AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್​ ಅಂಬಾನಿ ಮದುವೆ ಬಳಿಕ ಜಾನ್ವಿ ಕಪೂರ್​ಗೆ ಫುಡ್​ ಪಾಯ್ಸನ್​; ಆಸ್ಪತ್ರೆಗೆ ದಾಖಲು

ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಜಾನ್ವಿ ಕಪೂರ್​ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 3 ದಿನ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎಂದು ವರದಿ ಆಗಿದೆ. ಜಾನ್ವಿ ಕಪೂರ್​ ಅವರಿಗೆ ಏಕಾಏಕಿ ಫುಡ್​ ಪಾಯ್ಸನ್​ ಆಗಲು ಕಾರಣ ಏನು ಎಂಬುದು ಕೂಡ ಗೊತ್ತಾಗಿದೆ. ಮುಂಬೈನಲ್ಲಿ ಅನಂತ್​ ಅಂಬಾನಿಯ ಮದುವೆ ಮುಗಿಸಿಕೊಂಡು, ಚೆನ್ನೈಗೆ ಬಂದು ಸೀ ಫುಡ್​ ಸೇವಿಸಿದ ಬಳಿಕ ಜಾನ್ವಿಗೆ ಆರೋಗ್ಯ ಕೈಕೊಟ್ಟಿತು.

ಅನಂತ್​ ಅಂಬಾನಿ ಮದುವೆ ಬಳಿಕ ಜಾನ್ವಿ ಕಪೂರ್​ಗೆ ಫುಡ್​ ಪಾಯ್ಸನ್​; ಆಸ್ಪತ್ರೆಗೆ ದಾಖಲು
ಜಾನ್ವಿ ಕಪೂರ್​
ಮದನ್​ ಕುಮಾರ್​
|

Updated on: Jul 18, 2024 | 10:56 PM

Share

ಬಾಲಿವುಡ್ ನಟಿ ಜಾನ್ವಿ ಕಪೂರ್​ ಅವರ ಅಭಿಮಾನಿಗಳಿಗೆ ಇದು ಕಹಿ ಸುದ್ದಿ. ಜಾನ್ವಿ ಕಪೂರ್​ ಆರೋಗ್ಯದಲ್ಲಿ ಏರುಪೇರು ಆಗಿದೆ. ಈಗ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಟಿಗೆ ಫುಡ್​ ಪಾಯ್ಸನ್​ ಆಗಿದೆ ಎಂದು ಹೇಳಲಾಗುತ್ತಿದೆ. ಮೊದಲ ಹಂತದ ಚಿಕಿತ್ಸೆ ನೀಡಿರುವ ವೈದ್ಯರು ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಇನ್ನೆರಡು ದಿನದಲ್ಲಿ ಅವರು ಡಿಸ್ಜಾರ್ಜ್​ ಆಗಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಅಷ್ಟಕ್ಕೂ ಜಾನ್ವಿ ಕಪೂರ್​ ಅವರಿಗೆ ಫುಡ್​ ಪಾಯ್ಸನ್​ ಆಗಲು ಕಾರಣು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ..

ಇತ್ತೀಚೆಗೆ ನಡೆದ ಅನಂತ್​ ಅಂಬಾನಿ-ರಾಧಿಕಾ ಮರ್ಚೆಂಟ್​ ಮದುವೆಯಲ್ಲಿ ಜಾನ್ವಿ ಕಪೂರ್​ ಅವರು ಭಾಗಿ ಆಗಿದ್ದಾರೆ. ಮಿರಿಮಿರಿ ಮಿಂಚುವ ಬಟ್ಟೆ ಧರಿಸಿ ಅವರು ಎಂಜಾಯ್​ ಮಾಡಿದ್ದರು. ಆ ಮದುವೆ ಮುಗಿಸಿಕೊಂಡ ಬಳಿಕ ಅವರು ಚೆನ್ನೈಗೆ ತೆರಳಿದರು. ಅಲ್ಲಿ ಅವರ ಕುಟುಂಬಸ್ಥರ ಮನೆಗೆ ಹೋಗಿ ಸೀ ಫುಡ್​ ಸೇವಿಸಿದ್ದಾರೆ ಎನ್ನಲಾಗಿದೆ. ಅದರಿಂದಲೇ ಜಾನ್ವಿ ಕಪೂರ್​ ಅವರಿಗೆ ಫುಡ್​ ಪಾಯ್ಸನ್​ ಆಗಿದೆ.

ಚೆನ್ನೈನಲ್ಲಿ ಸೇವಿಸಿದ ಆಹಾರದಿಂದ ಜಾನ್ವಿ ಕಪೂರ್​ ಅವರಿಗೆ ತೊಂದರೆ ಆಗಿದೆ. ಚೆನ್ನೈ ನಿವಾಸದಲ್ಲಿ ಇರುವಾಗಲೇ ಅವರು ಅನಾರೋಗ್ಯದಿಂದ ಕುಸಿದು ಬಿದ್ದರು ಎನ್ನಲಾಗಿದೆ. ಆ ಬಳಿಕ ತಂದೆ ಬೋನಿ ಕಪೂರ್​ ಅವರು ಜಾನ್ವಿಯನ್ನು ಮುಂಬೈಗೆ ಕರೆದುಕೊಂಡು ಬಂದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದರು. ಸದ್ಯಕ್ಕೆ ಅಭಿಮಾನಿಗಳು ಆತಂಕಪಡುವ ಅಗತ್ಯವೇನಿಲ್ಲ ಎಂದು ಹೇಳಲಾಗುತ್ತಿದೆ. ಆದಷ್ಟು ಬೇಗ ಜಾನ್ವಿ ಕಪೂರ್​ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್​ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಒಂದಿನ ಬಂಗಾರ, ಇನ್ನೊಂದಿನ ವಜ್ರ; ಇದು ಜಾನ್ವಿ ಫ್ಯಾಷನ್​ ಥೀಮ್​

ನೆಪೋಕಿಡ್​ ಎಂಬ ಆರೋಪದ ನಡುವೆಯೂ ನಟಿ ಜಾನ್ವಿ ಕಪೂರ್​ ಅವರಿಗೆ ಒಳ್ಳೊಳ್ಳೆಯ ಅವಕಾಶಗಳು ಸಿಗುತ್ತಿವೆ. ಬಾಲಿವುಡ್​ನಲ್ಲಿ ಅವರು ಈಗಾಗಲೇ ಅನೇಕ ಸಿನಿಮಾಗಳನ್ನು ಮಾಡಿದ್ದಾರೆ. ಅಲ್ಲದೇ, ದಕ್ಷಿಣ ಭಾರತದಲ್ಲೂ ಅವರಿಗೆ ಚಾನ್ಸ್​ ಸಿಗುತ್ತಿದೆ. ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ’ ಸಿನಿಮಾಗೆ ಜಾನ್ವಿ ಕಪೂರ್​ ನಾಯಕಿ ಆಗಿದ್ದು, ಆ ಮೂಲಕ ಅವರು ಟಾಲಿವುಡ್​ಗೆ ಎಂಟ್ರಿ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್