AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kisi Ka Bhai Kisi Ki Jaan: ‘ವಯಸ್ಸಾದವರ ಮೇಲೆ ಸಲ್ಮಾನ್​ ಖಾನ್​ ಕೈ ಎತ್ತಲ್ಲ’: ಜಗಪತಿ ಬಾಬು

ಜಗಪತಿ ಬಾಬು ಅವರಿಗೆ ಈಗ 61 ವರ್ಷ ವಯಸ್ಸು. ವಿಲನ್​ ಪಾತ್ರ ಮಾಡಬೇಕೋ ಬೇಡವೋ ಎಂಬ ಬಗ್ಗೆ ಅವರಿಗೆ ಯಾವುದೇ ಗೊಂದಲ ಇಲ್ಲ.

Kisi Ka Bhai Kisi Ki Jaan: ‘ವಯಸ್ಸಾದವರ ಮೇಲೆ ಸಲ್ಮಾನ್​ ಖಾನ್​ ಕೈ ಎತ್ತಲ್ಲ’: ಜಗಪತಿ ಬಾಬು
ಸಲ್ಮಾನ್ ಖಾನ್, ಜಗಪತಿ ಬಾಬು
Follow us
ಮದನ್​ ಕುಮಾರ್​
|

Updated on:Apr 20, 2023 | 12:19 PM

ಭಾರತೀಯ ಚಿತ್ರರಂಗದಲ್ಲಿ ಸಲ್ಮಾನ್​ ಖಾನ್​ (Salman Khan) ಅವರು ಸೂಪರ್​ ಸ್ಟಾರ್​ ಆಗಿ ಮಿಂಚುತ್ತಿದ್ದಾರೆ. ದೂರದಿಂದ ನೋಡುವವರಿಗೆ ಸಲ್ಲು ವ್ಯಕ್ತಿತ್ವ ಯಾವ ರೀತಿ ಎಂಬುದು ತಿಳಿಯುವುದು ಕಷ್ಟ. ಆದರೆ ಹತ್ತಿರದಿಂದ ಒಡನಾಡಿದವರಿಗೆ ಅವರ ಸ್ವಭಾವದ ಪರಿಚಯ ಇರುತ್ತದೆ. ಬಹುಭಾಷಾ ನಟ ಜಗಪತಿ ಬಾಬು (Jagapathi Babu) ಅವರು ಈಗ ಸಲ್ಮಾನ್​ ಖಾನ್​ ಬಗ್ಗೆ ಮಾತನಾಡಿದ್ದಾರೆ. ಶೂಟಿಂಗ್​ ಸಂದರ್ಭದಲ್ಲಿ ಸಲ್ಲು ಹೇಗಿರುತ್ತಾರೆ ಎಂಬುದನ್ನು ಅವರು ವಿವರಿಸಿದ್ದಾರೆ. ‘ಹಿಂದುಸ್ತಾನ್​ ಟೈಮ್ಸ್​’ಗೆ ನೀಡಿದ ಸಂದರ್ಶನದಲ್ಲಿ ಅವರು ಈ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ (Kisi Ka Bhai Kisi Ki Jaan) ಸಿನಿಮಾದಲ್ಲಿ ಸಲ್ಮಾನ್​ ಖಾನ್​ ಮತ್ತು ಜಗಪತಿ ಬಾಬು ಅವರು ಜೊತೆಯಾಗಿ ನಟಿಸಿದ್ದಾರೆ. ಈ ಚಿತ್ರಕ್ಕೆ ಪೂಜಾ ಹೆಗ್ಡೆ ನಾಯಕಿ.

ಏಪ್ರಿಲ್​ 21ರಂದು ರಂಜಾನ್​ ಪ್ರಯುಕ್ತ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಜಗಪತಿ ಬಾಬು ಅವರು ವಿಲನ್​ ಪಾತ್ರ ಮಾಡಿದ್ದಾರೆ. ‘ಸಲ್ಮಾನ್​ ಖಾನ್​ ತುಂಬ ಸಿಂಪಲ್​ ಆಗಿ ನಡೆದುಕೊಳ್ಳುತ್ತಾರೆ. ಅವರಿದ್ದಲ್ಲಿ ನಿಮಗೆ ಭಯ ಆಗಲ್ಲ. ನಾವು ಒಂದು ಫೈಟಿಂಗ್​ ದೃಶ್ಯದಲ್ಲಿ ನಟಿಸಬೇಕಿತ್ತು. ಆದರೆ ಕೊವಿಡ್​ ಮತ್ತು ಡೆಂಗ್ಯು ಕಾರಣದಿಂದ ಸಾಧ್ಯವಾಗಲಿಲ್ಲ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Salman Khan: ಈದ್​ಗೆ ಸಲ್ಮಾನ್​ ಖಾನ್​ ಕಡೆಯಿಂದ ಮನರಂಜನೆಯ ರಸದೌತಣ; ಇಲ್ಲಿದೆ ನೋಡಿ ಸ್ಯಾಂಪಲ್​

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

ಜಗಪತಿ ಬಾಬು ಅವರಿಗೆ ಈಗ 61 ವರ್ಷ ವಯಸ್ಸು. ವಿಲನ್​ ಪಾತ್ರ ಮಾಡಬೇಕೋ ಬೇಡವೋ ಎಂಬ ಬಗ್ಗೆ ಅವರಿಗೆ ಯಾವುದೇ ಗೊಂದಲ ಇಲ್ಲ. ‘ನಾನು ಕೂದಲಿಗೆ ಬಣ್ಣ ಹಾಕಿಕೊಂಡು ಯಂಗ್​ ಆಗಿ ಕಾಣಿಸಲಿ ಎಂದು ಸಲ್ಮಾನ್​ ಖಾನ್​ ಬಯಸಿದ್ದರು. ಯಾಕೆಂದರೆ, ತಮಗಿಂತ ಹೆಚ್ಚು ವಯಸ್ಸಾದ ವ್ಯಕ್ತಿಗೆ ಹೊಡೆಯೋಕೆ ಆಗಲ್ಲ ಅಂತ ಅವರು ನನಗೆ ತಿಳಿಸಿದ್ದರು’ ಎಂದಿದ್ದಾರೆ ಜಗಪತಿ ಬಾಬು.

ಇದನ್ನೂ ಓದಿ: ಸಲ್ಮಾನ್​ ಖಾನ್​ ಪಂಚೆ ಧರಿಸಿ ಕುಣಿದಿದ್ದಕ್ಕೆ ಎದುರಾಯ್ತು ಕಿರಿಕ್​; ಸಿನಿಮಾ ಬ್ಯಾನ್​ ಮಾಡಲು ಒತ್ತಾಯ

ಪೂಜಾ ಹೆಗ್ಡೆ ಮತ್ತು ಜಗಪತಿ ಬಾಬು ನಡುವೆ ಉತ್ತಮ ಒಡನಾಟ ಇದೆ. ಪೂಜಾ ಹೆಗ್ಡೆ ಕಾರಣದಿಂದಲೇ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದಲ್ಲಿ ನಟಿಸುವ ಅವಕಾಶ ಜಗಪತಿ ಬಾಬು ಅವರಿಗೆ ಸಿಕ್ಕಿರಬಹುದೇ? ಈ ಪ್ರಶ್ನೆಗೂ ಅವರು ಉತ್ತರಿಸಿದ್ದಾರೆ. ‘ಪೂಜಾ ನನ್ನನ್ನು ರಾಕ್​ ಸ್ಟಾರ್​ ಎಂದು ಕರೆಯುತ್ತಾರೆ. ಅವರು ನನ್ನ ಹೆಸರು ಹೇಳಿರಬಹುದು. ಆದರೆ ಅವರು ಶಿಫಾರಸ್ಸು ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ನಾನು ಅವರ ಬಳಿ ಕೇಳಿಲ್ಲ. ಅವರು ಕೂಡ ಹೇಳಿಲ್ಲ’ ಎಂದು ಜಗಪತಿ ಬಾಬು ಹೇಳಿದ್ದಾರೆ. ಈ ಹಿಂದೆ ‘ರಾಧೆ ಶ್ಯಾಮ್​’ ಸಿನಿಮಾದಲ್ಲೂ ಜಗಪತಿ ಬಾಬು ಮತ್ತು ಪೂಜಾ ಹೆಗ್ಡೆ ಅವರು ನಟಿಸಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:19 pm, Thu, 20 April 23

ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಅಸಹನೆಯಿಂದ ಬಿಸಿನೀರು ಕೊಡುವಂತೆ ಅಂಗರಕ್ಷನಿಗೆ ಹೇಳಿದ ಮಲ್ಲಿಕಾರ್ಜುನ ಖರ್ಗೆ
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಸಿದ್ದರಾಮಯ್ಯ ಅಪ್ರಮಾಣಿಕ ಮುಖ್ಯಮಂತ್ರಿಯಾಗಿ ಉಳಿದುಬಿಡುತ್ತಾರೆ: ವಿಶ್ವನಾಥ್
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ