AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅನಿಮಲ್​’ ಸಿನಿಮಾ ಗೆಲುವು ಅಪಾಯಕಾರಿ ಎಂದ ಜಾವೇದ್​ ಅಖ್ತರ್​; ಪ್ರೇಕ್ಷಕರಿಗೆ ಕಿವಿಮಾತು

Javed Akhtar On Animal: ‘ಈಗ ಸಿನಿಮಾದವರಿಗಿಂತಲೂ ಪ್ರೇಕ್ಷಕರ ಮೇಲೆ ಹೆಚ್ಚು ಜವಾಬ್ದಾರಿ ಇದೆ. ಒಳ್ಳೆಯ ಸಿನಿಮಾ ಮಾಡುವವರೂ ಇದ್ದಾರೆ. ಆದರೆ ಅಂಥವರ ಸಂಖ್ಯೆ ಕಡಿಮೆ. ಅವರಿಗೆ ನೀವು ಎಲ್ಲಿಯವರೆಗೆ ಬೆಂಬಲ ನೀಡುತ್ತೀರಿ ಎಂಬುದರ ಮೇಲೆ ಅಂಥ ಸಿನಿಮಾಗಳ ಭವಿಷ್ಯ ನಿರ್ಧಾರ ಆಗಿರುತ್ತದೆ’ ಎಂದು ಜಾವೇದ್​ ಅಖ್ತರ್​ ಹೇಳಿದ್ದಾರೆ.

‘ಅನಿಮಲ್​’ ಸಿನಿಮಾ ಗೆಲುವು ಅಪಾಯಕಾರಿ ಎಂದ ಜಾವೇದ್​ ಅಖ್ತರ್​; ಪ್ರೇಕ್ಷಕರಿಗೆ ಕಿವಿಮಾತು
ಜಾವೇದ್​ ಅಖ್ತರ್​, ರಣಬೀರ್ ಕಪೂರ್​
ಮದನ್​ ಕುಮಾರ್​
|

Updated on: Jan 07, 2024 | 7:31 AM

Share

ರಣಬೀರ್ ಕಪೂರ್​ ನಟನೆಯ ‘ಅನಿಮಲ್​’ ಸಿನಿಮಾ (Animal Movie) ಸೂಪರ್​ ಹಿಟ್​ ಆಗಿದೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಅಂದಾಜು 900 ಕೋಟಿ ರೂಪಾಯಿ ಕಮಾಯಿ ಮಾಡಿದೆ. ಆದರೆ ವಿಮರ್ಶೆಯ ದೃಷ್ಟಿಯಲ್ಲಿ ಈ ಚಿತ್ರ ಸೋತಿದೆ. ಅನೇಕ ವಿಮರ್ಶಕರು ಈ ಸಿನಿಮಾವನ್ನು ಖಂಡಿಸಿದ್ದಾರೆ. ಕೆಲವು ಸೆಲೆಬ್ರಿಟಿಗಳು ಕೂಡ ‘ಅನಿಮಲ್​’ ಸಿನಿಮಾದ ಬಗ್ಗೆ ಅಪಸ್ವರ ಎತ್ತಿದ್ದಾರೆ. ಆ ಸಾಲಿಗೆ ಖ್ಯಾತ ಗೀತ ರಚನಕಾರ ಜಾವೇದ್ ಅಖ್ತರ್​ (Javed Akhtar) ಕೂಡ ಸೇರ್ಪಡೆ ಆಗಿದ್ದಾರೆ. ಅವರು ಈ ಸಿನಿಮಾದ ಗೆಲುವು ಅಪಾಯಕಾರಿ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ಚರ್ಚೆಗೆ ಒಳಗಾಗುತ್ತಿದೆ.

‘ಅನಿಮಲ್​’ ಸಿನಿಮಾದಲ್ಲಿ ಮಹಿಳೆಯರನ್ನು ಅವಮಾನಿಸುವಂತಹ ದೃಶ್ಯಗಳು ಇವೆ ಎಂಬುದು ಅನೇಕರ ಆರೋಪ. ಅದೇ ವಿಚಾರವನ್ನು ಜಾವೇದ್​ ಅಖ್ತರ್​ ಅವರು ಖಂಡಿಸಿದ್ದಾರೆ. ‘ಒಂದು ಸಿನಿಮಾದಲ್ಲಿ ಹೀರೋ ತಮ್ಮ ಬೂಟು ನೆಕ್ಕು ಎಂದು ಮಹಿಳೆಗೆ ಹೇಳುತ್ತಾನೆ ಎಂದಾದರೆ, ಒಂದು ಸಿನಿಮಾದಲ್ಲಿ ಮಹಿಳೆಯರಿಗೆ ಹೊಡೆಯುವುದು ಓಕೆ ಎಂದು ಹೀರೋ ಹೇಳುತ್ತಾನೆ ಎಂದಾದರೆ.. ಆ ಸಿನಿಮಾದ ಗೆಲುವು ಅಪಾಯಕಾರಿ’ ಎಂದು ಜಾವೇದ್​ ಅಖ್ತರ್​ ಹೇಳಿದ್ದಾರೆ.

ಜಾವೇದ್​ ಅಖ್ತರ್​ ಅವರು ‘ಅನಿಮಲ್​’ ಸಿನಿಮಾದ ಹೆಸರು ಹೇಳಿಲ್ಲ. ಹಾಗಿದ್ದರೂ ಕೂಡ ಇದು ಆ ಸಿನಿಮಾ ಕುರಿತಾಗಿಯೇ ಹೇಳಿದ್ದು ಎಂಬುದು ಸ್ಪಷ್ಟ. ಈ ಸಿನಿಮಾದ ಒಂದು ದೃಶ್ಯದಲ್ಲಿ ರಣಬೀರ್​ ಕಪೂರ್​ ಅವರು ತೃಪ್ತಿ ದಿಮ್ರಿಗೆ ಬೂಟು ನೆಕ್ಕಲು ಹೇಳುತ್ತಾರೆ. ಕೆಲವು ದೃಶ್ಯಗಳಲ್ಲಿ ಅವರು ಮಹಿಳೆಯರ ಮೇಲೆ ಕೈ ಮಾಡುತ್ತಾರೆ. ಈ ದೃಶ್ಯಗಳಿಗೆ ಜಾವೇದ್​ ಅಖ್ತರ್ ತಕರಾರು ತೆಗೆದಿದ್ದಾರೆ. ಇಂಥ ಸಿನಿಮಾಗಳನ್ನು ಇಷ್ಟಪಡಬಾರದು ಎಂದು ಪ್ರೇಕ್ಷಕರಿಗೆ ಅವರು ಕಿವಿಮಾತು ಹೇಳಿದ್ದಾರೆ.

ಇದನ್ನೂ ಓದಿ: ‘ಅನಿಮಲ್​’ ಕಲೆಕ್ಷನ್​ ಬಗ್ಗೆ ರಣಬೀರ್​ ಕಪೂರ್​ ಬಯಸಿದ್ದು ಎಷ್ಟು? ಆಗಿದ್ದೆಷ್ಟು?

‘ಈಗ ಸಿನಿಮಾದವರಿಗಿಂತಲೂ ಪ್ರೇಕ್ಷಕರ ಮೇಲೆ ಹೆಚ್ಚು ಜವಾಬ್ದಾರಿ ಇದೆ. ಯಾವ ಸಿನಿಮಾವನ್ನು ಇಷ್ಟಪಡಬೇಕು ಎಂಬುದನ್ನು ಪ್ರೇಕ್ಷಕರು ನಿರ್ಧರಿಸಬೇಕು. ಒಳ್ಳೆಯ ಸಿನಿಮಾ ಮಾಡುವವರೂ ಇದ್ದಾರೆ. ಆದರೆ ಅಂಥವರ ಸಂಖ್ಯೆ ಕಡಿಮೆ. ಅವರಿಗೆ ನೀವು ಎಲ್ಲಿಯವರೆಗೆ ಬೆಂಬಲ ನೀಡುತ್ತೀರಿ ಎಂಬುದರ ಮೇಲೆ ಅಂಥ ಸಿನಿಮಾಗಳ ಭವಿಷ್ಯ ನಿರ್ಧಾರ ಆಗಿರುತ್ತದೆ’ ಎಂದು ಜಾವೇದ್​ ಅಖ್ತರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು