AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್ವಿ ಕಪೂರ್​ಗೆ ಒಟ್ಟೊಟ್ಟಿಗೆ ಸಿಕ್ತು ಮೂರು ದೊಡ್ಡ ಆಫರ್; ಇನ್ನಾದರೂ ಬದಲಾಗುತ್ತಾ ಅದೃಷ್ಟ?

ಜಾನ್ವಿ ಕಪೂರ್ ಸದ್ಯ ಜೂ. ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಏಪ್ರಿಲ್ 5ರಂದು ರಿಲೀಸ್ ಆಗುತ್ತಿದೆ. ದಕ್ಷಿಣ ಭಾರತದಲ್ಲಿ ಅವರು ನಟಿಸುತ್ತಿರುವ ಮೊದಲ ಸಿನಿಮಾ. ಇದರ ಜೊತೆಗೆ ಇನ್ನೂ ಮೂರು ಸಿನಿಮಾಗಳು ಅವರಿಗೆ ಸಿಕ್ಕಿವೆ.

ಜಾನ್ವಿ ಕಪೂರ್​ಗೆ ಒಟ್ಟೊಟ್ಟಿಗೆ ಸಿಕ್ತು ಮೂರು ದೊಡ್ಡ ಆಫರ್; ಇನ್ನಾದರೂ ಬದಲಾಗುತ್ತಾ ಅದೃಷ್ಟ?
ಜಾನ್ವಿ
ರಾಜೇಶ್ ದುಗ್ಗುಮನೆ
|

Updated on: Feb 09, 2024 | 8:45 AM

Share

ನಟಿ ಜಾನ್ವಿ ಕಪೂರ್ (Janhvi Kapoor) ಅವರು ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆಯೂರುವ ಕನಸು ಕಾಣುತ್ತಿದ್ದಾರೆ. ಅವರಿಗೆ ಮೊದಲ ಸಿನಿಮಾ ‘ದಡಕ್’ ಚಿತ್ರದಿಂದ ಗೆಲುವು ಸಿಕ್ಕಿತ್ತು. ಇದಾದ ಬಳಿಕ ಅವರಿಗೆ ಗೆಲುವಿನ ರುಚಿ ಸವಿಯೋಕೆ ಆಗಿಲ್ಲ. ಈ ವರ್ಷ ತಮ್ಮ ಅದೃಷ್ಟ ಬದಲಾಗಬಹುದು ಎಂಬ ಆಶಾಭಾವನೆಯಲ್ಲಿದ್ದಾರೆ. ಇದಕ್ಕೆ ಕಾರಣ ಅವರಿಗೆ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾಗಳು ಸಿಕ್ಕಿವೆ. ಎಲ್ಲವೂ ಸ್ಟಾರ್ ಹೀರೋಗಳ ಚಿತ್ರವೇ ಅನ್ನೋದು ವಿಶೇಷ. ಆ ಬಗ್ಗೆ ಇಲ್ಲಿದೆ ವಿವರ.

ಜಾನ್ವಿ ಕಪೂರ್ ಅವರು ಸದ್ಯ ಜೂನಿಯರ್​ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಏಪ್ರಿಲ್ 5ರಂದು ರಿಲೀಸ್ ಆಗೋ ಸಾಧ್ಯತೆ ಇದೆ. ದಕ್ಷಿಣ ಭಾರತದಲ್ಲಿ ಅವರು ನಟಿಸುತ್ತಿರುವ ಮೊದಲ ಸಿನಿಮಾ. ಇದಾದ ಬಳಿಕ ರಾಮ್ ಚರಣ್ ಮುಂದಿನ ಸಿನಿಮಾದಲ್ಲಿ ಜಾನ್ವಿ ನಟಿಸಲಿದ್ದಾರೆ ಎಂದು ಸುದ್ದಿ ಆಗಿತ್ತು. ಈಗ ಮತ್ತೊಂದು ಸುದ್ದಿ ಹೊರ ಬಿದ್ದಿದೆ. ರಾಮ್ ಚರಣ್ ಮಾತ್ರವಲ್ಲದೆ ತಮಿಳು ನಟ ಸೂರ್ಯ ಹಾಗೂ ಹಿಂದಿ ನಟ ವರುಣ್ ಧವನ್ ಜೊತೆ ಅವರು ಸಿನಿಮಾ ಮಾಡುತ್ತಿದ್ದಾರಂತೆ.

ರಾಮ್ ಚರಣ್ ಅವರ ಮುಂಬರುವ ಸಿನಿಮಾ ‘ಆರ್​ಸಿ 16’ಗೆ ಜಾನ್ವಿ ಕಪೂರ್ ನಾಯಕಿ. ಅವರು ರಾಮ್ ಚರಣ್ ಜೊತೆ ತೆರೆ ಹಂಚಿಕೊಳ್ಳುತ್ತಿರುವ ಮೊದಲ ಸಿನಿಮಾ. ಇದು ಪ್ಯಾನ್ ಇಂಡಿಯಾ ಚಿತ್ರ ಆಗಿದ್ದು ‘ಉಪ್ಪೇನಾ’ ಖ್ಯಾತಿಯ ಬುಚಿ ಬಾಬು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಅವರು ಕಥೆ ಕೇಳಿ ಇಷ್ಟಪಟ್ಟಿದ್ದಾರೆ.

ಇದರ ಜೊತೆಗೆ ಸೂರ್ಯ ನಟಿಸುತ್ತಿರುವ ‘ಕರ್ಣ’ ಸಿನಿಮಾದಲ್ಲಿ ದ್ರೌಪದಿ ಪಾತ್ರ ಮಾಡಲಿದ್ದಾರೆ ಎನ್ನಲಾಗಿದೆ. ರಾಕೇಶ್ ಓಂ ಪ್ರಕಾಶ್ ಮೆಹ್ರಾ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಜಾನ್ವಿ ಕಪೂರ್ ಅವರ ಲುಕ್​ ಟೆಸ್ಟ್ ಕೂಡ ಪೂರ್ಣಗೊಂಡಿದೆ.

ಇದನ್ನೂ ಓದಿ: ಮತ್ತೊಂದು ತೆಲುಗು ಆಫರ್ ಬಾಚಿಕೊಂಡ ಜಾನ್ವಿ ಕಪೂರ್; ಸ್ಟಾರ್ ಹೀರೋ ಜೊತೆ ನಟನೆ

ಜಾನ್ವಿ ಹಾಗೂ ವರುಣ್ ಧವನ್ ಮತ್ತೆ ಒಂದಾಗುತ್ತಿದ್ದಾರೆ ಎಂಬ ಸುದ್ದಿಯೂ ಇದೆ. ಶಶಾಂಕ್ ಖೈತಾನ್ ನಿರ್ದೇಶನದ, ಕರಣ್ ಜೋಹರ್ ನಿರ್ಮಾಣದ ಹೊಸ ಸಿನಿಮಾಗೆ ಜಾನ್ವಿ ನಾಯಕಿ ಎನ್ನಲಾಗಿದೆ. ಧರ್ಮ ಪ್ರೊಡಕ್ಷನ್ ಜೊತೆ ಜಾನ್ವಿಗೆ ಒಳ್ಳೆಯ ನಂಟಿದೆ. ಹೀಗಾಗಿ, ಅವರಿಗೆ ಈ ಆಫರ್ ಹೋಗಿದೆ. ಈ ಚಿತ್ರದ ಕೆಲಸಗಳು ಈ ವರ್ಷ ಮೇ ತಿಂಗಳಲ್ಲಿ ಆರಂಭ ಆಗುವ ಸಾಧ್ಯತೆ ಇದೆ. ಜಾನ್ವಿ ಕಪೂರ್ ಅವರಿಗೆ ಒಟ್ಟೊಟ್ಟಿಗೆ ಇಷ್ಟೊಂದು ಆಫರ್ ಸಿಕ್ಕಿರುವುದರಿಂದ ಅವರಿಗೆ ಖುಷಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು