AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನ್ನಿ ಡಿಯೋಲ್ ಚಿತ್ರದಿಂದ ಅಚಾತುರ್ಯ; ‘ಜಾಟ್’ ಚಿತ್ರಕ್ಕೆ ಬೈಕಾಟ್ ಬಿಸಿ

ಸನ್ನಿ ಡಿಯೋಲ್ ಅವರ ‘ಜಾಟ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ, ಎಲ್‌ಟಿಟಿಇ ಸಂಘಟನೆಯನ್ನು ತಪ್ಪಾಗಿ ಚಿತ್ರಿಸಿದ ಆರೋಪದಿಂದ ವಿವಾದಕ್ಕೆ ಸಿಲುಕಿದೆ. ಈ ಚಿತ್ರದಲ್ಲಿ ಎಲ್‌ಟಿಟಿಇಯನ್ನು ಉಗ್ರ ಸಂಘಟನೆಯಾಗಿ ತೋರಿಸಿರುವುದು ತಮಿಳು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿವಾದದಿಂದ ಚಿತ್ರದ ಯಶಸ್ಸಿನ ಮೇಲೆ ಏನು ಪರಿಣಾಮ ಬೀರಲಿದೆ.

ಸನ್ನಿ ಡಿಯೋಲ್ ಚಿತ್ರದಿಂದ ಅಚಾತುರ್ಯ; ‘ಜಾಟ್’ ಚಿತ್ರಕ್ಕೆ ಬೈಕಾಟ್ ಬಿಸಿ
ಸನ್ನಿ ಡಿಯೋಲ್
ರಾಜೇಶ್ ದುಗ್ಗುಮನೆ
|

Updated on: Apr 15, 2025 | 11:41 AM

Share

ಬಾಲಿವುಡ್ ನಟ ಸನ್ನಿ ಡಿಯೋಲ್ (Sunny Deoal) ಅವರು ಕಳೆದ ವರ್ಷ ರಿಲೀಸ್ ಆದಗದರ್ 2 ಚಿತ್ರದಿಂದ ದೊಡ್ಡ ಯಶಸ್ಸು ಕಂಡರು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಈ ಚಿತ್ರದಿಂದಾಗಿ ಅವರ ಮೇಲೆ ನಿರ್ಮಾಪಕರಿಗೂ ನಂಬಿಕೆ ಬಂದಿದೆ. ಹೀಗಾಗಿ, ಅನೇಕ ನಿರ್ಮಾಪಕರು ಅವರ ಚಿತ್ರಗಳಿಗೆ ಬಂಡವಾಳ ಹೂಡಲು ಮುಂದೆ ಬರುತ್ತಿದ್ದಾರೆ. ಈಗ ಅವರ ನಟನೆಯ ‘ಜಾಟ್’ ಸಿನಿಮಾ ಏಪ್ರಿಲ್ 10ರಂದು ತೆರೆಗೆ ಬಂದಿದೆ. ಈ ಚಿತ್ರದಲ್ಲಿ ತಂಡದವರು ಮಾಡಿದ ತಪ್ಪು ವಿವಾದಕ್ಕೆ ಕಾರಣಾಗಿದೆ.

ಏಪ್ರಿಲ್ 10ರಂದು ‘ಜಾಟ್’ ಸಿನಿಮಾ ರಿಲೀಸ್ ಆಯಿತು. ತೆಲುಗು ನಿರ್ದೇಶಕ ಗೋಪಿಚಂದ್ ಮಲಿನೇನಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಥಿಯೇಟರ್​ನಲ್ಲಿ ಐದು ದಿನಕ್ಕೆ 44 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಬಾಲಿವುಡ್ ಚಿತ್ರಗಳು ಇತ್ತೀಚೆಗೆ ಕುಂಟುವ ಪರಿಸ್ಥಿತಿ ನಿರ್ಮಾಣ ಆಗಿದ್ದು, ಅವುಗಳಿಗೆ ಹೋಲಿಕೆ ಮಾಡಿದರೆ ಈ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡಿದ ಎಂದು ಅನೇಕರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ, ಈ ಚಿತ್ರದಲ್ಲಿ ‘ದಿ ಲಿಬರೇಷನ್ ಟೈಗರ್ಸ್ ಆಫ್ ತಮಿಳ್ ಈಲಂ’ ಅಥವಾ ಎಲ್​ಟಿಟಿಇನ ಉಗ್ರ ಸಂಘಟನೆ ಆಗಿ ತೋರಿಸಲಾಗಿದೆ.

ಎಲ್​ಟಿಟಿಇನ ಬೇರೆ ರೀತಿಯಲ್ಲಿ ತೋರಿಸಿರುವುದಕ್ಕೆ ಈ ಚಿತ್ರವನ್ನು ಬೈಕಾಟ್ ಮಾಡುವ ಆಗ್ರಹವು ಕೇಳಿ ಬಂದಿದೆ. ‘ಶ್ರೀಲಂಕಾದಲ್ಲಿ ತಮಿಳರ ವಿರುದ್ಧದ ವ್ಯವಸ್ಥಿತ ದಬ್ಬಾಳಿಕೆ ಮತ್ತು ನರಮೇಧ ತಡೆಯಲು ಎಲ್‌ಟಿಟಿಇ ಹುಟ್ಟಿಕೊಂಡಿತು. ನಿಮ್ಮ ನಿರೂಪಣೆಗೆ ಸರಿಹೊಂದುವಂತೆ ನಮ್ಮ ಇತಿಹಾಸವನ್ನು ಪುನಃ ಬರೆಯುವುದನ್ನು ನಿಲ್ಲಿಸಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ಎಲ್‌ಟಿಟಿಇ ಭಯೋತ್ಪಾದಕ ಗುಂಪು ಅಲ್ಲ. ಅದು ದಬ್ಬಾಳಿಕೆಯಿಂದ ಹುಟ್ಟಿದ ಪ್ರತಿರೋಧ ಶಕ್ತಿ. ಈ ಸಂಘಟನೆ ತಮಿಳು ಹಕ್ಕುಗಳು ಮತ್ತು ನ್ಯಾಯಕ್ಕಾಗಿ ಹೋರಾಡುತ್ತಿತ್ತು. ಜಾಟ್​ ಸ್ವಾತಂತ್ರ್ಯ ಹೋರಾಟವನ್ನು ನಾಚಿಕೆಯಿಲ್ಲದೆ ರಾಕ್ಷಸೀಕರಿಸುತ್ತದೆ. ಇತಿಹಾಸವನ್ನು ತಿರುಚಿದಾಗ ತಮಿಳರು ಮೌನವಾಗಿರುವುದಿಲ್ಲ’ ಎಂದು ಬರೆಯಲಾಗಿದೆ.

ಇದನ್ನೂ ಓದಿ
Image
ಮಗನನ್ನು ಫ್ಯಾಷನ್ ಶೋಗೆ ಕರೆದುಕೊಂಡು ಹೋಗಿ ಟ್ರೋಲ್ ಆದ ನತಾಶಾ
Image
‘ಮುದ್ದು ಸೊಸೆ’ ಧಾರಾವಾಹಿ: ತ್ರಿವಿಕ್ರಂ-ಪ್ರತಿಮಾ ವಯಸ್ಸಿನ ಅಂತರ ಇಷ್ಟೊಂದಾ?
Image
ಸೋಲು ಮರೆತು ವರ್ಕೌಟ್ ಶುರು ಮಾಡಿದ ಸಲ್ಮಾನ್ ಖಾನ್; ಈ ವಯಸ್ಸಲ್ಲೂ ಎಂಥಾ ಬಾಡಿ
Image
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ವೈಷ್ಣವಿ ಗೌಡ; ಹುಡುಗ ಯಾರು?

ಇದನ್ನೂ ಓದಿ: ಸನ್ನಿ ಡಿಯೋಲ್ ನಿಜವಾದ ಹೆಸರೇನು? ಈ ಹೆಸರು ಬಂದಿದ್ದೇಕೆ?

ಈ ಬಗ್ಗೆ ‘ಜಾಟ್’ ಸಿನಿಮಾ ತಂಡದವರು ಇನ್ನೂ ಪ್ರತಿಕ್ರಿಯಿಸಿಲ್ಲ. ಈ ಚಿತ್ರದಲ್ಲಿ ಸನ್ನಿ ಡಿಯೋಲ್ ಮುಖ್ಯಭೂಮಿಕೆಯಲ್ಲಿ ಇದ್ದಾರೆ. ರಣದೀಪ್ ಹೂಡ ಅವರು ರಣತುಂಗ ಹೆಸರಿನ ಶ್ರೀಲಂಕಾ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!