಕ್ವೆಲಿನ್ ಖತರ್ನಾಕ್ ಐಡಿಯಾ ನೋಡಿ

Jacqueline Fernandez: ‘ರಾಮ್​ ಸೇತು’ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲು ಅಕ್ಷಯ್ ಕುಮಾರ್ ಹಾಗೂ ಜಾಕ್ವೆಲಿನ್ ಫರ್ನಾಂಡಿಸ್ ಪ್ರಯಾಣ ಬೆಳೆಸಿದ್ದಾರೆ. ವಿಮಾನದಲ್ಲಿ ಈ ತಾರೆಯರು ಶೂಟ್ ಮಾಡಿದ ತಮಾಷೆಯ ವಿಡಿಯೋವೊಂದು ಈಗ ವೈರಲ್ ಆಗಿದೆ.

Akshay Kumar: ಆಗಸದಲ್ಲಿ ಹಾರಾಡುತ್ತಾ ಕೇಶ ವಿನ್ಯಾಸ ಮಾಡಿಕೊಳ್ಳುವುದು ಹೇಗೆ; ಜಾಕ್ವೆಲಿನ್ ಖತರ್ನಾಕ್ ಐಡಿಯಾ ನೋಡಿ
ಜಾಕ್ವೆಲಿನ್ ಫರ್ನಾಂಡಿಸ್
Follow us
TV9 Web
| Updated By: shivaprasad.hs

Updated on: Nov 16, 2021 | 4:17 PM

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸದ್ಯ ‘ರಾಮ್ ಸೇತು’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅಕ್ಷಯ್ ಕುಮಾರ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಈ ಚಿತ್ರ ಈಗಾಗಲೇ ಪೋಸ್ಟರ್ ಮೂಲಕ ಗಮನ ಸೆಳೆದಿದೆ. ಚಿತ್ರತಂಡ ಈಗಾಗಲೇ ಕೆಲವು ಭಾಗಗಳನ್ನು ಚಿತ್ರೀಕರಿಸಿದ್ದು, ಮುಂದಿನ ಹಂತದ ಚಿತ್ರಗಳನ್ನು ದಾಮನ್​ನಲ್ಲಿ ಚಿತ್ರೀಕರಿಸಲು ಮುಂದಾಗಿದೆ. ಈ ಮೊದಲು ಶ್ರೀಲಂಕಾದಲ್ಲಿ ಚಿತ್ರೀಕರಿಸುವ ಯೋಜನೆ ಹಾಕಿಕೊಂಡಿದ್ದ ಚಿತ್ರತಂಡಕ್ಕೆ, ಅನುಮತಿಯ ಸಮಸ್ಯೆಗಳು ಎದುರಾದ ನಂತರ ನಿರ್ಧಾರ ಬದಲಿಸಲಾಗಿದೆ. ಇಂದು (ಮಂಗಳವಾರ) ಜಾಕ್ವೆಲಿನ್ ಹಾಗೂ ಅಕ್ಷಯ್ ಕುಮಾರ್ ಚಿತ್ರೀಕರಣಕ್ಕೆಂದು ತೆರಳಿದ್ದಾರೆ. ಈ ಸಂದರ್ಭದಲ್ಲಿ ವಿಮಾನದಲ್ಲಿ ಕುಳಿತ ಅಕ್ಷಯ್ ಕುಮಾರ್, ಜಾಕ್ವೆಲಿನ್ ಅವರ ಮಜವಾದ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ‘ಆಗಸದಲ್ಲಿ ತೇಲುತ್ತಿರುವಾಗ ಹೇಗೆ ಕೂದಲನ್ನು ವಿನ್ಯಾಸ ಮಾಡಬೇಕು ಎಂಬ ಗೊಂದಲವಿದೆಯೇ? ಜಾಕ್ವೆಲಿನ್ ಜುಗಾಡು ಅವರನ್ನು ನೋಡಿ, ಕಲಿಯಿರಿ’ ಎಂದು ತಮಾಷೆಯಾಗಿ ಬರೆದು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

ಸದ್ಯ ಅಕ್ಷಯ್ ಕುಮಾರ್ ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ಜಾಕ್ವೆಲಿನ್ ಫೆರ್ನಾಂಡಿಸ್ ಅವರ ಖತರ್ನಾಕ್ ಐಡಿಯಾಕ್ಕೆ ನೆಟ್ಟಿಗರು ಮನದುಂಬಿ ನಕ್ಕಿದ್ದಾರೆ. ಈ ಕುರಿತು ಜಾಕ್ವೆಲಿನ್ ತಮ್ಮ ಸ್ಟೋರಿಯಲ್ಲಿ ಮತ್ತೊಂದು ವಿಡಿಯೋ ಹಂಚಿಕೊಂಡಿದ್ದು, ಅದರಲ್ಲಿ ಅಕ್ಷಯ್, ‘‘ನಾವು ಏನನ್ನು ಚಿತ್ರೀಕರಿಸಲಿದ್ದೇವೆ’’ ಎಂದು ಕೇಳಿದ್ದಾರೆ. ಇವುಗಳನ್ನು ನೋಡಿರುವ ಅಭಿಮಾನಿಗಳು, ಸಖತ್ ಎಂಜಾಯ್ ಮಾಡಿದ್ದು, ಸ್ಟಾರ್ ಕಲಾವಿದರ ತರಲೆಗೆ ಮಾರುಹೋಗಿದ್ದಾರೆ.

ಅಕ್ಷಯ್ ಕುಮಾರ್ ಹಂಚಿಕೊಂಡಿರುವ ವಿಡಿಯೋ ಇಲ್ಲಿದೆ:

View this post on Instagram

A post shared by Akshay Kumar (@akshaykumar)

‘ರಾಮ್ ಸೇತು’ ಚಿತ್ರದ ಕೆಲವು ಭಾಗಗಳನ್ನು ಈ ಹಿಂದೆ ಊಟಿಯಲ್ಲಿ ಚಿತ್ರೀಕರಿಸಲಾಗಿತ್ತು. ಅಭಿಷೇಕ್ ಶರ್ಮಾ ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು ಅರುಣ್ ಭಾಟಿಯಾ ಹಾಗೂ ವಿಕ್ರಮ್ ಮಲ್ಹೋತ್ರಾ ನಿರ್ಮಿಸುತ್ತಿದ್ದಾರೆ. 2022ರ ಅಕ್ಟೋಬರ್​ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎನ್ನಲಾಗಿದೆ. ಚಿತ್ರದಲ್ಲಿ ಅಕ್ಷಯ್ ಹಾಗೂ ಜಾಕ್ವೆಲಿನ್ ಅವರೊಂದಿಗೆ ನುಸ್ರತ್ ಭರೂಚಾ ಕಾಣಿಸಿಕೊಳ್ಳಲಿದ್ದಾರೆ.

ಅಕ್ಷಯ್ ಕುಮಾರ್ ನಟನೆಯ ‘ಸೂರ್ಯವಂಶಿ’ ಚಿತ್ರ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಬಾಕ್ಸಾಫೀಸ್​ನಲ್ಲಿ ಉತ್ತಮ ಗಳಿಕೆ ಮಾಡುತ್ತಿರುವ ಈ ಚಿತ್ರ ₹ 200 ಕೋಟಿ ಕ್ಲಬ್ ಸೇರಿದೆ. ಇನ್ನೂ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಒಟ್ಟಾರೆ ಉತ್ತಮ ಗಳಿಕೆ ಮಾಡಲಾಗಿದೆ. ಅಲ್ಲದೇ, ಒಟಿಟಿಗೂ ಭರ್ಜರಿ ಮೊತ್ತಕ್ಕೆ ಚಿತ್ರ ಸೇಲ್ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದನ್ನೂ ಓದಿ:

ಸೌಂದರ್ಯ ಮತ್ತು ದೇಹಸಿರಿಯ ಅಪರೂಪದ ಮಿಶ್ರಣ ಜಾಕ್ವೆಲಿನ್ ಫರ್ನಾಂಡಿಸ್​​ಗೆ ರೋಮಾನ್ಸ್ ಬಗ್ಗೆ ಯೋಚಿಸಲು ಪುರುಸೊತ್ತಿಲ್ಲ!

ರಸ್ತೆ ಅಪಘಾತದಲ್ಲಿ ಸುಶಾಂತ್​ ಕುಟುಂಬದ 6 ಮಂದಿ ನಿಧನ; ಇನ್ನೂ 4 ಜನರ ಸ್ಥಿತಿ ಗಂಭೀರ

ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ವಿಮಾನದ ಕರ್ಕಶ ಶಬ್ದ ಕೇಳಿ ಪತನ ನಿಶ್ಚಿತ ಅಂದುಕೊಂಡಿದ್ದೆ: ಮತ್ತೊಬ್ಬ ಮಹಿಳೆ
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಭಾರೀ ಮಳೆ: ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಕುಸಿಯುತ್ತಿರುವ ಗುಡ್ಡ!
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್