AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ಸಿನಿಮಾ ಗೆಲುವು ಅಪಾಯಕಾರಿ ಎಂದ ಜಾವೇದ್​ ಅಖ್ತರ್​; ಪ್ರೇಕ್ಷಕರಿಗೆ ಕಿವಿಮಾತು

Javed Akhtar On Animal: ‘ಈಗ ಸಿನಿಮಾದವರಿಗಿಂತಲೂ ಪ್ರೇಕ್ಷಕರ ಮೇಲೆ ಹೆಚ್ಚು ಜವಾಬ್ದಾರಿ ಇದೆ. ಒಳ್ಳೆಯ ಸಿನಿಮಾ ಮಾಡುವವರೂ ಇದ್ದಾರೆ. ಆದರೆ ಅಂಥವರ ಸಂಖ್ಯೆ ಕಡಿಮೆ. ಅವರಿಗೆ ನೀವು ಎಲ್ಲಿಯವರೆಗೆ ಬೆಂಬಲ ನೀಡುತ್ತೀರಿ ಎಂಬುದರ ಮೇಲೆ ಅಂಥ ಸಿನಿಮಾಗಳ ಭವಿಷ್ಯ ನಿರ್ಧಾರ ಆಗಿರುತ್ತದೆ’ ಎಂದು ಜಾವೇದ್​ ಅಖ್ತರ್​ ಹೇಳಿದ್ದಾರೆ.

‘ಅನಿಮಲ್​’ ಸಿನಿಮಾ ಗೆಲುವು ಅಪಾಯಕಾರಿ ಎಂದ ಜಾವೇದ್​ ಅಖ್ತರ್​; ಪ್ರೇಕ್ಷಕರಿಗೆ ಕಿವಿಮಾತು
ಜಾವೇದ್​ ಅಖ್ತರ್​, ರಣಬೀರ್ ಕಪೂರ್​
Follow us
ಮದನ್​ ಕುಮಾರ್​
|

Updated on: Jan 07, 2024 | 7:31 AM

ರಣಬೀರ್ ಕಪೂರ್​ ನಟನೆಯ ‘ಅನಿಮಲ್​’ ಸಿನಿಮಾ (Animal Movie) ಸೂಪರ್​ ಹಿಟ್​ ಆಗಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಅಂದಾಜು 900 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಆದರೆ ವಿಮರ್ಶೆಯ ದೃಷ್ಟಿಯಲ್ಲಿ ಈ ಚಿತ್ರ ಸೋತಿದೆ. ಅನೇಕ ವಿಮರ್ಶಕರು ಈ ಸಿನಿಮಾವನ್ನು ಖಂಡಿಸಿದ್ದಾರೆ. ಕೆಲವು ಸೆಲೆಬ್ರಿಟಿಗಳು ಕೂಡ ‘ಅನಿಮಲ್​’ ಸಿನಿಮಾದ ಬಗ್ಗೆ ಅಪಸ್ವರ ಎತ್ತಿದ್ದಾರೆ. ಆ ಸಾಲಿಗೆ ಖ್ಯಾತ ಗೀತ ರಚನಕಾರ ಜಾವೇದ್ ಅಖ್ತರ್​ (Javed Akhtar) ಕೂಡ ಸೇರ್ಪಡೆ ಆಗಿದ್ದಾರೆ. ಅವರು ಈ ಸಿನಿಮಾದ ಗೆಲುವು ಅಪಾಯಕಾರಿ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಚರ್ಚೆಗೆ ಒಳಗಾಗುತ್ತಿದೆ.

‘ಅನಿಮಲ್​’ ಸಿನಿಮಾದಲ್ಲಿ ಮಹಿಳೆಯರನ್ನು ಅವಮಾನಿಸುವಂತಹ ದೃಶ್ಯಗಳು ಇವೆ ಎಂಬುದು ಅನೇಕರ ಆರೋಪ. ಅದೇ ವಿಚಾರವನ್ನು ಜಾವೇದ್​ ಅಖ್ತರ್​ ಅವರು ಖಂಡಿಸಿದ್ದಾರೆ. ‘ಒಂದು ಸಿನಿಮಾದಲ್ಲಿ ಹೀರೋ ತಮ್ಮ ಬೂಟು ನೆಕ್ಕು ಎಂದು ಮಹಿಳೆಗೆ ಹೇಳುತ್ತಾನೆ ಎಂದಾದರೆ, ಒಂದು ಸಿನಿಮಾದಲ್ಲಿ ಮಹಿಳೆಯರಿಗೆ ಹೊಡೆಯುವುದು ಓಕೆ ಎಂದು ಹೀರೋ ಹೇಳುತ್ತಾನೆ ಎಂದಾದರೆ.. ಆ ಸಿನಿಮಾದ ಗೆಲುವು ಅಪಾಯಕಾರಿ’ ಎಂದು ಜಾವೇದ್​ ಅಖ್ತರ್​ ಹೇಳಿದ್ದಾರೆ.

ಜಾವೇದ್​ ಅಖ್ತರ್​ ಅವರು ‘ಅನಿಮಲ್​’ ಸಿನಿಮಾದ ಹೆಸರು ಹೇಳಿಲ್ಲ. ಹಾಗಿದ್ದರೂ ಕೂಡ ಇದು ಆ ಸಿನಿಮಾ ಕುರಿತಾಗಿಯೇ ಹೇಳಿದ್ದು ಎಂಬುದು ಸ್ಪಷ್ಟ. ಈ ಸಿನಿಮಾದ ಒಂದು ದೃಶ್ಯದಲ್ಲಿ ರಣಬೀರ್​ ಕಪೂರ್​ ಅವರು ತೃಪ್ತಿ ದಿಮ್ರಿಗೆ ಬೂಟು ನೆಕ್ಕಲು ಹೇಳುತ್ತಾರೆ. ಕೆಲವು ದೃಶ್ಯಗಳಲ್ಲಿ ಅವರು ಮಹಿಳೆಯರ ಮೇಲೆ ಕೈ ಮಾಡುತ್ತಾರೆ. ಈ ದೃಶ್ಯಗಳಿಗೆ ಜಾವೇದ್​ ಅಖ್ತರ್ ತಕರಾರು ತೆಗೆದಿದ್ದಾರೆ. ಇಂಥ ಸಿನಿಮಾಗಳನ್ನು ಇಷ್ಟಪಡಬಾರದು ಎಂದು ಪ್ರೇಕ್ಷಕರಿಗೆ ಅವರು ಕಿವಿಮಾತು ಹೇಳಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಕಲೆಕ್ಷನ್​ ಬಗ್ಗೆ ರಣಬೀರ್​ ಕಪೂರ್​ ಬಯಸಿದ್ದು ಎಷ್ಟು? ಆಗಿದ್ದೆಷ್ಟು?

‘ಈಗ ಸಿನಿಮಾದವರಿಗಿಂತಲೂ ಪ್ರೇಕ್ಷಕರ ಮೇಲೆ ಹೆಚ್ಚು ಜವಾಬ್ದಾರಿ ಇದೆ. ಯಾವ ಸಿನಿಮಾವನ್ನು ಇಷ್ಟಪಡಬೇಕು ಎಂಬುದನ್ನು ಪ್ರೇಕ್ಷಕರು ನಿರ್ಧರಿಸಬೇಕು. ಒಳ್ಳೆಯ ಸಿನಿಮಾ ಮಾಡುವವರೂ ಇದ್ದಾರೆ. ಆದರೆ ಅಂಥವರ ಸಂಖ್ಯೆ ಕಡಿಮೆ. ಅವರಿಗೆ ನೀವು ಎಲ್ಲಿಯವರೆಗೆ ಬೆಂಬಲ ನೀಡುತ್ತೀರಿ ಎಂಬುದರ ಮೇಲೆ ಅಂಥ ಸಿನಿಮಾಗಳ ಭವಿಷ್ಯ ನಿರ್ಧಾರ ಆಗಿರುತ್ತದೆ’ ಎಂದು ಜಾವೇದ್​ ಅಖ್ತರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ