AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾನ್ವಿ ಕಪೂರ್​ ನಿಜ ಜೀವನದಲ್ಲೂ ನಟನೆ ಮಾಡ್ತಾರೆ ಅಂತ ಟ್ರೋಲ್​ ಮಾಡಿದ ನೆಟ್ಟಿಗರು; ಕಾರಣ ಏನು?

Janhvi Kapoor: ರಿಯಲ್​ ಲೈಫ್​ನಲ್ಲಿ ಹೀಗೆಲ್ಲ ನಾಟಕ ಮಾಡುವ ಅವಶ್ಯಕತೆ ಏನಿದೆ ಎಂದು ನೆಟ್ಟಿಗರು ಕಮೆಂಟ್​ ಮಾಡುತ್ತಿದ್ದಾರೆ. ಇವುಗಳಿಗೆ ಜಾನ್ವಿ ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕು.

ಜಾನ್ವಿ ಕಪೂರ್​ ನಿಜ ಜೀವನದಲ್ಲೂ ನಟನೆ ಮಾಡ್ತಾರೆ ಅಂತ ಟ್ರೋಲ್​ ಮಾಡಿದ ನೆಟ್ಟಿಗರು; ಕಾರಣ ಏನು?
ಜಾನ್ವಿ ಕಪೂರ್​
ಮದನ್​ ಕುಮಾರ್​
|

Updated on: Aug 04, 2023 | 7:47 PM

Share

ಬಾಲಿವುಡ್​ ನಟಿ ಜಾನ್ವಿ ಕಪೂರ್​ (Janhvi Kapoor) ಅವರು ಆಗಾಗ ಟ್ರೋಲ್​ (Troll) ಆಗುತ್ತಲೇ ಇರುತ್ತಾರೆ. ನಟನೆಯ ವಿಚಾರದಲ್ಲಿ ಅವರು ಮಾಗಿಲ್ಲ ಎಂಬುದು ಅನೇಕರ ಅಭಿಪ್ರಾಯ. ಶ್ರೀದೇವಿಯ ಮಗಳು ಎಂಬ ಕಾರಣಕ್ಕೆ ಅವರಿಗೆ ಸುಲಭವಾಗಿ ಅವಕಾಶಗಳು ಸಿಕ್ಕವು. ಆದರೆ ಜಾನ್ವಿ ಕಪೂರ್​ ಅವರ ನಟನೆಗೆ ಮೆಚ್ಚುಗೆ ಸಿಕ್ಕಿದ್ದು ಕಡಿಮೆ. ಇತ್ತೀಚೆಗೆ ಅವರು ನಟಿಸಿದ ‘ಬವಾಲ್​’ (Bawaal) ಸಿನಿಮಾ ಒಟಿಟಿಯಲ್ಲಿ ಬಿಡುಗಡೆಯಾಗಿ ಗಮನ ಸೆಳೆಯಿತು. ಆ ಚಿತ್ರದಲ್ಲಿ ಅವರು ವರುಣ್​ ಧವನ್​ಗೆ ಜೋಡಿಯಾಗಿ ನಟಿಸಿದ್ದಾರೆ. ‘ದಂಗಲ್​’ ಖ್ಯಾತಿಯ ನಿತೀಶ್​ ತಿವಾರಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಜಾನ್ವಿ ಕಪೂರ್​ ಅವರು ಹೇಗೆ ನಟಿಸುತ್ತಾರೆ ಎಂಬುದಕ್ಕಿಂತಲೂ ಹೆಚ್ಚಾಗಿ ರಿಯಲ್​ ಲೈಫ್​ನಲ್ಲಿ ಅವರು ನಾಟಕ ಮಾಡ್ತಾರೆ ಎಂಬ ಬಗ್ಗೆ ಈಗ ಚರ್ಚೆ ಶುರುವಾಗಿದೆ. ಅದಕ್ಕೆ ಕಾರಣ ಆಗಿರುವುದು ಒಂದು ವಿಡಿಯೋ.

ಜಾನ್ವಿ ಕಪೂರ್​ ಎಲ್ಲೇ ಹೋದರೂ ಪಾಪರಾಜಿಗಳು ಮುತ್ತಿಕೊಳ್ಳುತ್ತಾರೆ ಎಂಬುದು ನಿಜ. ಜಿಮ್​, ವಿಮಾನ ನಿಲ್ದಾಣ, ರೆಸ್ಟೋರೆಂಟ್​.. ಹೀಗೆ ಎಲ್ಲಿಯೇ ಕಾಣಿಸಿಕೊಂಡರೂ ಅವರ ಫೋಟೋ ಮತ್ತು ವಿಡಿಯೋಗಾಗಿ ಪಾಪರಾಜಿಗಳು ಬೆನ್ನು ಬೀಳುತ್ತಾರೆ. ಹಾಗಾಗಿ ಪಾಪರಾಜಿಗಳ ಪರಿಚಯ ಜಾನ್ವಿ ಕಪೂರ್​ ಅವರಿಗೆ ಚೆನ್ನಾಗಿಯೇ ಇದೆ. ಹಾಗಿದ್ದರೂ ಕೂಡ ಪಾಪರಾಜಿಗಳನ್ನು ನೋಡಿ ಹೆದರಿಕೊಂಡಂತೆ ಜಾನ್ವಿ ನಟಿಸಿದ್ದಾರೆ. ಆ ವಿಡಿಯೋ ವೈರಲ್​ ಆಗಿದೆ.

ಇತ್ತೀಚೆಗೆ ಜಾನ್ವಿ ಕಪೂರ್​ ಅವರು ಮುಂಬೈನಲ್ಲಿ ಕಾಣಿಸಿಕೊಂಡರು. ಅವರು ಕಾರಿನಿಂದ ಇಳಿಯುವಾಗ ಪಾಪರಾಜಿಗಳು ಎದುರಾದರು. ಅವರನ್ನು ನೋಡಿ ಜಾನ್ವಿ ಕಪೂರ್​ ಅವರು ಗಾಬರಿ ಆದಂತೆ ಕಂಡರು. ಆದರೆ ನಿಜವಾಗಿಯೂ ಅವರಿಗೆ ಗಾಬರಿ ಆಗಿಲ್ಲ ಎಂಬುದು ನೆಟ್ಟಿಗರ ವಾದ. ಇದು ಜನರ ಗಮನ ಸೆಳೆಯಲು ಅವರು ಮಾಡಿದ ನಾಟಕ. ರಿಯಲ್​ ಲೈಫ್​ನಲ್ಲಿ ಹೀಗೆಲ್ಲ ನಾಟಕ ಮಾಡುವ ಅವಶ್ಯಕತೆ ಏನಿದೆ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ. ಇವುಗಳಿಗೆ ಜಾನ್ವಿ ಹೇಗೆ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕು.

Janhvi Kapoor: ನೀಲಿ ಬಣ್ಣದ ಲೆಹಾಂಗ ತೊಟ್ಟು ಮಿಂಚಿದ ಜಾನ್ವಿ ಕಪೂರ್​​​

ಸೋಶಿಯಲ್​ ಮೀಡಿಯಾದಲ್ಲಿ ಜಾನ್ವಿ ಕಪೂರ್​ ಅವರು ಸಖತ್​ ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 21 ಮಿಲಿಯನ್​ಗಿಂತಲೂ ಹೆಚ್ಚು ಜನರು ಫಾಲೋ ಮಾಡುತ್ತಿದ್ದಾರೆ. ಬಗೆಬಗೆಯ ಫೋಟೋಶೂಟ್​ ಮಾಡಿಸಿ, ಅದನ್ನು ಹಂಚಿಕೊಳ್ಳುತ್ತಾರೆ. ಗ್ಲಾಮರಸ್​ ಆಗಿ ಪೋಸ್​ ನೀಡುವಲ್ಲಿ ಅವರು ಎಂದಿಗೂ ಹಿಂದೇಟು ಹಾಕಿಲ್ಲ. ಬಾಲಿವುಡ್​ ಮಾತ್ರವಲ್ಲದೇ ಟಾಲಿವುಡ್​ಗೂ ಅವರು ಕಾಲಿಡುತ್ತಿದ್ದಾರೆ. ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ’ ಸಿನಿಮಾಗೆ ಜಾನ್ವಿ ಅವರು ನಾಯಕಿ ಆಗಿದ್ದಾರೆ. ಬಾಲಿವುಡ್​ನಲ್ಲಿ ಕೂಡ ಬ್ಯಾಕ್​ ಟು ಬ್ಯಾಕ್​ ಸಿನಿಮಾ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!