AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS ಬಗ್ಗೆ ಅವಹೇಳನಕಾರಿ ಹೇಳಿಕೆ: ಜಾವೇದ್​ ಅಖ್ತರ್​ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ

ಸುದ್ದಿ ವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ಜಾವೇದ್​ ಅಖ್ತರ್​ ಅವರು ಆರ್​ಎಸ್​ಎಸ್ (RSS)​ ಬಗ್ಗೆ ಮಾತನಾಡಿದ್ದರು. ಅವರ ಮಾತುಗಳನ್ನು ಸಂಘದ​ ಕಾರ್ಯಕರ್ತರು ಖಂಡಿಸಿದ್ದಾರೆ.

RSS ಬಗ್ಗೆ ಅವಹೇಳನಕಾರಿ ಹೇಳಿಕೆ: ಜಾವೇದ್​ ಅಖ್ತರ್​ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ
ಜಾವೇದ್ ಅಖ್ತರ್
TV9 Web
| Edited By: |

Updated on: Sep 23, 2021 | 1:22 PM

Share

ಬಾಲಿವುಡ್​ನ ಖ್ಯಾತ ಗೀತರಚನಾಕಾರ, ಕವಿ ಜಾವೇದ್​ ಅಖ್ತರ್​ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS​) ಬಗ್ಗೆ ಅವರು ನೀಡಿದ ಹೇಳಿಕೆಗಳು ಅವಹೇಳನಕಾರಿಯಾಗಿವೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಬರೋಬ್ಬರಿ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಎರಡು ಪ್ರತ್ಯೇಕ ಕೇಸ್​ಗಳು ಅವರ ಮೇಲೆ ದಾಖಲಾಗಿದೆ. ಈ ಸಂಬಂಧ ಅವರಿಗೆ ಲೀಗಲ್​ ನೋಟೀಸ್​ ಕಳಿಸಲಾಗಿದೆ.

ಸುದ್ದಿ ವಾಹಿನಿಯೊಂದರ ಚರ್ಚೆಯಲ್ಲಿ ಭಾಗವಹಿಸಿದ್ದ ಜಾವೇದ್​ ಅಖ್ತರ್​ ಅವರು ಆರ್​ಎಸ್​ಎಸ್​ ಬಗ್ಗೆ ಮಾತನಾಡಿದ್ದರು. ಅವರ ಮಾತುಗಳನ್ನು ಆರ್​ಎಸ್​ಎಸ್​ ಕಾರ್ಯಕರ್ತರು ಖಂಡಿಸಿದ್ದಾರೆ. ಲಾಯರ್​ ಸಂತೋಷ್​ ದುಬೆ ಎಂಬುವವರು ಜಾವೇದ್​ ಅಖ್ತರ್​ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಲೀಗಲ್​ ನೋಟೀಸ್​ ಸ್ವೀಕರಿಸಿದ ಏಳು ದಿನಗಳ ಒಳಗಾಗಿ ಸಾರ್ವಜನಿಕವಾಗಿ ಜಾವೇದ್​ ಅಖ್ತರ್​ ಕ್ಷಮೆ ಕೇಳಬೇಕು ಮತ್ತು ತಮ್ಮ ಎಲ್ಲ ಹೇಳಿಕೆಗಳನ್ನು ವಾಪಸ್​ ಪಡೆಯಬೇಕು ಎಂದು ಸಂತೋಷ್​ ದುಬೆ ಪಟ್ಟು ಹಿಡಿದಿದ್ದಾರೆ.

ವಕೀಲರೂ ಆಗಿರುವ ಮತ್ತೋರ್ವ ಆರ್​ಎಸ್​ಎಸ್​ ಕಾರ್ಯಕರ್ತ ದೃಷ್ಟಿಮಾನ್​ ಜೋಶಿ ಅವರು ಕ್ರಿಮಿನಲ್​ ದೂರು ನೀಡಿದ್ದಾರೆ. ‘ಸೆ.4ರಂದು ಜಾವೇದ್​ ಅಖ್ತರ್​ ಅವರು ಟಿವಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ಹಿಂದೂ ಸಂಘಟನೆಗಳನ್ನು ತಾಲಿಬಾನ್​ಗೆ ಹೋಲಿಸಿದ್ದನ್ನು ನಾನು ಗಮನಿಸಿದ್ದೇನೆ. ಹಿಂದೂ ಧರ್ಮಕ್ಕಾಗಿ ಕೆಲಸ ಮಾಡುತ್ತಿರುವ ಸಂಘಟನೆಗಳ ಮಾನಹಾನಿ ಮಾಡುವ ಉದ್ದೇಶದಿಂದಲೇ ಜಾವೇದ್​ ಅಖ್ತರ್​ ಈ ರೀತಿ ಹೇಳಿಕೆಗಳನ್ನು ನೀಡಿದ್ದಾರೆ. ಆರ್​ಎಸ್​ಎಸ್ ಈ ಸಮಾಜದಲ್ಲಿ ಕ್ಯಾನ್ಸರ್​ ಇದ್ದಂತೆ ​ಅಂತ ಅವರು ಹೇಳಿದ್ದಾರೆ. ಇದು ಪೂರ್ವನಿಯೋಜಿತ ಕೆಲಸ. ಆರ್​ಎಸ್ಎಸ್​ಗೆ ಸೇರುವವರನ್ನು ದಾರಿ ತಪ್ಪಿಸಲು ಇಂಥ ಹೇಳಿಕೆ ನೀಡಲಾಗಿದೆ’ ಎಂದು ದೂರಿನಲ್ಲಿ ಜೋಶಿ ಆರೋಪಿಸಿದ್ದಾರೆ.

‘ಯಾವುದೇ ಸಾಕ್ಷಿಗಳು ಇಲ್ಲದೇ ಆರ್​ಎಸ್​ಎಸ್​ ಬಗ್ಗೆ ಜಾವೇದ್​ ಅಖ್ತರ್​ ಅವರು ಇಂಥ ಮಾತುಗಳನ್ನು ಆಡಿದ್ದಾರೆ. ಪ್ರಧಾನಮಂತ್ರಿ, ರಾಷ್ಟ್ರಪತಿ ಮತ್ತು ಕೇಂದ್ರದ ಅನೇಕ ಮಂತ್ರಿಗಳು ಆರ್​ಎಸ್​ಎಸ್​ ಬೆಂಬಲಿಗರಾಗಿದ್ದಾರೆ. ಅಂಥ ಸಂಘಟನೆ ಬಗ್ಗೆ ಜಾವೇದ್​ ಅಖ್ತರ್​ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ’ ಎಂದು ದೃಷ್ಟಿಮಾನ್​ ಜೋಶಿ ಹೇಳಿದ್ದಾರೆ. ಅ.30ರಂದು ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ.

ಇದನ್ನೂ ಓದಿ:

‘ಕತ್ತೆಕಿರುಬಗಳನ್ನು ಎದುರಿಸುತ್ತಿರುವ ಒಂಟಿ ಸಿಂಹ’; ಕೋರ್ಟ್​​ ಮೆಟ್ಟಿಲು ಹತ್ತಿಬಂದರೂ ಕಂಗನಾ ಸಿನಿಮೀಯ ಡೈಲಾಗ್​

ಮದುವೆ ಕಾರ್ಡ್​ ಪ್ರಿಂಟ್​ ಆದ್ಮೇಲೆ ಪ್ರೇಯಸಿ ಕೈಯಲ್ಲಿ ಸಿಕ್ಕಿಬಿದ್ದಿದ್ದ ಸಲ್ಮಾನ್ ಖಾನ್​​; ಮುರಿದು ಬಿದ್ದಿತ್ತು ಶಾದಿ

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ