AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಬಗ್ಗೆ ಅವಹೇಳನಕಾರಿ ಹೇಳಿಕೆ: ಜಾವೇದ್​ ಅಖ್ತರ್​ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಸುದ್ದಿ ವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ಜಾವೇದ್​ ಅಖ್ತರ್​ ಅವರು ಆರ್​ಎಸ್​ಎಸ್ (RSS)​ ಬಗ್ಗೆ ಮಾತನಾಡಿದ್ದರು. ಅವರ ಮಾತುಗಳನ್ನು ಸಂಘದ​ ಕಾರ್ಯಕರ್ತರು ಖಂಡಿಸಿದ್ದಾರೆ.

RSS ಬಗ್ಗೆ ಅವಹೇಳನಕಾರಿ ಹೇಳಿಕೆ: ಜಾವೇದ್​ ಅಖ್ತರ್​ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ
ಜಾವೇದ್ ಅಖ್ತರ್
TV9 Web
| Edited By: |

Updated on: Sep 23, 2021 | 1:22 PM

Share

ಬಾಲಿವುಡ್​ನ ಖ್ಯಾತ ಗೀತರಚನಾಕಾರ, ಕವಿ ಜಾವೇದ್​ ಅಖ್ತರ್​ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS​) ಬಗ್ಗೆ ಅವರು ನೀಡಿದ ಹೇಳಿಕೆಗಳು ಅವಹೇಳನಕಾರಿಯಾಗಿವೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಬರೋಬ್ಬರಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಎರಡು ಪ್ರತ್ಯೇಕ ಕೇಸ್​ಗಳು ಅವರ ಮೇಲೆ ದಾಖಲಾಗಿದೆ. ಈ ಸಂಬಂಧ ಅವರಿಗೆ ಲೀಗಲ್​ ನೋಟೀಸ್​ ಕಳಿಸಲಾಗಿದೆ.

ಸುದ್ದಿ ವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ಜಾವೇದ್​ ಅಖ್ತರ್​ ಅವರು ಆರ್​ಎಸ್​ಎಸ್​ ಬಗ್ಗೆ ಮಾತನಾಡಿದ್ದರು. ಅವರ ಮಾತುಗಳನ್ನು ಆರ್​ಎಸ್​ಎಸ್​ ಕಾರ್ಯಕರ್ತರು ಖಂಡಿಸಿದ್ದಾರೆ. ಲಾಯರ್​ ಸಂತೋಷ್​ ದುಬೆ ಎಂಬುವವರು ಜಾವೇದ್​ ಅಖ್ತರ್​ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಲೀಗಲ್​ ನೋಟೀಸ್​ ಸ್ವೀಕರಿಸಿದ ಏಳು ದಿನಗಳ ಒಳಗಾಗಿ ಸಾರ್ವಜನಿಕವಾಗಿ ಜಾವೇದ್​ ಅಖ್ತರ್​ ಕ್ಷಮೆ ಕೇಳಬೇಕು ಮತ್ತು ತಮ್ಮ ಎಲ್ಲ ಹೇಳಿಕೆಗಳನ್ನು ವಾಪಸ್​ ಪಡೆಯಬೇಕು ಎಂದು ಸಂತೋಷ್​ ದುಬೆ ಪಟ್ಟು ಹಿಡಿದಿದ್ದಾರೆ.

ವಕೀಲರೂ ಆಗಿರುವ ಮತ್ತೋರ್ವ ಆರ್​ಎಸ್​ಎಸ್​ ಕಾರ್ಯಕರ್ತ ದೃಷ್ಟಿಮಾನ್​ ಜೋಶಿ ಅವರು ಕ್ರಿಮಿನಲ್​ ದೂರು ನೀಡಿದ್ದಾರೆ. ‘ಸೆ.4ರಂದು ಜಾವೇದ್​ ಅಖ್ತರ್​ ಅವರು ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಹಿಂದೂ ಸಂಘಟನೆಗಳನ್ನು ತಾಲಿಬಾನ್​ಗೆ ಹೋಲಿಸಿದ್ದನ್ನು ನಾನು ಗಮನಿಸಿದ್ದೇನೆ. ಹಿಂದೂ ಧರ್ಮಕ್ಕಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳ ಮಾನಹಾನಿ ಮಾಡುವ ಉದ್ದೇಶದಿಂದಲೇ ಜಾವೇದ್​ ಅಖ್ತರ್​ ಈ ರೀತಿ ಹೇಳಿಕೆಗಳನ್ನು ನೀಡಿದ್ದಾರೆ. ಆರ್​ಎಸ್​ಎಸ್ ಈ ಸಮಾಜದಲ್ಲಿ ಕ್ಯಾನ್ಸರ್​ ಇದ್ದಂತೆ ​ಅಂತ ಅವರು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಕೆಲಸ. ಆರ್​ಎಸ್ಎಸ್​ಗೆ ಸೇರುವವರನ್ನು ದಾರಿ ತಪ್ಪಿಸಲು ಇಂಥ ಹೇಳಿಕೆ ನೀಡಲಾಗಿದೆ’ ಎಂದು ದೂರಿನಲ್ಲಿ ಜೋಶಿ ಆರೋಪಿಸಿದ್ದಾರೆ.

‘ಯಾವುದೇ ಸಾಕ್ಷಿಗಳು ಇಲ್ಲದೇ ಆರ್​ಎಸ್​ಎಸ್​ ಬಗ್ಗೆ ಜಾವೇದ್​ ಅಖ್ತರ್​ ಅವರು ಇಂಥ ಮಾತುಗಳನ್ನು ಆಡಿದ್ದಾರೆ. ಪ್ರಧಾನಮಂತ್ರಿ, ರಾಷ್ಟ್ರಪತಿ ಮತ್ತು ಕೇಂದ್ರದ ಅನೇಕ ಮಂತ್ರಿಗಳು ಆರ್​ಎಸ್​ಎಸ್​ ಬೆಂಬಲಿಗರಾಗಿದ್ದಾರೆ. ಅಂಥ ಸಂಘಟನೆ ಬಗ್ಗೆ ಜಾವೇದ್​ ಅಖ್ತರ್​ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ದೃಷ್ಟಿಮಾನ್​ ಜೋಶಿ ಹೇಳಿದ್ದಾರೆ. ಅ.30ರಂದು ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ:

‘ಕತ್ತೆಕಿರುಬಗಳನ್ನು ಎದುರಿಸುತ್ತಿರುವ ಒಂಟಿ ಸಿಂಹ’; ಕೋರ್ಟ್​​ ಮೆಟ್ಟಿಲು ಹತ್ತಿಬಂದರೂ ಕಂಗನಾ ಸಿನಿಮೀಯ ಡೈಲಾಗ್​

ಮದುವೆ ಕಾರ್ಡ್​ ಪ್ರಿಂಟ್​ ಆದ್ಮೇಲೆ ಪ್ರೇಯಸಿ ಕೈಯಲ್ಲಿ ಸಿಕ್ಕಿಬಿದ್ದಿದ್ದ ಸಲ್ಮಾನ್ ಖಾನ್​​; ಮುರಿದು ಬಿದ್ದಿತ್ತು ಶಾದಿ

Follow Us
Web contact
Web contact

TV9 Kannada

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?