AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನ್ನಿ ಡಿಯೋಲ್ ಚಿತ್ರದಿಂದ ಅಚಾತುರ್ಯ; ‘ಜಾಟ್’ ಚಿತ್ರಕ್ಕೆ ಬೈಕಾಟ್ ಬಿಸಿ

ಸನ್ನಿ ಡಿಯೋಲ್ ಅವರ ‘ಜಾಟ್’ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರೂ, ಎಲ್‌ಟಿಟಿಇ ಸಂಘಟನೆಯನ್ನು ತಪ್ಪಾಗಿ ಚಿತ್ರಿಸಿದ ಆರೋಪದಿಂದ ವಿವಾದಕ್ಕೆ ಸಿಲುಕಿದೆ. ಈ ಚಿತ್ರದಲ್ಲಿ ಎಲ್‌ಟಿಟಿಇಯನ್ನು ಉಗ್ರ ಸಂಘಟನೆಯಾಗಿ ತೋರಿಸಿರುವುದು ತಮಿಳು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ವಿವಾದದಿಂದ ಚಿತ್ರದ ಯಶಸ್ಸಿನ ಮೇಲೆ ಏನು ಪರಿಣಾಮ ಬೀರಲಿದೆ.

ಸನ್ನಿ ಡಿಯೋಲ್ ಚಿತ್ರದಿಂದ ಅಚಾತುರ್ಯ; ‘ಜಾಟ್’ ಚಿತ್ರಕ್ಕೆ ಬೈಕಾಟ್ ಬಿಸಿ
ಸನ್ನಿ ಡಿಯೋಲ್
Follow us
ರಾಜೇಶ್ ದುಗ್ಗುಮನೆ
|

Updated on: Apr 15, 2025 | 11:41 AM

ಬಾಲಿವುಡ್ ನಟ ಸನ್ನಿ ಡಿಯೋಲ್ (Sunny Deoal) ಅವರು ಕಳೆದ ವರ್ಷ ರಿಲೀಸ್ ಆದಗದರ್ 2 ಚಿತ್ರದಿಂದ ದೊಡ್ಡ ಯಶಸ್ಸು ಕಂಡರು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಈ ಚಿತ್ರದಿಂದಾಗಿ ಅವರ ಮೇಲೆ ನಿರ್ಮಾಪಕರಿಗೂ ನಂಬಿಕೆ ಬಂದಿದೆ. ಹೀಗಾಗಿ, ಅನೇಕ ನಿರ್ಮಾಪಕರು ಅವರ ಚಿತ್ರಗಳಿಗೆ ಬಂಡವಾಳ ಹೂಡಲು ಮುಂದೆ ಬರುತ್ತಿದ್ದಾರೆ. ಈಗ ಅವರ ನಟನೆಯ ‘ಜಾಟ್’ ಸಿನಿಮಾ ಏಪ್ರಿಲ್ 10ರಂದು ತೆರೆಗೆ ಬಂದಿದೆ. ಈ ಚಿತ್ರದಲ್ಲಿ ತಂಡದವರು ಮಾಡಿದ ತಪ್ಪು ವಿವಾದಕ್ಕೆ ಕಾರಣಾಗಿದೆ.

ಏಪ್ರಿಲ್ 10ರಂದು ‘ಜಾಟ್’ ಸಿನಿಮಾ ರಿಲೀಸ್ ಆಯಿತು. ತೆಲುಗು ನಿರ್ದೇಶಕ ಗೋಪಿಚಂದ್ ಮಲಿನೇನಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಥಿಯೇಟರ್​ನಲ್ಲಿ ಐದು ದಿನಕ್ಕೆ 44 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಬಾಲಿವುಡ್ ಚಿತ್ರಗಳು ಇತ್ತೀಚೆಗೆ ಕುಂಟುವ ಪರಿಸ್ಥಿತಿ ನಿರ್ಮಾಣ ಆಗಿದ್ದು, ಅವುಗಳಿಗೆ ಹೋಲಿಕೆ ಮಾಡಿದರೆ ಈ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡಿದ ಎಂದು ಅನೇಕರು ಅಭಿಪ್ರಾಯ ಪಟ್ಟಿದ್ದಾರೆ. ಆದರೆ, ಈ ಚಿತ್ರದಲ್ಲಿ ‘ದಿ ಲಿಬರೇಷನ್ ಟೈಗರ್ಸ್ ಆಫ್ ತಮಿಳ್ ಈಲಂ’ ಅಥವಾ ಎಲ್​ಟಿಟಿಇನ ಉಗ್ರ ಸಂಘಟನೆ ಆಗಿ ತೋರಿಸಲಾಗಿದೆ.

ಎಲ್​ಟಿಟಿಇನ ಬೇರೆ ರೀತಿಯಲ್ಲಿ ತೋರಿಸಿರುವುದಕ್ಕೆ ಈ ಚಿತ್ರವನ್ನು ಬೈಕಾಟ್ ಮಾಡುವ ಆಗ್ರಹವು ಕೇಳಿ ಬಂದಿದೆ. ‘ಶ್ರೀಲಂಕಾದಲ್ಲಿ ತಮಿಳರ ವಿರುದ್ಧದ ವ್ಯವಸ್ಥಿತ ದಬ್ಬಾಳಿಕೆ ಮತ್ತು ನರಮೇಧ ತಡೆಯಲು ಎಲ್‌ಟಿಟಿಇ ಹುಟ್ಟಿಕೊಂಡಿತು. ನಿಮ್ಮ ನಿರೂಪಣೆಗೆ ಸರಿಹೊಂದುವಂತೆ ನಮ್ಮ ಇತಿಹಾಸವನ್ನು ಪುನಃ ಬರೆಯುವುದನ್ನು ನಿಲ್ಲಿಸಿ’ ಎಂದು ಕೆಲವರು ಬರೆದುಕೊಂಡಿದ್ದಾರೆ. ‘ಎಲ್‌ಟಿಟಿಇ ಭಯೋತ್ಪಾದಕ ಗುಂಪು ಅಲ್ಲ. ಅದು ದಬ್ಬಾಳಿಕೆಯಿಂದ ಹುಟ್ಟಿದ ಪ್ರತಿರೋಧ ಶಕ್ತಿ. ಈ ಸಂಘಟನೆ ತಮಿಳು ಹಕ್ಕುಗಳು ಮತ್ತು ನ್ಯಾಯಕ್ಕಾಗಿ ಹೋರಾಡುತ್ತಿತ್ತು. ಜಾಟ್​ ಸ್ವಾತಂತ್ರ್ಯ ಹೋರಾಟವನ್ನು ನಾಚಿಕೆಯಿಲ್ಲದೆ ರಾಕ್ಷಸೀಕರಿಸುತ್ತದೆ. ಇತಿಹಾಸವನ್ನು ತಿರುಚಿದಾಗ ತಮಿಳರು ಮೌನವಾಗಿರುವುದಿಲ್ಲ’ ಎಂದು ಬರೆಯಲಾಗಿದೆ.

ಇದನ್ನೂ ಓದಿ
Image
ಮಗನನ್ನು ಫ್ಯಾಷನ್ ಶೋಗೆ ಕರೆದುಕೊಂಡು ಹೋಗಿ ಟ್ರೋಲ್ ಆದ ನತಾಶಾ
Image
‘ಮುದ್ದು ಸೊಸೆ’ ಧಾರಾವಾಹಿ: ತ್ರಿವಿಕ್ರಂ-ಪ್ರತಿಮಾ ವಯಸ್ಸಿನ ಅಂತರ ಇಷ್ಟೊಂದಾ?
Image
ಸೋಲು ಮರೆತು ವರ್ಕೌಟ್ ಶುರು ಮಾಡಿದ ಸಲ್ಮಾನ್ ಖಾನ್; ಈ ವಯಸ್ಸಲ್ಲೂ ಎಂಥಾ ಬಾಡಿ
Image
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ವೈಷ್ಣವಿ ಗೌಡ; ಹುಡುಗ ಯಾರು?

ಇದನ್ನೂ ಓದಿ: ಸನ್ನಿ ಡಿಯೋಲ್ ನಿಜವಾದ ಹೆಸರೇನು? ಈ ಹೆಸರು ಬಂದಿದ್ದೇಕೆ?

ಈ ಬಗ್ಗೆ ‘ಜಾಟ್’ ಸಿನಿಮಾ ತಂಡದವರು ಇನ್ನೂ ಪ್ರತಿಕ್ರಿಯಿಸಿಲ್ಲ. ಈ ಚಿತ್ರದಲ್ಲಿ ಸನ್ನಿ ಡಿಯೋಲ್ ಮುಖ್ಯಭೂಮಿಕೆಯಲ್ಲಿ ಇದ್ದಾರೆ. ರಣದೀಪ್ ಹೂಡ ಅವರು ರಣತುಂಗ ಹೆಸರಿನ ಶ್ರೀಲಂಕಾ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್