AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Javed Akhtar: ‘ಕಂಗನಾ ರಣಾವತ್​ ಮುಖ್ಯವೇ ಅಲ್ಲ’: ನೇರವಾಗಿ ಟೀಕೆ ಮಾಡಿದ ಜಾವೇದ್​ ಅಖ್ತರ್​

Javed Akhtar | Kangana Ranaut: ಯಾವಾಗಲೂ ಕಿರಿಕ್​ ಮಾಡುವ ಕಂಗನಾ ರಣಾವತ್​ ಅವರು ಅಪರೂಪಕ್ಕೆ ಜಾವೇದ್​ ಅಖ್ತರ್​ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಆದರೆ ಅದಕ್ಕೆ ಜಾವೇದ್​ ಅಖ್ತರ್​ ಅವರು ಬೆಲೆ ನೀಡಿಲ್ಲ.

Javed Akhtar: ‘ಕಂಗನಾ ರಣಾವತ್​ ಮುಖ್ಯವೇ ಅಲ್ಲ’: ನೇರವಾಗಿ ಟೀಕೆ ಮಾಡಿದ ಜಾವೇದ್​ ಅಖ್ತರ್​
ಜಾವೇದ್ ಅಖ್ತರ್, ಕಂಗನಾ ರಣಾವತ್
ಮದನ್​ ಕುಮಾರ್​
|

Updated on: Feb 23, 2023 | 8:00 AM

Share

ನಟಿ ಕಂಗನಾ ರಣಾವತ್​ (Kangana Ranaut) ಅವರು ವಿವಾದಗಳಿಂದಲೇ ಹೆಚ್ಚು ಸುದ್ದಿ ಆಗುತ್ತಾರೆ. ಬಾಲಿವುಡ್​ನ ಅನೇಕರನ್ನು ಅವರು ಎದುರು ಹಾಕಿಕೊಂಡಿದ್ದಾರೆ. ಅದರಲ್ಲೂ ಜಾವೇದ್​ ಅಖ್ತರ್​ ಬಗ್ಗೆ ಈ ಹಿಂದೆ ಅವರು ಹಲವು ರೀತಿಯಲ್ಲಿ ಟೀಕೆ ಮಾಡಿದ್ದರು. ಆದರೆ ಈಗ ಏಕಾಏಕಿ ಜಾವೇದ್​ ಅಖ್ತರ್​ (Javed Akhtar) ಅವರನ್ನು ಕಂಗನಾ ರಣಾವತ್​ ಹೊಗಳಿದ್ದಾರೆ. ಆದರೆ ಅವರ ಮಾತುಗಳಿಂದ ಜಾವೇದ್​ ಅಖ್ತರ್​ ಸಂತಸಗೊಂಡಿಲ್ಲ. ಬದಲಿಗೆ, ‘ಕಂಗನಾ ರಣಾವತ್​ ಮುಖ್ಯವೇ ಅಲ್ಲ’ ಎಂದು ಹೇಳಿದ್ದಾರೆ. ಈ ರೀತಿ ಅವರು ಹೇಳಿದ್ದಕ್ಕೆ ಕಂಗನಾ ಹೇಗೆ ಪ್ರತಿಕ್ರಿಯಿಸಬಹುದು ಎಂಬ ಕೌತುಕ ಮೂಡಿದೆ.

ಹಿರಿಯ ಗೀತರಚನಾಕಾರ ಜಾವೇದ್​ ಅಖ್ತರ್​ ಅವರು ಇತ್ತೀಚೆಗೆ ಪಾಕಿಸ್ತಾನದಲ್ಲಿ ನೀಡಿದ ಹೇಳಿಕೆ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. 26/11ರ ಮುಂಬೈ ದಾಳಿ ನಡೆಸಿದ ಭಯೋತ್ಪಾದಕರು ಪಾಕಿಸ್ತಾನದವರೇ ಹೊರತು ಬೇರೆ ದೇಶದವರಲ್ಲ ಎಂದು ಜಾವೇದ್​ ಅಖ್ತರ್​ ಅವರು ಪಾಕ್​ ನೆಲದಲ್ಲಿಯೇ ನಿಂತು ಗುಡುಗಿದ್ದಾರೆ. ಅವರ ಧೈರ್ಯವಂತಿಕೆಗೆ ಕಂಗನಾ ಕೂಡ ಭೇಷ್​ ಎಂದಿದ್ದಾರೆ. ಈ ಕುರಿತು ಅವರು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Kangana Ranaut: ಉಗ್ರರಿಂದ ಹತ್ಯೆಯಾದ ಕಾಶ್ಮೀರಿ ಹುಡುಗಿ ಪಾತ್ರದಲ್ಲಿ ಕಂಗನಾ? ಸೆನ್ಸೇಷನ್​ ಸೃಷ್ಟಿಸಿದೆ ಹೊಸ ಸಿನಿಮಾ ಸುದ್ದಿ
Image
Emergency: ‘ಇಂದಿರಾ ಗಾಂಧಿ ಈ ವಿಡಿಯೋದಲ್ಲಿ ಕಂಗನಾ ರೀತಿ ಮಾಡ್ತಿದ್ದಾರೆ’: ರಾಮ್​ ಗೋಪಾಲ್​ ವರ್ಮಾ
Image
Emergency: ಇದು ಇಂದಿರಾ ಗಾಂಧಿ ಅಲ್ಲ, ಕಂಗನಾ ರಣಾವತ್! ಗಮನ ಸೆಳೆದ ‘ಎಮರ್ಜೆನ್ಸಿ’ ಫಸ್ಟ್​ ಲುಕ್​
Image
Kangana Ranaut: ‘ಶಿವಸೇನೆ ಹನುಮಾನ್​ ಚಾಲೀಸ ಬ್ಯಾನ್​ ಮಾಡಿದ್ರೆ ಅವರನ್ನು ಶಿವ ಕೂಡ ಕಾಪಾಡಲ್ಲ’: ಕಂಗನಾ ರಣಾವತ್​

ಇದನ್ನೂ ಓದಿ: Kangana Ranaut: ‘ಸಿದ್ದಾರ್ಥ್​ ಮಲ್ಹೋತ್ರಾ-ಕಿಯಾರಾ ಅಡ್ವಾಣಿ ಅವರದ್ದು ನಿಜವಾದ ಪ್ರೀತಿ’: ಕಂಗನಾ ರಣಾವತ್​

‘ಜಾವೇದ್​ ಅವರ ಕವಿತೆ ಕೇಳಿದಾಗಲೆಲ್ಲ ಸರಸ್ವತಿಯೇ ಅವರಿಗೆ ಆಶೀರ್ವಾದ ಮಾಡಿದ್ದಾಳೆ ಎನಿಸುತ್ತದೆ. ಅವರಲ್ಲಿ ಸತ್ಯ ಇರುವ ಕಾರಣಕ್ಕೇ ಆ ದೈವಿ ಗುಣ ಇದೆ. ಜೈ ಹಿಂದ್​. ಪಾಕಿಸ್ತಾನದವರ ಮನೆಗೆ ನುಗ್ಗಿ ಹೊಡೆದಿದ್ದಾರೆ’ ಎಂದು ಕಂಗನಾ ರಣಾವತ್​ ಅವರು ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ: Kangana Ranaut: ‘ನನ್ನ ಧಾಕಡ್​ ಚಿತ್ರದ್ದು ಐತಿಹಾಸಿಕ ಸೋಲು ನಿಜ’: ಕಂಗನಾ ರಣಾವತ್​ ಬಹಿರಂಗ ಹೇಳಿಕೆ

ಕಂಗನಾ ರಣಾವತ್​ ಅವರ ಹೇಳಿಕೆಗೆ ಪ್ರತಿಕ್ರಿಯೆ ಪಡೆಯಲು ಮಾಧ್ಯಮದವರು ಜಾವೇದ್​ ಅಖ್ತರ್​ ಅವರನ್ನು ಪ್ರಶ್ನಿಸಿದ್ದಾರೆ. ಅದಕ್ಕೆ ಉತ್ತರಿಸಿದ ಜಾವೇದ್​ ಅವರು, ‘ಕಂಗನಾ ಅವರನ್ನು ನಾನು ಮುಖ್ಯ ಎಂದು ಪರಿಗಣಿಸಿಲ್ಲ. ಅವರು ಹೇಗೆ ಮುಖ್ಯವಾದ ಹೇಳಿಕೆ ನೀಡಲು ಸಾಧ್ಯ? ಅವರನ್ನು ಬಿಡಿ, ಮುಂದೆ ಹೋಗೋಣ’ ಎಂದು ಜಾವೇದ್​ ಅಖ್ತರ್​ ಹೇಳಿದ್ದಾರೆ.

ಇದನ್ನೂ ಓದಿ: Emergency: ಇಂದಿರಾ ಗಾಂಧಿ ಕುರಿತು ಸಿನಿಮಾ ಮಾಡಲು ಆಸ್ತಿ ಅಡವಿಟ್ಟ ಕಂಗನಾ ರಣಾವತ್​

ಕಂಗನಾ ಅವರು ಯಾವಾಗ ಯಾರನ್ನು ಹೊಗಳುತ್ತಾರೆ ಮತ್ತು ಯಾರನ್ನು ತೆಗಳುತ್ತಾರೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಹಾಗಾಗಿ ಬಹುತೇಕರು ಅವರ ಮಾತನ್ನು ಗಂಭೀರವಾಗಿ ಪರಿಗಣಿಸುವುದೇ ಇಲ್ಲ. ಪ್ರಸ್ತುತ ಕಂಗನಾ ಅವರು ‘ಚಂದ್ರಮುಖಿ 2’ ಸಿನಿಮಾದ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಎಮರ್ಜೆನ್ಸಿ’ ಸಿನಿಮಾಗೆ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ.

ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಯ ಸಂದರ್ಭವನ್ನು ಆಧಾರವಾಗಿ ಇಟ್ಟುಕೊಂಡು ‘ಎಮರ್ಜೆನ್ಸಿ’ ಸಿನಿಮಾ ಸಿದ್ಧವಾಗುತ್ತಿದೆ. ಈ ಸಿನಿಮಾದಲ್ಲಿ ಅನೇಕ ಹೆಸರಾಂತ ಕಲಾವಿದರು ನಟಿಸುತ್ತಿದ್ದಾರೆ. ಈ ಚಿತ್ರದ ಮೇಲೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ