AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್​ ಹಾವಳಿ ಹೆಚ್ಚಳ; ಜನರ ಉದ್ಯೋಗ, ಆರ್ಥಿಕ ಸ್ಥಿತಿ ಬಗ್ಗೆ ಜಾನ್ವಿ ಕಪೂರ್ ಕಳವಳ

Omicron: ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜಾನ್ವಿ ಕಪೂರ್​ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಜನರ ಪರಿಸ್ಥಿತಿ ಏನಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಒಮಿಕ್ರಾನ್​ ಹಾವಳಿ ಹೆಚ್ಚಳ; ಜನರ ಉದ್ಯೋಗ, ಆರ್ಥಿಕ ಸ್ಥಿತಿ ಬಗ್ಗೆ ಜಾನ್ವಿ ಕಪೂರ್ ಕಳವಳ
ಜಾನ್ವಿ ಕಪೂರ್
TV9 Web
| Edited By: |

Updated on: Jan 06, 2022 | 8:57 AM

Share

ದೇಶದಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ (Omicron Cases in India) ಹೆಚ್ಚಳ ಆಗುತ್ತಿರುವುದು ಆತಂಕಕ್ಕೆ ಕಾರಣ ಆಗಿದೆ. ಹೊಸ ಹೊಸ ರೂಪದಲ್ಲಿ ಕೊರೊನಾ ವೈರಲ್​ ಕಾಟ ಕೊಡುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರಗಳು ಕಠಿಣ ನಿಯಮಗಳನ್ನು ಜಾರಿ ಮಾಡಿವೆ. ಇದರಿಂದ ಅನೇಕ ಉದ್ಯಮಗಳ ಮೇಲೆ ಪರಿಣಾಮ ಬೀರುತ್ತಿದೆ. ಚಿತ್ರರಂಗ ಕೂಡ ಇದರಿಂದ ತತ್ತರಿಸುತ್ತಿದೆ. ಕೋಟ್ಯಂತರ ರೂಪಾಯಿ ವಹಿವಾಟು ನಡೆಸುವ ಚಿತ್ರೋದ್ಯಮಕ್ಕೆ ಈಗಾಗಲೇ ಎರಡು ಲಾಕ್​ಡೌನ್​ನಿಂದ ನಷ್ಟ ಆಗಿದೆ. ಮೂರನೆ ಅಲೆಯಲ್ಲಿ ಜನರ ಪರಿಸ್ಥಿತಿ ಏನಾಗಲಿದೆಯೋ ಎಂದು ನಟಿ ಜಾನ್ವಿ ಕಪೂರ್ (Janhvi Kapoor)​ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಬಾಲಿವುಡ್​ನಲ್ಲಿ ಜಾನ್ವಿ ಕಪೂರ್ ಅವರು ನಿಧಾನಕ್ಕೆ ನೆಲೆ ಕಂಡುಕೊಳ್ಳುತ್ತಿದ್ದಾರೆ. ಶ್ರೀದೇವಿ ಪುತ್ರಿ ಎಂಬ ಕಾರಣಕ್ಕೆ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಗೆಲುವು ಪಡೆಯುವುದು ಇನ್ನೂ ಬಾಕಿ ಇದೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಜಾನ್ವಿ ಕಪೂರ್​ ಅವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚಾದರೆ ಜನರ ಪರಿಸ್ಥಿತಿ ಏನಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಒಮಿಕ್ರಾನ್​ ಹರಡುವುದನ್ನು ತಪ್ಪಿಸಲು ಹಲವು ರಾಜ್ಯಗಳಲ್ಲಿ ವೀಕೆಂಡ್​ ಕರ್ಫ್ಯೂ ಜಾರಿ ಮಾಡಲಾಗಿದೆ. ನೈಟ್​ ಕರ್ಫ್ಯೂ ಸಹ ಜಾರಿಯಲ್ಲಿದೆ. ಕೆಲವು ಕಡೆಗಳಲ್ಲಿ ಶಾಲೆಗಳನ್ನು ಬಂದ್​ ಮಾಡಲಾಗಿದೆ. ಇದರಿಂದ ಕೋಟ್ಯಂತರ ಜನರ ಉದ್ಯೋಗಕ್ಕೆ ತೊಂದರೆ ಆಗಿದೆ. ಆರ್ಥಿಕ ಪರಿಸ್ಥಿತಿ ಕಷ್ಟ ಆಗುತ್ತಿದೆ. ಮುಂದೇನಪ್ಪಾ ಗತಿ ಎಂದು ಜಾನ್ವಿ ಕಪೂರ್​ ಆತಂಕ ಹೊರಹಾಕಿದ್ದಾರೆ.

ಸದ್ಯ ಜಾನ್ವಿ ಕಪೂರ್​ ಕೈಯಲ್ಲಿ ಅನೇಕ ಆಫರ್​ಗಳಿವೆ. ಇದೇ ಮೊದಲ ಬಾರಿಗೆ ಅವರು ತಮ್ಮ ತಂದೆ ಬೋನಿ ಕಪೂರ್​ ನಿರ್ಮಾಣ ಮಾಡಲಿರುವ ಹೊಸ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಆ ಚಿತ್ರಕ್ಕೆ ‘ಮಿಲಿ’ ಎಂದು ಹೆಸರು ಇಡಲಾಗಿದೆ. ಅಪ್ಪನ ಜತೆ ಕೆಲಸ ಮಾಡಲು ಅವಕಾಶ ಸಿಕ್ಕಿರುವುದಕ್ಕೆ ಅವರು ಖುಷಿ ವ್ಯಕ್ತಪಡಿಸಿದ್ದಾರೆ. ಬಾಲಿವುಡ್​ನಲ್ಲಿ ಬೇರೂರಿರುವ ನೆಪೋಟಿಸಂ ಚರ್ಚೆಯಲ್ಲೂ ಜಾನ್ವಿ ಕಪೂರ್​ ಹೆಸರು ಪದೇಪದೇ ಕೇಳಿಬರುತ್ತದೆ. ಫಿಲ್ಮಿ ಕುಟುಂಬದ ಹಿನ್ನೆಲೆಯಿಂದ ಬಂದಿರುವುದರಿಂದ ಅವರಿಗೆ ಸುಲಭವಾಗಿ ಅವಕಾಶಗಳು ಸಿಗುತ್ತಿವೆ.

ಇದನ್ನೂ ಓದಿ:

‘ಏಕ್​ ಲವ್​ ಯಾ’ ಚಿತ್ರ ನೋಡಲು ಕಾದಿದ್ದ ಪ್ರೇಕ್ಷಕರಿಗೆ ಬೇಸರ; ರಿಲೀಸ್​ ದಿನಾಂಕ ಮುಂದೂಡಿಕೆ​

‘ರಾಧೆ ಶ್ಯಾಮ್​’ ರಿಲೀಸ್​ ದಿನಾಂಕ ಮುಂದಕ್ಕೆ; ಸಂಕ್ರಾಂತಿ ರೇಸ್​ನಿಂದ ಹಿಂದೆ ಸರಿದ ಪ್ರಭಾಸ್ ಸಿನಿಮಾ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್