AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್​ ಅಂಬಾನಿ ಮದುವೆ ಬಳಿಕ ಜಾನ್ವಿ ಕಪೂರ್​ಗೆ ಫುಡ್​ ಪಾಯ್ಸನ್​; ಆಸ್ಪತ್ರೆಗೆ ದಾಖಲು

ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಜಾನ್ವಿ ಕಪೂರ್​ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 3 ದಿನ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎಂದು ವರದಿ ಆಗಿದೆ. ಜಾನ್ವಿ ಕಪೂರ್​ ಅವರಿಗೆ ಏಕಾಏಕಿ ಫುಡ್​ ಪಾಯ್ಸನ್​ ಆಗಲು ಕಾರಣ ಏನು ಎಂಬುದು ಕೂಡ ಗೊತ್ತಾಗಿದೆ. ಮುಂಬೈನಲ್ಲಿ ಅನಂತ್​ ಅಂಬಾನಿಯ ಮದುವೆ ಮುಗಿಸಿಕೊಂಡು, ಚೆನ್ನೈಗೆ ಬಂದು ಸೀ ಫುಡ್​ ಸೇವಿಸಿದ ಬಳಿಕ ಜಾನ್ವಿಗೆ ಆರೋಗ್ಯ ಕೈಕೊಟ್ಟಿತು.

ಅನಂತ್​ ಅಂಬಾನಿ ಮದುವೆ ಬಳಿಕ ಜಾನ್ವಿ ಕಪೂರ್​ಗೆ ಫುಡ್​ ಪಾಯ್ಸನ್​; ಆಸ್ಪತ್ರೆಗೆ ದಾಖಲು
ಜಾನ್ವಿ ಕಪೂರ್​
ಮದನ್​ ಕುಮಾರ್​
|

Updated on: Jul 18, 2024 | 10:56 PM

Share

ಬಾಲಿವುಡ್ ನಟಿ ಜಾನ್ವಿ ಕಪೂರ್​ ಅವರ ಅಭಿಮಾನಿಗಳಿಗೆ ಇದು ಕಹಿ ಸುದ್ದಿ. ಜಾನ್ವಿ ಕಪೂರ್​ ಆರೋಗ್ಯದಲ್ಲಿ ಏರುಪೇರು ಆಗಿದೆ. ಈಗ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಟಿಗೆ ಫುಡ್​ ಪಾಯ್ಸನ್​ ಆಗಿದೆ ಎಂದು ಹೇಳಲಾಗುತ್ತಿದೆ. ಮೊದಲ ಹಂತದ ಚಿಕಿತ್ಸೆ ನೀಡಿರುವ ವೈದ್ಯರು ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಇನ್ನೆರಡು ದಿನದಲ್ಲಿ ಅವರು ಡಿಸ್ಜಾರ್ಜ್​ ಆಗಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಅಷ್ಟಕ್ಕೂ ಜಾನ್ವಿ ಕಪೂರ್​ ಅವರಿಗೆ ಫುಡ್​ ಪಾಯ್ಸನ್​ ಆಗಲು ಕಾರಣು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ..

ಇತ್ತೀಚೆಗೆ ನಡೆದ ಅನಂತ್​ ಅಂಬಾನಿ-ರಾಧಿಕಾ ಮರ್ಚೆಂಟ್​ ಮದುವೆಯಲ್ಲಿ ಜಾನ್ವಿ ಕಪೂರ್​ ಅವರು ಭಾಗಿ ಆಗಿದ್ದಾರೆ. ಮಿರಿಮಿರಿ ಮಿಂಚುವ ಬಟ್ಟೆ ಧರಿಸಿ ಅವರು ಎಂಜಾಯ್​ ಮಾಡಿದ್ದರು. ಆ ಮದುವೆ ಮುಗಿಸಿಕೊಂಡ ಬಳಿಕ ಅವರು ಚೆನ್ನೈಗೆ ತೆರಳಿದರು. ಅಲ್ಲಿ ಅವರ ಕುಟುಂಬಸ್ಥರ ಮನೆಗೆ ಹೋಗಿ ಸೀ ಫುಡ್​ ಸೇವಿಸಿದ್ದಾರೆ ಎನ್ನಲಾಗಿದೆ. ಅದರಿಂದಲೇ ಜಾನ್ವಿ ಕಪೂರ್​ ಅವರಿಗೆ ಫುಡ್​ ಪಾಯ್ಸನ್​ ಆಗಿದೆ.

ಚೆನ್ನೈನಲ್ಲಿ ಸೇವಿಸಿದ ಆಹಾರದಿಂದ ಜಾನ್ವಿ ಕಪೂರ್​ ಅವರಿಗೆ ತೊಂದರೆ ಆಗಿದೆ. ಚೆನ್ನೈ ನಿವಾಸದಲ್ಲಿ ಇರುವಾಗಲೇ ಅವರು ಅನಾರೋಗ್ಯದಿಂದ ಕುಸಿದು ಬಿದ್ದರು ಎನ್ನಲಾಗಿದೆ. ಆ ಬಳಿಕ ತಂದೆ ಬೋನಿ ಕಪೂರ್​ ಅವರು ಜಾನ್ವಿಯನ್ನು ಮುಂಬೈಗೆ ಕರೆದುಕೊಂಡು ಬಂದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದರು. ಸದ್ಯಕ್ಕೆ ಅಭಿಮಾನಿಗಳು ಆತಂಕಪಡುವ ಅಗತ್ಯವೇನಿಲ್ಲ ಎಂದು ಹೇಳಲಾಗುತ್ತಿದೆ. ಆದಷ್ಟು ಬೇಗ ಜಾನ್ವಿ ಕಪೂರ್​ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್​ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಒಂದಿನ ಬಂಗಾರ, ಇನ್ನೊಂದಿನ ವಜ್ರ; ಇದು ಜಾನ್ವಿ ಫ್ಯಾಷನ್​ ಥೀಮ್​

ನೆಪೋಕಿಡ್​ ಎಂಬ ಆರೋಪದ ನಡುವೆಯೂ ನಟಿ ಜಾನ್ವಿ ಕಪೂರ್​ ಅವರಿಗೆ ಒಳ್ಳೊಳ್ಳೆಯ ಅವಕಾಶಗಳು ಸಿಗುತ್ತಿವೆ. ಬಾಲಿವುಡ್​ನಲ್ಲಿ ಅವರು ಈಗಾಗಲೇ ಅನೇಕ ಸಿನಿಮಾಗಳನ್ನು ಮಾಡಿದ್ದಾರೆ. ಅಲ್ಲದೇ, ದಕ್ಷಿಣ ಭಾರತದಲ್ಲೂ ಅವರಿಗೆ ಚಾನ್ಸ್​ ಸಿಗುತ್ತಿದೆ. ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ’ ಸಿನಿಮಾಗೆ ಜಾನ್ವಿ ಕಪೂರ್​ ನಾಯಕಿ ಆಗಿದ್ದು, ಆ ಮೂಲಕ ಅವರು ಟಾಲಿವುಡ್​ಗೆ ಎಂಟ್ರಿ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ