AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಕಾಲಿಡೋಕೆ ರೆಡಿ ಆದ ಸೂರ್ಯ; ಜೊತೆಯಾಗಲಿದ್ದಾರೆ ಜಾನ್ವಿ ಕಪೂರ್?

ರಾಕೇಶ್ ಓಂಪ್ರಕಾಶ್ ಮೆಹ್ರಾ ಅವರು ಹಿಂದಿಯಲ್ಲಿ ಸಿನಿಮಾ ಒಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸೂರ್ಯ ಅವರು ಹೀರೋ ಆಗಿ ನಟಿಸಲಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ಜಾನ್ವಿ ಕಪೂರ್ ಅವರನ್ನು ಆಯ್ಕೆ ಮಾಡಿಕೊಳ್ಳಲು ಪ್ಲಾನ್ ನಡೆದಿದೆ ಎನ್ನಲಾಗುತ್ತಿದೆ.

ಬಾಲಿವುಡ್​ಗೆ ಕಾಲಿಡೋಕೆ ರೆಡಿ ಆದ ಸೂರ್ಯ; ಜೊತೆಯಾಗಲಿದ್ದಾರೆ ಜಾನ್ವಿ ಕಪೂರ್?
ಜಾನ್ವಿ-ಸೂರ್ಯ
ರಾಜೇಶ್ ದುಗ್ಗುಮನೆ
|

Updated on: Jan 17, 2024 | 3:16 PM

Share

ನಟ ಸೂರ್ಯ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಸದ್ಯ ಅವರು ‘ಕಂಗುವ’ ಸಿನಿಮಾ (Kanguva Movie) ಶೂಟ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದಲ್ಲಿ ಅವರು ಹಲವು ಅವತಾರ ತಾಳಲಿದ್ದಾರೆ. ಈ ಸಿನಿಮಾ ಪೂರ್ಣಗೊಂಡ ಬಳಿಕ ಅವರು ಬಾಲಿವುಡ್​ನತ್ತ (Bollywood News) ಮುಖ ಮಾಡಲಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಬಗ್ಗೆ ಹೊಸ ಹೊಸ ಅಪ್​​ಡೇಟ್ ಕೇಳಿ ಬರುತ್ತಿದೆ. ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಸೂರ್ಯ ಅವರಿಗೆ ಜೊತೆಯಾಗಿ ಜಾನ್ವಿ ಕಪೂರ್ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಕೇಶ್ ಓಂಪ್ರಕಾಶ್ ಮೆಹ್ರಾ ಅವರು ಹಿಂದಿಯಲ್ಲಿ ಸಿನಿಮಾ ಒಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸೂರ್ಯ ಅವರು ಹೀರೋ ಆಗಿ ನಟಿಸಲಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ಜಾನ್ವಿ ಕಪೂರ್ ಅವರನ್ನು ಆಯ್ಕೆ ಮಾಡಿಕೊಳ್ಳಲು ಪ್ಲಾನ್ ನಡೆದಿದೆ ಎನ್ನಲಾಗುತ್ತಿದೆ. ಈ ಪಾತ್ರಕ್ಕೆ ಅವರು ಸೂಕ್ತ ಎನ್ನುವ ಆಲೋಚನೆ ರಾಕೇಶ್ ಅವರದ್ದು.

ಸೂರ್ಯ ಹಾಗೂ ರಾಕೇಶ್ ಒಟ್ಟಾಗಿ ಕೆಲಸ ಮಾಡುತ್ತಿರುವ ಸಿನಿಮಾ ಬಜೆಟ್ 500 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾ ಮೂಲಕ ಸೂರ್ಯ ಅವರು ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಕೆಲವು ಮೂಲಗಳ ಪ್ರಕಾರ ಇದು ‘ಮಹಾಭಾರತ’ವನ್ನು ಆಧರಿಸಿ ಸಿದ್ಧಗೊಳ್ಳುತ್ತಿರುವ ಸಿನಿಮಾ ಎನ್ನಲಾಗಿದೆ. ಇದರಲ್ಲಿ ಸೂರ್ಯ ಅವರು ಕರ್ಣನಾಗಿ ನಟಿಸುತ್ತಿದ್ದಾರಂತೆ.

ಇದನ್ನೂ ಓದಿ: ಹುಡುಗರು ಜಾನ್ವಿನ ​ನೋಡಿದಾಕ್ಷಣ ಮೊದಲು ಗಮನಿಸೋದೇನು? ಮುಚ್ಚುಮರೆ ಇಲ್ಲದೆ ಉತ್ತರಿಸಿದ ನಟಿ  

ಸದ್ಯ ಸೂರ್ಯ ನಟನೆಯ ‘ಕಂಗುವ’ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರದ ಟೀಸರ್ ಗಮನ ಸೆಳೆದಿದೆ. ಸೂರ್ಯ ಅವರು ಕಂಗುವಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರು ಹಲವು ಗೆಟಪ್​ಗಳಲ್ಲಿ ಬರಲಿದ್ದಾರೆ. ದಿಶಾ ಪಟಾಣಿ, ಬಾಬಿ ಡಿಯೋಲ್, ಜಗಪತಿ ಬಾಬು ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.  ಈ ಚಿತ್ರವನ್ನು ಶಿವ ನಿರ್ದೇಶನ ಮಾಡುತ್ತಿದ್ದಾರೆ. ಕಂಗುವಾ ಸಿನಿಮಾ 350 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ