ಬಾಲಿವುಡ್​ಗೆ ಕಾಲಿಡೋಕೆ ರೆಡಿ ಆದ ಸೂರ್ಯ; ಜೊತೆಯಾಗಲಿದ್ದಾರೆ ಜಾನ್ವಿ ಕಪೂರ್?

ರಾಕೇಶ್ ಓಂಪ್ರಕಾಶ್ ಮೆಹ್ರಾ ಅವರು ಹಿಂದಿಯಲ್ಲಿ ಸಿನಿಮಾ ಒಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸೂರ್ಯ ಅವರು ಹೀರೋ ಆಗಿ ನಟಿಸಲಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ಜಾನ್ವಿ ಕಪೂರ್ ಅವರನ್ನು ಆಯ್ಕೆ ಮಾಡಿಕೊಳ್ಳಲು ಪ್ಲಾನ್ ನಡೆದಿದೆ ಎನ್ನಲಾಗುತ್ತಿದೆ.

ಬಾಲಿವುಡ್​ಗೆ ಕಾಲಿಡೋಕೆ ರೆಡಿ ಆದ ಸೂರ್ಯ; ಜೊತೆಯಾಗಲಿದ್ದಾರೆ ಜಾನ್ವಿ ಕಪೂರ್?
ಜಾನ್ವಿ-ಸೂರ್ಯ
Follow us
|

Updated on: Jan 17, 2024 | 3:16 PM

ನಟ ಸೂರ್ಯ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಸದ್ಯ ಅವರು ‘ಕಂಗುವ’ ಸಿನಿಮಾ (Kanguva Movie) ಶೂಟ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದಲ್ಲಿ ಅವರು ಹಲವು ಅವತಾರ ತಾಳಲಿದ್ದಾರೆ. ಈ ಸಿನಿಮಾ ಪೂರ್ಣಗೊಂಡ ಬಳಿಕ ಅವರು ಬಾಲಿವುಡ್​ನತ್ತ (Bollywood News) ಮುಖ ಮಾಡಲಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಬಗ್ಗೆ ಹೊಸ ಹೊಸ ಅಪ್​​ಡೇಟ್ ಕೇಳಿ ಬರುತ್ತಿದೆ. ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಸೂರ್ಯ ಅವರಿಗೆ ಜೊತೆಯಾಗಿ ಜಾನ್ವಿ ಕಪೂರ್ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಕೇಶ್ ಓಂಪ್ರಕಾಶ್ ಮೆಹ್ರಾ ಅವರು ಹಿಂದಿಯಲ್ಲಿ ಸಿನಿಮಾ ಒಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸೂರ್ಯ ಅವರು ಹೀರೋ ಆಗಿ ನಟಿಸಲಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ಜಾನ್ವಿ ಕಪೂರ್ ಅವರನ್ನು ಆಯ್ಕೆ ಮಾಡಿಕೊಳ್ಳಲು ಪ್ಲಾನ್ ನಡೆದಿದೆ ಎನ್ನಲಾಗುತ್ತಿದೆ. ಈ ಪಾತ್ರಕ್ಕೆ ಅವರು ಸೂಕ್ತ ಎನ್ನುವ ಆಲೋಚನೆ ರಾಕೇಶ್ ಅವರದ್ದು.

ಸೂರ್ಯ ಹಾಗೂ ರಾಕೇಶ್ ಒಟ್ಟಾಗಿ ಕೆಲಸ ಮಾಡುತ್ತಿರುವ ಸಿನಿಮಾ ಬಜೆಟ್ 500 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾ ಮೂಲಕ ಸೂರ್ಯ ಅವರು ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಕೆಲವು ಮೂಲಗಳ ಪ್ರಕಾರ ಇದು ‘ಮಹಾಭಾರತ’ವನ್ನು ಆಧರಿಸಿ ಸಿದ್ಧಗೊಳ್ಳುತ್ತಿರುವ ಸಿನಿಮಾ ಎನ್ನಲಾಗಿದೆ. ಇದರಲ್ಲಿ ಸೂರ್ಯ ಅವರು ಕರ್ಣನಾಗಿ ನಟಿಸುತ್ತಿದ್ದಾರಂತೆ.

ಇದನ್ನೂ ಓದಿ: ಹುಡುಗರು ಜಾನ್ವಿನ ​ನೋಡಿದಾಕ್ಷಣ ಮೊದಲು ಗಮನಿಸೋದೇನು? ಮುಚ್ಚುಮರೆ ಇಲ್ಲದೆ ಉತ್ತರಿಸಿದ ನಟಿ  

ಸದ್ಯ ಸೂರ್ಯ ನಟನೆಯ ‘ಕಂಗುವ’ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರದ ಟೀಸರ್ ಗಮನ ಸೆಳೆದಿದೆ. ಸೂರ್ಯ ಅವರು ಕಂಗುವಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರು ಹಲವು ಗೆಟಪ್​ಗಳಲ್ಲಿ ಬರಲಿದ್ದಾರೆ. ದಿಶಾ ಪಟಾಣಿ, ಬಾಬಿ ಡಿಯೋಲ್, ಜಗಪತಿ ಬಾಬು ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.  ಈ ಚಿತ್ರವನ್ನು ಶಿವ ನಿರ್ದೇಶನ ಮಾಡುತ್ತಿದ್ದಾರೆ. ಕಂಗುವಾ ಸಿನಿಮಾ 350 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ