AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ಗೆ ಕಾಲಿಡೋಕೆ ರೆಡಿ ಆದ ಸೂರ್ಯ; ಜೊತೆಯಾಗಲಿದ್ದಾರೆ ಜಾನ್ವಿ ಕಪೂರ್?

ರಾಕೇಶ್ ಓಂಪ್ರಕಾಶ್ ಮೆಹ್ರಾ ಅವರು ಹಿಂದಿಯಲ್ಲಿ ಸಿನಿಮಾ ಒಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸೂರ್ಯ ಅವರು ಹೀರೋ ಆಗಿ ನಟಿಸಲಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ಜಾನ್ವಿ ಕಪೂರ್ ಅವರನ್ನು ಆಯ್ಕೆ ಮಾಡಿಕೊಳ್ಳಲು ಪ್ಲಾನ್ ನಡೆದಿದೆ ಎನ್ನಲಾಗುತ್ತಿದೆ.

ಬಾಲಿವುಡ್​ಗೆ ಕಾಲಿಡೋಕೆ ರೆಡಿ ಆದ ಸೂರ್ಯ; ಜೊತೆಯಾಗಲಿದ್ದಾರೆ ಜಾನ್ವಿ ಕಪೂರ್?
ಜಾನ್ವಿ-ಸೂರ್ಯ
ರಾಜೇಶ್ ದುಗ್ಗುಮನೆ
|

Updated on: Jan 17, 2024 | 3:16 PM

Share

ನಟ ಸೂರ್ಯ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಸದ್ಯ ಅವರು ‘ಕಂಗುವ’ ಸಿನಿಮಾ (Kanguva Movie) ಶೂಟ್​ನಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾದಲ್ಲಿ ಅವರು ಹಲವು ಅವತಾರ ತಾಳಲಿದ್ದಾರೆ. ಈ ಸಿನಿಮಾ ಪೂರ್ಣಗೊಂಡ ಬಳಿಕ ಅವರು ಬಾಲಿವುಡ್​ನತ್ತ (Bollywood News) ಮುಖ ಮಾಡಲಿದ್ದಾರೆ ಎನ್ನಲಾಗಿದೆ. ಈ ಚಿತ್ರದ ಬಗ್ಗೆ ಹೊಸ ಹೊಸ ಅಪ್​​ಡೇಟ್ ಕೇಳಿ ಬರುತ್ತಿದೆ. ಈಗ ಕೇಳಿ ಬರುತ್ತಿರುವ ಮಾಹಿತಿ ಪ್ರಕಾರ ಸೂರ್ಯ ಅವರಿಗೆ ಜೊತೆಯಾಗಿ ಜಾನ್ವಿ ಕಪೂರ್ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ರಾಕೇಶ್ ಓಂಪ್ರಕಾಶ್ ಮೆಹ್ರಾ ಅವರು ಹಿಂದಿಯಲ್ಲಿ ಸಿನಿಮಾ ಒಂದನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಸೂರ್ಯ ಅವರು ಹೀರೋ ಆಗಿ ನಟಿಸಲಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ಜಾನ್ವಿ ಕಪೂರ್ ಅವರನ್ನು ಆಯ್ಕೆ ಮಾಡಿಕೊಳ್ಳಲು ಪ್ಲಾನ್ ನಡೆದಿದೆ ಎನ್ನಲಾಗುತ್ತಿದೆ. ಈ ಪಾತ್ರಕ್ಕೆ ಅವರು ಸೂಕ್ತ ಎನ್ನುವ ಆಲೋಚನೆ ರಾಕೇಶ್ ಅವರದ್ದು.

ಸೂರ್ಯ ಹಾಗೂ ರಾಕೇಶ್ ಒಟ್ಟಾಗಿ ಕೆಲಸ ಮಾಡುತ್ತಿರುವ ಸಿನಿಮಾ ಬಜೆಟ್ 500 ಕೋಟಿ ರೂಪಾಯಿಗೂ ಅಧಿಕವಾಗಿದೆ. ಈ ಸಿನಿಮಾ ಮೂಲಕ ಸೂರ್ಯ ಅವರು ಹಿಂದಿ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಕೆಲವು ಮೂಲಗಳ ಪ್ರಕಾರ ಇದು ‘ಮಹಾಭಾರತ’ವನ್ನು ಆಧರಿಸಿ ಸಿದ್ಧಗೊಳ್ಳುತ್ತಿರುವ ಸಿನಿಮಾ ಎನ್ನಲಾಗಿದೆ. ಇದರಲ್ಲಿ ಸೂರ್ಯ ಅವರು ಕರ್ಣನಾಗಿ ನಟಿಸುತ್ತಿದ್ದಾರಂತೆ.

ಇದನ್ನೂ ಓದಿ: ಹುಡುಗರು ಜಾನ್ವಿನ ​ನೋಡಿದಾಕ್ಷಣ ಮೊದಲು ಗಮನಿಸೋದೇನು? ಮುಚ್ಚುಮರೆ ಇಲ್ಲದೆ ಉತ್ತರಿಸಿದ ನಟಿ  

ಸದ್ಯ ಸೂರ್ಯ ನಟನೆಯ ‘ಕಂಗುವ’ ಸಾಕಷ್ಟು ಸದ್ದು ಮಾಡುತ್ತಿದೆ. ಈ ಚಿತ್ರದ ಟೀಸರ್ ಗಮನ ಸೆಳೆದಿದೆ. ಸೂರ್ಯ ಅವರು ಕಂಗುವಾ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅವರು ಹಲವು ಗೆಟಪ್​ಗಳಲ್ಲಿ ಬರಲಿದ್ದಾರೆ. ದಿಶಾ ಪಟಾಣಿ, ಬಾಬಿ ಡಿಯೋಲ್, ಜಗಪತಿ ಬಾಬು ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.  ಈ ಚಿತ್ರವನ್ನು ಶಿವ ನಿರ್ದೇಶನ ಮಾಡುತ್ತಿದ್ದಾರೆ. ಕಂಗುವಾ ಸಿನಿಮಾ 350 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ