AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡ ಜಾನ್ವಿ ಕಪೂರ್? ಸ್ಟಾರ್ ಕಿಡ್​ಗೆ ಜೊತೆಯಾದ ನಟಿ

ಜಾನ್ವಿ ಕಪೂರ್ ಸ್ಟಾರ್ ಕಿಡ್. ಆದರೆ, ದೊಡ್ಡ ಮಟ್ಟದ ಯಶಸ್ಸು ಸಿಕ್ಕಿಲ್ಲ. ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ. ಈಗ ಜಾನ್ವಿ ಕಪೂರ್ ಅವರು ದಕ್ಷಿಣ ಭಾರತದಲ್ಲಿ ತಮ್ಮ ಅದೃಷ್ಟಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ.

Janhvi Kapoor: ಮತ್ತೊಂದು ತೆಲುಗು ಸಿನಿಮಾ ಒಪ್ಪಿಕೊಂಡ ಜಾನ್ವಿ ಕಪೂರ್? ಸ್ಟಾರ್ ಕಿಡ್​ಗೆ ಜೊತೆಯಾದ ನಟಿ
ಜಾನ್ವಿ ಕಪೂರ್
ರಾಜೇಶ್ ದುಗ್ಗುಮನೆ
|

Updated on: May 03, 2023 | 8:14 AM

Share

ನಟಿ ಜಾನ್ವಿ ಕಪೂರ್​ಗೆ (Janhvi Kapoor) ಟಾಲಿವುಡ್​ನಲ್ಲೂ ಬೇಡಿಕೆ ಹೆಚ್ಚಿದೆ. ಇತ್ತೀಚೆಗಷ್ಟೇ ಅವರು ಜೂನಿಯರ್ ಎನ್​ಟಿಆರ್ 30ನೇ ಚಿತ್ರಕ್ಕೆ ನಾಯಕಿ ಆಗಿ ಆಯ್ಕೆ ಆದರು. ಈಗ ಅವರ ಪಾಲಿಗೆ ಮತ್ತೊಂದು ಸಿನಿಮಾ ಅವಕಾಶ ಒಲಿದಿದೆ ಎನ್ನಲಾಗುತ್ತಿದೆ. ಸ್ಟಾರ್ ಕಿಡ್ ಅಖಿಲ್ ಅಕ್ಕಿನೇನಿ (Akhil Akkineni) ಮುಂದಿನ ಚಿತ್ರದಲ್ಲಿ ಜಾನ್ವಿ ಕಪೂರ್ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಜಾನ್ವಿಗೆ ತೆಲುಗಿನಿಂದ ಸಾಲು ಸಾಲು ಆಫರ್​ಗಳು ಬರುತ್ತಿವೆ. ಮುಂದಿನ ದಿನಗಳಲ್ಲಿ ಅವರು ದಕ್ಷಿಣ ಭಾರತದಲ್ಲೇ ಬ್ಯುಸಿ ಆದರೂ ಅಚ್ಚರಿ ಏನಿಲ್ಲ.

ಜಾನ್ವಿ ಕಪೂರ್ ಸ್ಟಾರ್ ಕಿಡ್. ಆದರೆ, ದೊಡ್ಡ ಮಟ್ಟದ ಯಶಸ್ಸು ಸಿಕ್ಕಿಲ್ಲ. ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ. ಈಗ ಜಾನ್ವಿ ಕಪೂರ್ ಅವರು ದಕ್ಷಿಣ ಭಾರತದಲ್ಲಿ ತಮ್ಮ ಅದೃಷ್ಟಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ. ಅಕ್ಕಿನೇನಿ ನಾಗಾರ್ಜುನ ಅವರ ಮಗ ಅಖಿಲ್ ಅಕ್ಕಿನೇನಿ​ ಮುಂದಿನ ಚಿತ್ರದಲ್ಲಿ ಜಾನ್ವಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ.

ಅಖಿಲ್ ಅಕ್ಕಿನೇನಿ ನಟನೆಯ ‘ಏಜೆಂಟ್​’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆದರೆ, ಸಿನಿಮಾ ಹೀನಾಯವಾಗಿ ಸೋತಿದೆ. ಇದನ್ನು ಸ್ವತಃ ನಿರ್ಮಾಪಕರೇ ಒಪ್ಪಿಕೊಂಡಿದ್ದಾರೆ ಮತ್ತು ಅಭಿಮಾನಿಗಳ ಬಳಿ ಕ್ಷಮೆ ಕೇಳಿದ್ದಾರೆ. ಈ ಬೆನ್ನಲ್ಲೇ ಅಖಿಲ್ ಅವರು ಸೋಲು ಮರೆತು ಹೊಸ ಸಿನಿಮಾ ಕಡೆ ಗಮನ ಹರಿಸುತ್ತಿದ್ದಾರೆ.

ಅಖಿಲ್ ಅಕ್ಕಿನೇನಿ ಮುಂದಿನ ಚಿತ್ರಕ್ಕೆ ಯುವಿ ಕ್ರಿಯೇಷನ್ಸ್ ಬಂಡವಾಳ ಹೂಡುತ್ತಿದೆ. ಈ ಮೊದಲು ‘ಸಾಹೋ’ ಮೊದಲಾದ ಚಿತ್ರಗಳ ಡೈರೆಕ್ಷನ್ ಡಿಪಾರ್ಟ್​​ಮೆಂಟ್​ನಲ್ಲಿ ಕೆಲಸ ಮಾಡಿದ ಅನಿಲ್ ಕುಮಾರ್ ಅವರು ಹೊಸ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ ಆದರೆ ಉತ್ತಮ ಎನ್ನುವ ಆಲೋಚನೆ ನಿರ್ದೇಶಕರದ್ದು. ಈ ಕುರಿತು ಅವರು ಜಾನ್ವಿ ಕಪೂರ್ ಜೊತೆ ಒಂದು ಹಂತದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಜಾನ್ವಿ ಕಪೂರ್​ ಫೋಟೋ ಕಂಡು ಕಣ್ಣರಳಿಸಿದ ಪಡ್ಡೆಗಳು; ಶ್ರೀದೇವಿ ಪುತ್ರಿಯ ಗ್ಲಾಮರಸ್​ ಗೆಟಪ್​

ಜಾನ್ವಿ ಕಪೂರ್ ಅವರು ‘ಧಡಕ್​’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ನಟಿ ಶ್ರೀದೇವಿ ಹಾಗೂ ಖ್ಯಾತ ನಿರ್ಮಾಪಕ ಬೋನಿ ಕಪೂರ್ ದಂಪತಿಯ ಮಗಳು ಎನ್ನುವ ಕಾರಣಕ್ಕೆ ಜಾನ್ವಿ ಕಪೂರ್​ಗೆ ಬಹುಬೇಗ ಅವಕಾಶ ಸಿಕ್ಕಿತು. ಆದರೆ, ಈವರೆಗೆ ಅವರಿಗೆ ಯಶಸ್ಸು ಸಿಕ್ಕಿಲ್ಲ. ಜೂನಿಯರ್ ಎನ್​ಟಿಆರ್​ 30ನೇ ಸಿನಿಮಾ ಮೂಲಕ ಅವರು ಗೆಲ್ಲುವ ನಿರೀಕ್ಷೆಯಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು