AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಮೊಮ್ಮಗಳಲ್ಲ ಅಂದ್ರು, ಇಂದು ಆಸ್ತಿಯಲ್ಲಿ ಪಾಲು ಕೇಳಿದ್ರು; ಜಾವೇದ್​ ಅಖ್ತರ್​ ಜತೆ ಉರ್ಫಿ ಫನ್ನಿ ಪ್ರಸಂಗ

Urfi Javed | Javed Akhtar: ಒಂದೇ ವಿಮಾನದಲ್ಲಿ ಉರ್ಫಿ ಜಾವೇದ್​ ಮತ್ತು ಜಾವೇದ್​ ಅಖ್ತರ್​ ಪ್ರಯಾಣ ಮಾಡಿದ್ದಾರೆ. ಈ ವೇಳೆ ಪರಸ್ಪರ ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ.

ಅಂದು ಮೊಮ್ಮಗಳಲ್ಲ ಅಂದ್ರು, ಇಂದು ಆಸ್ತಿಯಲ್ಲಿ ಪಾಲು ಕೇಳಿದ್ರು; ಜಾವೇದ್​ ಅಖ್ತರ್​ ಜತೆ ಉರ್ಫಿ ಫನ್ನಿ ಪ್ರಸಂಗ
ಉರ್ಫಿ ಜಾವೇದ್, ಜಾವೇದ್ ಅಖ್ತರ್
TV9 Web
| Edited By: |

Updated on:Jan 09, 2023 | 4:22 PM

Share

ನಟಿ ಉರ್ಫಿ ಜಾವೇದ್​ (Urfi Javed) ಅವರ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಬೋಲ್ಡ್​ ಬಟ್ಟೆಗಳನ್ನು ಧರಿಸುವ ಮೂಲಕ ಅವರು ಸೋಶಿಯಲ್​ ಮೀಡಿಯಾದಲ್ಲಿ ಸೆನ್ಸೇಷನ್​ ಸೃಷ್ಟಿ ಮಾಡಿದ್ದಾರೆ. ಅವರ ಕುಟುಂಬದ ಹಿನ್ನೆಲೆ ಬಗ್ಗೆ ಕೆಲವರಿಗೆ ಅನುಮಾನ ಇದೆ. ಖ್ಯಾತ ಗೀತಸಾಹಿತಿ ಜಾವೇದ್​ ಅಖ್ತರ್​ (Javed Akhtar) ಅವರ ಮೊಮ್ಮಗಳು ಈ ಉರ್ಫಿ ಜಾವೇದ್​ ಎಂದು ಒಂದಷ್ಟು ಮಂದಿ ಭಾವಿಸಿದ್ದಾರೆ. ಆದರೆ ಅದು ಸತ್ಯವಲ್ಲ. ಉರ್ಫಿ ಜಾವೇದ್​ ಅವರಿಗೂ ಜಾವೇದ್​ ಅಖ್ತರ್​ ಅವರಿಗೂ ಯಾವುದೇ ಸಂಬಂಧ ಇಲ್ಲ. ಆದರೂ ಕೂಡ ಜಾವೇದ್​ ಅಖ್ತರ್​ ಬಳಿ ಹೋಗಿ ಉರ್ಫಿ ಜಾವೇದ್​ ಅವರು ಆಸ್ತಿಯಲ್ಲಿ ಪಾಲು ಕೇಳಿದ್ದಾರೆ! ಆದರೆ ಇದು ತಮಾಷೆಗೆ ಅಷ್ಟೇ. ಈ ಫನ್ನಿ ಪ್ರಸಂಗವನ್ನು ಸ್ವತಃ ಉರ್ಫಿ ಜಾವೇದ್​ ವಿವರಿಸಿದ್ದಾರೆ.

ಇತ್ತೀಚೆಗೆ ಒಂದೇ ವಿಮಾನದಲ್ಲಿ ಉರ್ಫಿ ಜಾವೇದ್​ ಮತ್ತು ಜಾವೇದ್​ ಅಖ್ತರ್​ ಪ್ರಯಾಣ ಮಾಡಿದ್ದಾರೆ. ಈ ವೇಳೆ ಪರಸ್ಪರ ಸಾಕಷ್ಟು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಆ ಘಟನೆಯ ಬಗ್ಗೆ ಪಾಪರಾಜಿಗಳು ಪ್ರಶ್ನೆ ಮಾಡಿದಾಗ ಉರ್ಫಿ ಜಾವೇದ್​ ಅವರು ಈ ರೀತಿ ಉತ್ತರಿಸಿದ್ದಾರೆ. ‘ಅವರು ತುಂಬ ಒಳ್ಳೆಯ ವ್ಯಕ್ತಿ. ನಾನು ಅವರ ಮೊಮ್ಮಗಳಾದ್ದರಿಂದ ಆಸ್ತಿಯಲ್ಲಿ ಮೂರು ಪಾಲು ಆಗಬೇಕು ಅಂತ ಹೇಳಿದ್ದೇನೆ’ ಎಂದು ಉರ್ಫಿ ತಮಾಷೆ ಮಾಡಿದ್ದಾರೆ. ಜಾವೇದ್​ ಅಖ್ತರ್​ ಅವರಿಗೆ ಇಬ್ಬರು ಮೊಮ್ಮಕ್ಕಳು ಇದ್ದಾರೆ.

ಇದನ್ನೂ ಓದಿ: Urfi Javed: ‘ಬಟ್ಟೆಯಲ್ಲಿ ನೀವು ನನಗೆ ಪೈಪೋಟಿ ನೀಡೋಕೆ ಆಗಲ್ಲ’: ಸನ್ನಿ ಲಿಯೋನ್​ಗೆ ಉರ್ಫಿ​ ಜಾವೇದ್​ ಸವಾಲು

ಇದನ್ನೂ ಓದಿ
Image
ಅಶ್ಲೀಲ​ ವೆಬ್​ಸೈಟ್​ನಲ್ಲಿ ಉರ್ಫಿ ಜಾವೇದ್​ ಫೋಟೋ; ಪ್ರತಿ ದಿನ ರೇಪ್​ ಬೆದರಿಕೆ: ಶಾಕಿಂಗ್​ ವಿಚಾರ ತೆರೆದಿಟ್ಟ ನಟಿ
Image
ಪ್ಯಾಂಟ್​ ಮೇಲೆ ಪ್ಯಾಂಟ್​ ಅಂಟಿಸಿಕೊಂಡು ಬಂದ ಉರ್ಫಿ ಜಾವೇದ್​; ಇಲ್ಲಿದೆ ವಿಚಿತ್ರ ಅವತಾರದ ವಿಡಿಯೋ
Image
‘ನಂಗೆ ಮರ್ಯಾದೆ ಕೊಡಲ್ಲ, ಸೆಲೆಬ್ರಿಟಿಗಳೇ ಕೆಟ್ಟ ಕಮೆಂಟ್​​ ಮಾಡ್ತಾರೆ’: ಎಲ್ಲವನ್ನೂ ಹೇಳಿಕೊಂಡ ಉರ್ಫಿ ಜಾವೇದ್​
Image
‘ಮುಸ್ಲಿಂ ಹುಡುಗನನ್ನು ಮದುವೆ ಆಗಲ್ಲ’: ಬಲವಾದ ಕಾರಣ ನೀಡಿದ ಮುಸ್ಲಿಂ ನಟಿ ಉರ್ಫಿ ಜಾವೇದ್​

ಉರ್ಫಿ ಅವರು ಜಾವೇದ್​ ಅಖ್ತರ್​ ಮೊಮ್ಮಗಳು ಎಂದು ತಪ್ಪಾಗಿ ತಿಳಿದುಕೊಂಡಿದ್ದ ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ವಿಚಿತ್ರ ಕಮೆಂಟ್​ಗಳನ್ನು ಮಾಡಿದ್ದರು. ‘ನಿಮ್ಮ ಮೊಮ್ಮಗಳಿಗೆ ಸ್ವಲ್ಪ ಬುದ್ಧಿ ಹೇಳಿ’ ಎಂದು ಜಾವೇದ್​ ಅಖ್ತರ್​ ಅವರನ್ನು ಟ್ಯಾಗ್​ ಮಾಡಿದ ಘಟನೆಯೂ ನಡೆದಿತ್ತು. ಅದರಿಂದ ಬೇಸತ್ತುಹೋಗಿದ್ದ ಉರ್ಫಿ ಜಾವೇದ್​ ಅವರು ಒಂದಿನ, ‘ನಾನು ಜಾವೇದ್ ಅಖ್ತರ್​ ಮೊಮ್ಮಗಳಲ್ಲ’ ಎಂದು ಬರೆದುಕೊಂಡಿರುವ ಟಿ-ಶರ್ಟ್​ ಧರಿಸಿ ಬಂದಿದ್ದರು!

ಇದನ್ನೂ ಓದಿ: Urfi Javed: ಟಾಪ್​ಲೆಸ್​ ಆಗಿ ಉಪಹಾರ ಸವಿದ ಉರ್ಫಿ ಜಾವೇದ್​; ತಿಂಡಿ ಪ್ಲೇಟ್​, ಜ್ಯೂಸ್​ ಲೋಟ ಇಲ್ಲದಿದ್ರೆ ದೇವರೇ ಗತಿ

ಒಟ್ಟಿನಲ್ಲಿ ಉರ್ಫಿ ಜಾವೇದ್​ ಅವರು ಒಂದಿಲ್ಲೊಂದು ಕಾರಣಕ್ಕೆ ಸುದ್ದಿ ಆಗುತ್ತಲೇ ಇರುತ್ತಾರೆ. ಅವರ ಫೋಟೋಗಳು ಆಗಾಗ ವೈರಲ್​ ಆಗುತ್ತವೆ. ಪ್ರತಿ ದಿನ ಅವರನ್ನು ಟ್ರೋಲ್​ ಮಾಡಲಾಗುತ್ತದೆ. ಆದರೆ ಅದಕ್ಕೆಲ್ಲ ಅವರು ತಲೆ ಕೆಡಿಸಿಕೊಂಡಿಲ್ಲ. ತಮಗೆ ಇಷ್ಟಬಂದ ರೀತಿಯಲ್ಲಿ ಅವರು ನಡೆದುಕೊಳ್ಳುತ್ತಿದ್ದಾರೆ.

ಉರ್ಫಿ ಜಾವೇದ್​ಗೆ ಯೋ ಯೋ ಹನಿ ಸಿಂಗ್ ಮೆಚ್ಚುಗೆ:

‘ಉರ್ಫಿ ಜಾವೇದ್​ ನನಗೆ ತುಂಬ ಇಷ್ಟ. ಆಕೆ ಬಹಳ ಧೈರ್ಯವಂತೆ. ತನ್ನದೇ ರೀತಿಯಲ್ಲಿ ಆಕೆ ಬದುಕಲು ಬಯಸುತ್ತಾಳೆ. ನಮ್ಮ ದೇಶದ ಎಲ್ಲ ಹುಡುಗಿಯರು ಉರ್ಫಿಯನ್ನು ನೋಡಿ ಕಲಿಯಬೇಕು. ಯಾರ ಭಯವೂ ಇಲ್ಲದೇ, ಯಾವ ಹಿಂಜರಿಕೆಯೂ ಇಲ್ಲದೇ ನಿಮಗೆ ಅನಿಸಿದ್ದನ್ನು ಮಾಡಬೇಕು’ ಎಂದು ಗಾಯಕ ಹನಿ ಸಿಂಗ್​ ಇತ್ತೀಚೆಗೆ ಹೇಳಿದ್ದರು. ಅವರ ಈ ಮಾತಿಗೆ ಕೆಲವರಿಂದ ವಿರೋಧ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:22 pm, Mon, 9 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್