AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janhvi Kapoor: ಟಾಪ್​ ನಟಿಯರಿಗಿಂತ ಹೆಚ್ಚು ಸಂಭಾವನೆ ಪಡೆದ ಜಾನ್ವಿ ಕಪೂರ್; ‘ಎನ್​ಟಿಆರ್​ 30’ ತಂದ ಅದೃಷ್ಟ

Janhvi Kapoor Remuneration: ಜಾನ್ವಿ ಕಪೂರ್ ಅವರಿಗೆ ಬ್ಯಾಕ್​ ಟು ಬ್ಯಾಕ್​ ಅವಕಾಶಗಳು ಸಿಗುತ್ತಿದೆ. ಅದಕ್ಕೆ ನೆಪೋಟಿಸಂ ಕಾರಣ ಎಂದು ಬಹುತೇಕರು ಆರೋಪಿಸುತ್ತಿದ್ದಾರೆ.

Janhvi Kapoor: ಟಾಪ್​ ನಟಿಯರಿಗಿಂತ ಹೆಚ್ಚು ಸಂಭಾವನೆ ಪಡೆದ ಜಾನ್ವಿ ಕಪೂರ್; ‘ಎನ್​ಟಿಆರ್​ 30’ ತಂದ ಅದೃಷ್ಟ
ಜಾನ್ವಿ ಕಪೂರ್
ಮದನ್​ ಕುಮಾರ್​
|

Updated on: Mar 07, 2023 | 2:06 PM

Share

ಬಾಲಿವುಡ್​ನಲ್ಲಿ ನಟಿ ಜಾನ್ವಿ ಕಪೂರ್​ (Janhvi Kapoor) ಅವರು ಬ್ಯುಸಿ ಆಗಿದ್ದಾರೆ. ಈಗ ಅವರು ದಕ್ಷಿಣ ಭಾರತಕ್ಕೂ ಕಾಲಿಡುತ್ತಿದ್ದಾರೆ. ಮೊದಲ ಬಾರಿಗೆ ತೆಲುಗು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಜೂನಿಯರ್​ ಎನ್​ಟಿಆರ್​ (Jr NTR) ಅಭಿನಯದ 30ನೇ ಚಿತ್ರಕ್ಕೆ ಜಾನ್ವಿ ಕಪೂರ್​ ನಾಯಕಿ. ಈ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದಕ್ಕೆ ಎಲ್ಲರೂ ಅವರಿಗೆ ಅಭಿನಂದನೆ ತಿಳಿಸುತ್ತಿದ್ದಾರೆ. ಸೋಮವಾರ (ಮಾ.6) ಈ ಸುದ್ದಿಯನ್ನು ಹಂಚಿಕೊಳ್ಳುವುದರ ಜೊತೆಗೆ ಜಾನ್ವಿ ಕಪೂರ್​ ಅವರ ಫಸ್ಟ್​ ಲುಕ್​ ಕೂಡ ಅನಾವರಣ ಆಗಿದೆ. ಅದರ ಬೆನ್ನಲ್ಲೇ ಸಂಭಾವನೆ (Janhvi Kapoor Remuneration) ಬಗ್ಗೆ ಸುದ್ದಿ ಹಬ್ಬಿದೆ. ಟಾಲಿವುಡ್​ ಟಾಪ್​ ನಟಿಯರಿಗಿಂತಲೂ ಹೆಚ್ಚು ಸಂಭಾವನೆಯನ್ನು ಜಾನ್ವಿ ಕಪೂರ್​ ಅವರಿಗೆ ನೀಡಲಾಗುತ್ತಿದೆ ಎಂಬ ಗಾಸಿಪ್​ ಹರಿದಾಡುತ್ತಿದೆ.

ಜಾನ್ವಿ ಕಪೂರ್​ ಅವರು ಈವರೆಗೂ ಹೇಳಿಕೊಳ್ಳುವಂತಹ ಹಿಟ್​ ನೀಡಿಲ್ಲ. ಮೊದಲ ಸಿನಿಮಾ ‘ಧಡಕ್​’ ಕೊಂಚ ಸದ್ದು ಮಾಡಿದ್ದು ಬಿಟ್ಟರೆ ಇನ್ನುಳಿದ ಚಿತ್ರಗಳು ಜನರಿಗೆ ಇಷ್ಟ ಆಗಲಿಲ್ಲ. ಆದರೂ ಕೂಡ ಅವರಿಗೆ ಬ್ಯಾಕ್​ ಟು ಬ್ಯಾಕ್​ ಅವಕಾಶಗಳು ಸಿಗುತ್ತಿವೆ. ಅದಕ್ಕೆ ನೆಪೋಟಿಸಂ ಕಾರಣ ಎಂದು ಬಹುತೇಕರು ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: NTR 30: ಜೂನಿಯರ್​ ಎನ್​ಟಿಆರ್​ 30ನೇ ಚಿತ್ರಕ್ಕೆ ಜಾನ್ವಿ ಕಪೂರ್​ ನಾಯಕಿ; ಇಲ್ಲಿದೆ ಫಸ್ಟ್​ ಲುಕ್​

ಇದನ್ನೂ ಓದಿ
Image
44 ಕೋಟಿ ರೂಪಾಯಿಗೆ ಮನೆ ಮಾರಿಕೊಂಡ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​; ಖರೀದಿಸಿದ ಹೀರೋ ಯಾರು?
Image
ಡಿಗ್ಲಾಮ್ ಲುಕ್​ನಲ್ಲಿ ನಟಿ ಜಾನ್ವಿ ಕಪೂರ್​; ಆದರೆ, ಈ ನಟಿ ನೀವಂದುಕೊಂಡ ಹಾಗಲ್ಲ
Image
Janhvi Kapoor: ಜಾನ್ವಿ ಕಪೂರ್​ ಫೋಟೋ ವೈರಲ್​; ಶ್ರೀದೇವಿ ಪುತ್ರಿಯ ಅಂದ-ಚಂದ ಕಂಡು ವಾವ್​ ಎಂದ ಅಭಿಮಾನಿಗಳು
Image
Janhvi Kapoor: ಪ್ರಕೃತಿಯ ಮಡಿಲಿನಲ್ಲಿ ಜಾನ್ವಿ ಕಪೂರ್ ವಿಹಾರ; ಫೋಟೋಗಳಿಗೆ ಮಸ್ತ್​ ಪೋಸ್​​

ಶ್ರೀದೇವಿ ಮತ್ತು ಬೋನಿ ಕಪೂರ್​ ದಂಪತಿಯ ಪುತ್ರಿ ಜಾನ್ವಿ ಕಪೂರ್​. ಹಾಗಾಗಿ ಅವರಿಗೆ ಸುಲಭವಾಗಿ ಚಾನ್ಸ್​ ಸಿಗುತ್ತಿದೆ. ಚಾನ್ಸ್​ ಮಾತ್ರವಲ್ಲದೇ ನಿರೀಕ್ಷೆಗೂ ಮೀರಿ ಅವರು ಸಂಭಾವನೆ ಪಡೆಯುತ್ತಿದ್ದಾರೆ ಎನ್ನಲಾಗುತ್ತಿದೆ. ‘ಎನ್​ಟಿಆರ್​ 30’ ಚಿತ್ರದಲ್ಲಿ ನಟಿಸಲು ಜಾನ್ವಿ ಕಪೂರ್​ ಅವರಿಗೆ ಬರೋಬ್ಬರಿ 4 ಕೋಟಿ ರೂಪಾಯಿ ಸಂಬಳ ನೀಡಲಾಗುತ್ತಿದೆ ಎಂಬ ಗಾಸಿಪ್​ ಕೇಳಿಬಂದಿದೆ.

ಇದನ್ನೂ ಓದಿ: Janhvi Kapoor: ‘ಅವಕಾಶ ಇದೆ ಆದರೆ ಗೌರವ ಮಾತ್ರ ಸಿಗುತ್ತಿಲ್ಲ’; ನಟಿ ಜಾನ್ವಿ ಕಪೂರ್ ಬೇಸರದ ನುಡಿ

ಟಾಲಿವುಡ್​ನಲ್ಲಿ ಪ್ರಚಲಿತದಲ್ಲಿ ಇರುವ ಬಹುತೇಕ ನಟಿಯರು ಎರಡು ಅಥವಾ ಮೂರು ಕೋಟಿ ರೂಪಾಯಿ ಆಸುಪಾಸಿನಲ್ಲಿ ಸಂಭಾವನೆ ಪಡೆಯುತ್ತಿದ್ದಾರೆ. ಆದರೆ ಜಾನ್ವಿ ಕಪೂರ್​ ಅವರು ಏಕಾಏಕಿ 4 ಕೋಟಿ ರೂಪಾಯಿ ಜೇಬಿಗೆ ಇಳಿಸಿಕೊಳ್ಳುತ್ತಿದ್ದಾರೆ. ಸ್ಟಾರ್​ ಕಿಡ್​ ಎಂಬ ಕಾರಣಕ್ಕೆ ಅವರಿಗೆ ವಿಶೇಷ ಆತಿಥ್ಯ ನೀಡಲಾಗುತ್ತಿದೆ. ಅಲ್ಲದೇ ಅವರು ಮೊದಲ ಬಾರಿಗೆ ತೆಲುಗು ಸಿನಿಮಾ ಒಪ್ಪಿಕೊಂಡಿರುವುದು ಕೂಡ ಅವರ ಸಂಭಾವನೆ ಹೆಚ್ಚಲು ಕಾರಣ.

ಇದನ್ನೂ ಓದಿ: Janhvi Kapoor: ತಂದೆ, ತಂಗಿ ಜೊತೆ ಫ್ಯಾಮಿಲಿ ಟ್ರಿಪ್​ ಹೊರಟ ಜಾನ್ವಿ ಕಪೂರ್​; ಸಾಥ್​ ನೀಡಿದ ಬಾಯ್​ಫ್ರೆಂಡ್​

ಪ್ಯಾನ್​ ಇಂಡಿಯಾ ಮಟ್ಟದಲ್ಲಿ ‘ಎನ್​ಟಿಆರ್​ 30’ ಸಿನಿಮಾ ಮೂಡಿಬರಲಿದೆ. ಹಾಗಾಗಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಫೇಮಸ್​ ಆಗಿರುವ ನಟಿಯನ್ನು ಆಯ್ಕೆ ಮಾಡಿಕೊಳ್ಳುವುದು ಚಿತ್ರತಂಡಕ್ಕೆ ಅನಿವಾರ್ಯ ಆಗಿತ್ತು. ಹಾಗಾಗಿ ಜಾನ್ವಿ ಕಪೂರ್​ಗೆ ಇಷ್ಟು ದುಬಾರಿ ಸಂಭಾವನೆ ನೀಡಲು ನಿರ್ಮಾಪಕರು ಒಪ್ಪಿದ್ದಾರೆ ಎಂಬ ಮಾತು ಕೇಳಿಬಂದಿದೆ. ಈ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?