AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ತೆಲುಗು ಆಫರ್ ಬಾಚಿಕೊಂಡ ಜಾನ್ವಿ ಕಪೂರ್; ಸ್ಟಾರ್ ಹೀರೋ ಜೊತೆ ನಟನೆ

‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ರಾಮ್​ ಚರಣ್ ಬ್ಯುಸಿ ಇದ್ದಾರೆ. ಇದಾದ ಬಳಿಕ ಅವರು ‘RC 16’ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ‘ಉಪ್ಪೇನ’ ಖ್ಯಾತಿಯ ಬುಚ್ಚಿ ಬಾಬು ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿಯಾಗಿ ಫೈನಲ್ ಆಗಿದ್ದಾರೆ ಎಂದು ವರದಿ ಆಗಿದೆ.

ಮತ್ತೊಂದು ತೆಲುಗು ಆಫರ್ ಬಾಚಿಕೊಂಡ ಜಾನ್ವಿ ಕಪೂರ್; ಸ್ಟಾರ್ ಹೀರೋ ಜೊತೆ ನಟನೆ
ಜಾನ್ವಿ
ರಾಜೇಶ್ ದುಗ್ಗುಮನೆ
|

Updated on: Feb 07, 2024 | 7:28 AM

Share

ಶ್ರೀದೇವಿ (Sridevi) ಅವರು ಬಾಲಿವುಡ್ ಜೊತೆ ದಕ್ಷಿಣ ಭಾರತದಲ್ಲೂ ನಟಿಸಿ ಫೇಮಸ್ ಆಗಿದ್ದರು. ಈಗ ಅವರ ಮಗಳು ಜಾನ್ವಿ ಕಪೂರ್ ಕೂಡ ಇದನ್ನು ಫಾಲೋ ಮಾಡುತ್ತಿದ್ದಾರೆ. ಅವರು ದಕ್ಷಿಣ ಭಾರತದಲ್ಲೇ ಹೆಚ್ಚು ಬ್ಯುಸಿ ಆಗಲು ನಿರ್ಧರಿಸಿದಂತೆ ಇದೆ. ಈಗಾಲೇ ಅವರು ಜೂನಿಯರ್​ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ  (Devara Movie) ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಅವರು ಮತ್ತೊಂದು ತೆಲುಗು ಸಿನಿಮಾಗೆ ಸಹಿ ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಚಾರ ಕೇಳಿ ಫ್ಯಾನ್ಸ್ ಖುಷಿ ಆಗಿದ್ದಾರೆ.

ಜಾನ್ವಿ ಕಪೂರ್ ಅವರು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು ಹಿಂದಿ ಸಿನಿಮಾ ಮೂಲಕ. ‘ದಡಕ್’ ಅವರ ನಟನೆಯ ಮೊದಲ ಸಿನಿಮಾ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿತು. ಇದಾದ ಬಳಿಕ ಜಾನ್ವಿ ಕಪೂರ್ ಅವರಿಗೆ ಹೇಳಿಕೊಳ್ಳುವಂತಹ ಗೆಲುವು ಸಿಗಲಿಲ್ಲ. ಅವರಿಗೆ ನಟನೆಯೇ ಬರುವುದಿಲ್ಲ ಎಂದು ಅನೇಕರು ಟೀಕೆ ಮಾಡಿದ್ದಿದೆ. ಈ ಟೀಕೆಗಳನ್ನು ನಿರ್ಲಕ್ಷಿಸಿ ಅವರು ಹೊಸ ಹೊಸ ಆಫರ್ ಗಿಟ್ಟಿಸಿಕೊಳ್ಳುತ್ತಿದ್ದಾರೆ. ಈಗ ರಾಮ್ ಚರಣ್ ಜೊತೆ ತೆರೆ ಹಂಚಿಕೊಳ್ಳುವ ಅವಕಾಶ ಅವರಿಗೆ ಸಿಕ್ಕಿದೆ.

ರಾಮ್​ ಚರಣ್ ಸದ್ಯ ‘ಗೇಮ್ ಚೇಂಜರ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಅವರು ‘RC 16’ ಕೆಲಸಗಳಲ್ಲಿ ತೊಡಗಿಕೊಳ್ಳಲಿದ್ದಾರೆ. ‘ಉಪ್ಪೇನ’ ಖ್ಯಾತಿಯ ಬುಚ್ಚಿ ಬಾಬು ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ. ಈ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿಯಾಗಿ ಫೈನಲ್ ಆಗಿದ್ದಾರೆ ಎಂದು ವರದಿ ಆಗಿದೆ. ಹಳ್ಳಿಯಲ್ಲಿ ನಡೆಯೋ ಕಥೆ ಇದಾಗಿದ್ದು, ಜಾನ್ವಿ ಡಿಗ್ಲಾಮ್ ಲುಕ್​ನಲ್ಲಿ ಮಿಂಚಲು ರೆಡಿ ಆಗಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ಬುಚ್ಚಿ ಬಾಬು ಅವರು ಸಿನಿಮಾದ ಕಥೆಯನ್ನು ಜಾನ್ವಿ ಕಪೂರ್ ಅವರಿಗೆ ಹೇಳಿದ್ದಾರೆ. ಅವರು ಈ ಕಥೆಯನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ. ಮತ್ತೊಂದು ತೆಲುಗು ಸಿನಿಮಾ ಸಿಕ್ಕಿದ್ದಕ್ಕೆ ಅವರು ಖುಷಿಯಾಗಿದ್ದಾರೆ. ಈ ಮೊದಲು ರವೀನಾ ಟಂಡನ್ ಮಗಳು ರಾಶಾ ತಡಾನಿ ಅವರು ಈ ಚಿತ್ರಕ್ಕೆ ನಾಯಕಿಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ, ವಯಸ್ಸಿನ ಅಂತರವನ್ನು ಗಮನದಲ್ಲಿ ಇಟ್ಟುಕೊಂಡು ಅವರನ್ನು ಕೈಬಿಡಲಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ‘ಲಾಲ್ ಸಲಾಂ ಕಥೆ ಬೋರಿಂಗ್ ಆಗಿತ್ತು’; ತಮ್ಮದೇ ಸಿನಿಮಾ ಬಗ್ಗೆ ಎಆರ್ ರೆಹಮಾನ್ ಮಾತು 

ಈ ಚಿತ್ರಕ್ಕೆ ಖ್ಯಾತ ಸಂಗೀತ ಸಂಯೋಜಕ ಎಆರ್ ರೆಹಮಾನ್ ಅವರು ಮ್ಯೂಸಿಕ್ ಕಂಪೋಸ್ ಮಾಡಲಿದ್ದಾರೆ. ಈಗಾಗಲೇ ಇದರ ಕೆಲಸಗಳು ಆರಂಭ ಆಗಿವೆ. ನಿರ್ದೇಶಕರಿಗೆ ಈಗಾಗಲೇ ಕೆಲವು ಟ್ಯೂನ್​ಗಳನ್ನು ಅವರು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ