AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆ ಉಟ್ಟು ತಿರುಪತಿಗೆ ಭೇಟಿ ಕೊಟ್ಟ ನಟಿ ಜಾನ್ವಿ ಕಪೂರ್; ‘ದೇವರ’ ಶೂಟಿಂಗ್​ ಮುನ್ನ ದೇವರ ದರ್ಶನ

ಜಾನ್ವಿ ಕಪೂರ್ ಅವರು ಇಂದು (ಆಗಸ್ಟ್ 28) ಮುಂಜಾನೆ ತಿರುಮಲಕ್ಕೆ ಆಗಮಿಸಿದ್ದಾರೆ. ಅವರ ಜೊತೆ ಸೆಲ್ಫಿ ತೆಗೆದುಕೊಳ್ಳೋಕೆ ಕೆಲವರು ಪ್ರಯತ್ನಿಸಿದ್ದಾರೆ. ಆದರೆ, ಜಾನ್ವಿ ಬಾಡಿಗಾರ್ಡ್ಸ್ ಇದಕ್ಕೆ ಅವಕಾಶ ನೀಡಿಲ್ಲ. ದೇವರ ದರ್ಶನ ಪಡೆದ ಬಳಿಕ ಅವರು ಶೂಟಿಂಗ್​ನಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗುತ್ತಿದೆ.

ಸೀರೆ ಉಟ್ಟು ತಿರುಪತಿಗೆ ಭೇಟಿ ಕೊಟ್ಟ ನಟಿ ಜಾನ್ವಿ ಕಪೂರ್; ‘ದೇವರ’ ಶೂಟಿಂಗ್​ ಮುನ್ನ ದೇವರ ದರ್ಶನ
ಜಾನ್ವಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Aug 28, 2023 | 11:30 AM

ನಟಿ ಜಾನ್ವಿ ಕಪೂರ್ (Janhvi Kapoor) ಅವರು ಈಗ ಬಾಲಿವುಡ್​ ಜೊತೆ ದಕ್ಷಿಣ ಭಾರತದಲ್ಲೂ ಬ್ಯುಸಿ ಆಗಿದ್ದಾರೆ. ಜೂನಿಯರ್ ಎನ್​ಟಿಆರ್ (Jr NTR) ನಟನೆಯ ‘ದೇವರ’ ಸಿನಿಮಾದಲ್ಲಿ ಅವರು ಬಣ್ಣ ಹಚ್ಚುತ್ತಿದ್ದಾರೆ. ಈ ಚಿತ್ರದ ಶೂಟಿಂಗ್​ಗಾಗಿ ಅವರು ಆಗಾಗ ಹೈದರಾಬಾದ್​ಗೆ ಬರುತ್ತಿರುತ್ತಾರೆ. ಈಗ ಅವರು ಬಿಡುವು ಮಾಡಿಕೊಂಡು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಸೀರೆ ಉಟ್ಟು ಅವರು ತಿರುಪತಿಗೆ ತೆರಳಿದ ವಿಡಿಯೋ ವೈರಲ್ ಆಗುತ್ತಿದೆ.  ಈ ವಿಡಿಯೋನ ಅಭಿಮಾನಿಗಳು ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಜಾನ್ವಿ ಕಪೂರ್ ತಾಯಿ ಶ್ರೀದೇವಿ ಅವರು ಬಾಲಿವುಡ್ ಜೊತೆಗೆ ದಕ್ಷಿಣ ಭಾರತದಲ್ಲೂ ಸಖತ್ ಫೇಮಸ್ ಆಗಿದ್ದರು. ಇಲ್ಲಿ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಜಾನ್ವಿ ಕೂಡ ತಾಯಿ ಸಾಗಿದ ಮಾರ್ಗದಲ್ಲೇ ಸಾಗುತ್ತಿದ್ದಾರೆ. ಅವರು ಕೂಡ ದಕ್ಷಿಣ ಭಾರತದಲ್ಲಿ ಬ್ಯುಸಿ ಆಗಿದ್ದಾರೆ. ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾದಲ್ಲಿ ಜಾನ್ವಿ ಅವರು ಬಣ್ಣ ಹಚ್ಚುತ್ತಿದ್ದಾರೆ.

ಜಾನ್ವಿ ಕಪೂರ್ ಅವರು ಇಂದು (ಆಗಸ್ಟ್ 28) ಮುಂಜಾನೆ ತಿರುಮಲಕ್ಕೆ ಆಗಮಿಸಿದ್ದಾರೆ. ಅವರ ಜೊತೆ ಸೆಲ್ಫಿ ತೆಗೆದುಕೊಳ್ಳೋಕೆ ಕೆಲವರು ಪ್ರಯತ್ನಿಸಿದ್ದಾರೆ. ಆದರೆ, ಜಾನ್ವಿ ಬಾಡಿಗಾರ್ಡ್ಸ್ ಇದಕ್ಕೆ ಅವಕಾಶ ನೀಡಿಲ್ಲ. ದೇವರ ದರ್ಶನ ಪಡೆದ ಬಳಿಕ ಅವರು ಶೂಟಿಂಗ್​ನಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಜಾನ್ವಿ ಕಪೂರ್​ ನಿಜ ಜೀವನದಲ್ಲೂ ನಟನೆ ಮಾಡ್ತಾರೆ ಅಂತ ಟ್ರೋಲ್​ ಮಾಡಿದ ನೆಟ್ಟಿಗರು; ಕಾರಣ ಏನು?

‘ದಡಕ್’ ಸಿನಿಮಾ ಮೂಲಕ ಜಾನ್ವಿ ಕಪೂರ್ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಈ ಸಿನಿಮಾ ಸಾಮಾನ್ಯ ಹಿಟ್ ಎನಿಸಿಕೊಂಡಿತು. ಈ ಚಿತ್ರ 2018ರಲ್ಲಿ ರಿಲೀಸ್ ಆಗಿತ್ತು. ಆ ಬಳಿಕ ರಿಲೀಸ್ ಆದ ಹಲವು ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಹೆಸರು ಮಾಡಿಲ್ಲ. ಸದ್ಯ ಅವರು ‘ಮಿಸ್ಟರ್ ಆ್ಯಂಡ್ ಮಿಸಸ್ ಮಾಹಿ’, ‘ದೇವರ’ ಸೇರಿ ಮೂರು ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ. ಬೋನಿ ಕಪೂರ್ ಹಾಗೂ ಶ್ರೀದೇವಿ ಮಗಳು ಎನ್ನುವ ಕಾರಣಕ್ಕೆ ಅವರಿಗೆ ಸುಲಭದಲ್ಲಿ ಅವಕಾಶ ದೊರೆತಿದೆ. ಆದರೆ, ಗೆಲುವು ಸಿಗೋದು ಕಷ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:09 am, Mon, 28 August 23

ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ