AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕಿನೇನಿ ನಾಗಾರ್ಜುನ ಚಿತ್ರದಿಂದ ಎರಡನೇ ಹೀರೋಯಿನ್​ ಔಟ್​; ಇದಕ್ಕಿದೆ ಮಹತ್ವದ ಕಾರಣ

ನಾಗಾರ್ಜುನ ‘ದಿ ಘೋಸ್ಟ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಆರಂಭದಲ್ಲಿ ನಾಯಕಿಯಾಗಿ ಕಾಜಲ್​ ಅಗರ್​​ವಾಲ್​​​ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು.

ಅಕ್ಕಿನೇನಿ ನಾಗಾರ್ಜುನ ಚಿತ್ರದಿಂದ ಎರಡನೇ ಹೀರೋಯಿನ್​ ಔಟ್​; ಇದಕ್ಕಿದೆ ಮಹತ್ವದ ಕಾರಣ
ನಾಗಾರ್ಜುನ
TV9 Web
| Edited By: |

Updated on: Jan 14, 2022 | 5:57 PM

Share

ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಅವರು ತಮ್ಮ ಸಿನಿಮಾದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಚಿತ್ರದ ನಟಿಯ ಆಯ್ಕೆ ಮಾಡೋದು ನಿರ್ದೇಶಕರೇ ಆದರೂ ಅಕ್ಕಿನೇನಿ ನಾಗಾರ್ಜುನ ಅವರ ಸಲಹೆ ಪಡೆಯುತ್ತಾರೆ. ಈಗ ನಾಗಾರ್ಜುನ ಅವರ ಸಲಹೆಯಂತೆ ಹೀರೋಯಿನ್​ ಒಬ್ಬರಿಗೆ ಚಿತ್ರದಿಂದ ಗೇಟ್​ಪಾಸ್​ ನೀಡಲಾಗಿದೆ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಹೀಗೆ ಒಂದೇ ಚಿತ್ರದಿಂದ ಹೊರ ನಡೆದ ಎರಡನೇ ಹೀರೋಯಿನ್​ ಇವರಾಗಿದ್ದಾರೆ. ಅಷ್ಟಕ್ಕೂ ಹೀಗೆ ಹೊರ ಹೋದ ಹೀರೋಯಿನ್​ ಯಾರು? ಜಾಕ್ವೆಲಿನ್​ ಫರ್ನಾಂಡಿಸ್ (Jacqueline Fernandez)​. ಯಾವುದು ಆ ಸಿನಿಮಾ? ‘ದಿ ಘೋಸ್ಟ್​’ (The Ghost).

ನಾಗಾರ್ಜುನ ‘ದಿ ಘೋಸ್ಟ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಆರಂಭದಲ್ಲಿ ನಾಯಕಿಯಾಗಿ ಕಾಜಲ್​ ಅಗರ್​​ವಾಲ್​​​ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಆದರೆ, ಅವರು ಪ್ರೆಗ್ನೆನ್ಸಿ ಕಾರಣ ನೀಡಿ ಸಿನಿಮಾದಿಂದ ಹೊರ ನಡೆದಿದ್ದಾರೆ. ಈ ಕಾರಣಕ್ಕೆ ಈಗ ಜಾಕ್ವೆಲಿನ್​ ಅವರನ್ನು ಚಿತ್ರತಂಡ ಆಯ್ಕೆ ಮಾಡಿಕೊಂಡಿತ್ತು. ಆದರೆ, 200 ಕೋಟಿ ರೂಪಾಯಿ ವಂಚನೆ ಪ್ರಕರಣದ ಕಿಂಗ್​ಪಿನ್​ ಜತೆ ಅವರಿಗೆ ನಂಟಿದೆ ಎನ್ನಲಾಗಿದೆ. ಇದರಿಂದ ಅವರ ಖ್ಯಾತಿಗೆ ಕಪ್ಪುಚುಕ್ಕೆ ಬಂದಿದೆ. ಇಂತಹ ಸಂದರ್ಭದಲ್ಲಿ ಅವರನ್ನು ಚಿತ್ರತಂಡಕ್ಕೆ ಆಯ್ಕೆ ಮಾಡಿಕೊಂಡರೆ ಸಿನಿಮಾಗೆ ಹಿನ್ನಡೆ ಆಗಬಹುದು ಎನ್ನುವ ಭಯ ಚಿತ್ರತಂಡವನ್ನು ಕಾಡಿದೆ. ಈ ಕಾರಣಕ್ಕೆ ಅವರನ್ನು ಸಿನಿಮಾದಿಂದ ಕೈಬಿಡಲಾಗಿದೆ ಎಂದು ತಿಳಿದು ಬಂದಿದೆ. ಇದಕ್ಕೆ ಅಕ್ಕಿನೇನಿ ನಾಗಾರ್ಜುನ ಕೂಡ ಸಮ್ಮತಿ ನೀಡಿದ್ದಾರೆ.

ಸದ್ಯ, ಈ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ಇಂಥ ಸಂದರ್ಭದಲ್ಲಿ ಅವರನ್ನು ಚಿತ್ರದಲ್ಲಿ ಮುಂದುವರಿಸಿದರೆ ಸಿನಿಮಾ ಮೈಲೇಜ್​ ಕಡಿಮೆ ಆಗಬಹುದು. ಇದು ಅವರನ್ನು ಚಿತ್ರತಂಡದಿಂದ ಹೊರಗಿಡಲು ಮುಖ್ಯಕಾರಣ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿಲ್ಲ.

ಜಾಕ್ವೆಲಿನ್​ ಅವರು ಬಾಲಿವುಡ್​ನಲ್ಲಿ ಸ್ಟಾರ್​ ನಟಿಯಾಗಿ ಮಿಂಚುತ್ತಿದ್ದಾರೆ. ಸಲ್ಮಾನ್​ ಖಾನ್​ ಬಳಗದಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ಶ್ರೀಲಂಕಾ ಮೂಲದ ಈ ಚೆಲುವೆಗೆ ಸುಕೇಶ್​ ಚಂದ್ರಶೇಖರ್​ ಜೊತೆಗಿನ ಸಹವಾಸವೇ ಮುಳುವಾಗಿದೆ. ಒಟ್ಟಾರೆ ಪ್ರಕರಣದಿಂದ ಅವರು ಮಾನಸಿಕವಾಗಿ ವಿಚಲಿತರಾಗಿದ್ದಾರೆ. ಹಾಗಾಗಿ ಅಧ್ಯಾತ್ಮಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಅವರು ಓದಲು ಪ್ರಾರಂಭಿಸಿದ್ದಾರೆ. ಧ್ಯಾನಕ್ಕೆ ಹೆಚ್ಚು ಸಮಯ ಮೀಸಲಿಡುತ್ತಿದ್ದಾರೆ. ಉಸಿರಾಟಕ್ಕೆ ಸಂಬಂಧಿಸಿದ ವ್ಯಾಯಾಮಗಳನ್ನು ಮಾಡುತ್ತಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಇದನ್ನೂ ಓದಿ: ಎಲ್ಲರ ಎದುರು ಸ್ವಾರ್ಥ ಮೆರೆದ ಅಕ್ಕಿನೇನಿ ನಾಗಾರ್ಜುನ; ಅಭಿಮಾನಿಗಳಿಂದ ಛೀಮಾರಿ

ಚಿತ್ರರಂಗದ ಅನಿಶ್ಚಿತತೆ ನಡುವೆ ಹೊಸ ಸಾಹಸಕ್ಕೆ ಮುಂದಾದ ಅಕ್ಕಿನೇನಿ ನಾಗಾರ್ಜುನ-ನಾಗ ಚೈತನ್ಯ

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?