AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಂತ್​ ಅಂಬಾನಿ ಮದುವೆ ಬಳಿಕ ಜಾನ್ವಿ ಕಪೂರ್​ಗೆ ಫುಡ್​ ಪಾಯ್ಸನ್​; ಆಸ್ಪತ್ರೆಗೆ ದಾಖಲು

ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಜಾನ್ವಿ ಕಪೂರ್​ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. 3 ದಿನ ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ ಎಂದು ವರದಿ ಆಗಿದೆ. ಜಾನ್ವಿ ಕಪೂರ್​ ಅವರಿಗೆ ಏಕಾಏಕಿ ಫುಡ್​ ಪಾಯ್ಸನ್​ ಆಗಲು ಕಾರಣ ಏನು ಎಂಬುದು ಕೂಡ ಗೊತ್ತಾಗಿದೆ. ಮುಂಬೈನಲ್ಲಿ ಅನಂತ್​ ಅಂಬಾನಿಯ ಮದುವೆ ಮುಗಿಸಿಕೊಂಡು, ಚೆನ್ನೈಗೆ ಬಂದು ಸೀ ಫುಡ್​ ಸೇವಿಸಿದ ಬಳಿಕ ಜಾನ್ವಿಗೆ ಆರೋಗ್ಯ ಕೈಕೊಟ್ಟಿತು.

ಅನಂತ್​ ಅಂಬಾನಿ ಮದುವೆ ಬಳಿಕ ಜಾನ್ವಿ ಕಪೂರ್​ಗೆ ಫುಡ್​ ಪಾಯ್ಸನ್​; ಆಸ್ಪತ್ರೆಗೆ ದಾಖಲು
ಜಾನ್ವಿ ಕಪೂರ್​
ಮದನ್​ ಕುಮಾರ್​
|

Updated on: Jul 18, 2024 | 10:56 PM

Share

ಬಾಲಿವುಡ್ ನಟಿ ಜಾನ್ವಿ ಕಪೂರ್​ ಅವರ ಅಭಿಮಾನಿಗಳಿಗೆ ಇದು ಕಹಿ ಸುದ್ದಿ. ಜಾನ್ವಿ ಕಪೂರ್​ ಆರೋಗ್ಯದಲ್ಲಿ ಏರುಪೇರು ಆಗಿದೆ. ಈಗ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಟಿಗೆ ಫುಡ್​ ಪಾಯ್ಸನ್​ ಆಗಿದೆ ಎಂದು ಹೇಳಲಾಗುತ್ತಿದೆ. ಮೊದಲ ಹಂತದ ಚಿಕಿತ್ಸೆ ನೀಡಿರುವ ವೈದ್ಯರು ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಇನ್ನೆರಡು ದಿನದಲ್ಲಿ ಅವರು ಡಿಸ್ಜಾರ್ಜ್​ ಆಗಲಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಅಷ್ಟಕ್ಕೂ ಜಾನ್ವಿ ಕಪೂರ್​ ಅವರಿಗೆ ಫುಡ್​ ಪಾಯ್ಸನ್​ ಆಗಲು ಕಾರಣು ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ..

ಇತ್ತೀಚೆಗೆ ನಡೆದ ಅನಂತ್​ ಅಂಬಾನಿ-ರಾಧಿಕಾ ಮರ್ಚೆಂಟ್​ ಮದುವೆಯಲ್ಲಿ ಜಾನ್ವಿ ಕಪೂರ್​ ಅವರು ಭಾಗಿ ಆಗಿದ್ದಾರೆ. ಮಿರಿಮಿರಿ ಮಿಂಚುವ ಬಟ್ಟೆ ಧರಿಸಿ ಅವರು ಎಂಜಾಯ್​ ಮಾಡಿದ್ದರು. ಆ ಮದುವೆ ಮುಗಿಸಿಕೊಂಡ ಬಳಿಕ ಅವರು ಚೆನ್ನೈಗೆ ತೆರಳಿದರು. ಅಲ್ಲಿ ಅವರ ಕುಟುಂಬಸ್ಥರ ಮನೆಗೆ ಹೋಗಿ ಸೀ ಫುಡ್​ ಸೇವಿಸಿದ್ದಾರೆ ಎನ್ನಲಾಗಿದೆ. ಅದರಿಂದಲೇ ಜಾನ್ವಿ ಕಪೂರ್​ ಅವರಿಗೆ ಫುಡ್​ ಪಾಯ್ಸನ್​ ಆಗಿದೆ.

ಚೆನ್ನೈನಲ್ಲಿ ಸೇವಿಸಿದ ಆಹಾರದಿಂದ ಜಾನ್ವಿ ಕಪೂರ್​ ಅವರಿಗೆ ತೊಂದರೆ ಆಗಿದೆ. ಚೆನ್ನೈ ನಿವಾಸದಲ್ಲಿ ಇರುವಾಗಲೇ ಅವರು ಅನಾರೋಗ್ಯದಿಂದ ಕುಸಿದು ಬಿದ್ದರು ಎನ್ನಲಾಗಿದೆ. ಆ ಬಳಿಕ ತಂದೆ ಬೋನಿ ಕಪೂರ್​ ಅವರು ಜಾನ್ವಿಯನ್ನು ಮುಂಬೈಗೆ ಕರೆದುಕೊಂಡು ಬಂದು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದರು. ಸದ್ಯಕ್ಕೆ ಅಭಿಮಾನಿಗಳು ಆತಂಕಪಡುವ ಅಗತ್ಯವೇನಿಲ್ಲ ಎಂದು ಹೇಳಲಾಗುತ್ತಿದೆ. ಆದಷ್ಟು ಬೇಗ ಜಾನ್ವಿ ಕಪೂರ್​ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್​ ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ: ಒಂದಿನ ಬಂಗಾರ, ಇನ್ನೊಂದಿನ ವಜ್ರ; ಇದು ಜಾನ್ವಿ ಫ್ಯಾಷನ್​ ಥೀಮ್​

ನೆಪೋಕಿಡ್​ ಎಂಬ ಆರೋಪದ ನಡುವೆಯೂ ನಟಿ ಜಾನ್ವಿ ಕಪೂರ್​ ಅವರಿಗೆ ಒಳ್ಳೊಳ್ಳೆಯ ಅವಕಾಶಗಳು ಸಿಗುತ್ತಿವೆ. ಬಾಲಿವುಡ್​ನಲ್ಲಿ ಅವರು ಈಗಾಗಲೇ ಅನೇಕ ಸಿನಿಮಾಗಳನ್ನು ಮಾಡಿದ್ದಾರೆ. ಅಲ್ಲದೇ, ದಕ್ಷಿಣ ಭಾರತದಲ್ಲೂ ಅವರಿಗೆ ಚಾನ್ಸ್​ ಸಿಗುತ್ತಿದೆ. ಜೂನಿಯರ್​ ಎನ್​ಟಿಆರ್​ ನಟನೆಯ ‘ದೇವರ’ ಸಿನಿಮಾಗೆ ಜಾನ್ವಿ ಕಪೂರ್​ ನಾಯಕಿ ಆಗಿದ್ದು, ಆ ಮೂಲಕ ಅವರು ಟಾಲಿವುಡ್​ಗೆ ಎಂಟ್ರಿ ನೀಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​