AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ನನ್ನ ಹೆಂಡತಿಯನ್ನೇ ನಿಭಾಯಿಸೋಕೆ ಆಗ್ತಿಲ್ಲ’: ಶಾರುಖ್​ ಖಾನ್​ ಹೀಗೆ ಹೇಳಿದ್ದೇಕೆ?

‘ಜವಾನ್​’ ಸಿನಿಮಾ ಸೆಪ್ಟೆಂಬರ್​ 7ರಂದು ಬಿಡುಗಡೆ ಆಗಲಿದೆ. ಈ ಚಿತ್ರವನ್ನು ನೋಡಲು ಫ್ಯಾನ್ಸ್​ ಕಾತರದಿಂದ ಕಾಯುತ್ತಿದ್ದಾರೆ. ಆದರೆ ನೆಟ್ಟಿಗರೊಬ್ಬರಿಗೆ ಹೆಂಡತಿಯಿಂದ ಸಮಸ್ಯೆ ಆಗಿದೆ. ಆ ಬಗ್ಗೆ ಅವರು ಶಾರುಖ್​ ಖಾನ್​ ಬಳಿ ಹೇಳಿಕೊಂಡಿದ್ದಾರೆ. ಅದಕ್ಕೆ ಸಖತ್​ ಫನ್ನಿಯಾಗಿ ಶಾರುಖ್​ ಉತ್ತರ ನೀಡಿದ್ದಾರೆ. ಅವರ ಟ್ವೀಟ್​ ವೈರಲ್​ ಆಗಿದೆ.

‘ನನಗೆ ನನ್ನ ಹೆಂಡತಿಯನ್ನೇ ನಿಭಾಯಿಸೋಕೆ ಆಗ್ತಿಲ್ಲ’: ಶಾರುಖ್​ ಖಾನ್​ ಹೀಗೆ ಹೇಳಿದ್ದೇಕೆ?
ಶಾರುಖ್​ ಖಾನ್​
Follow us
ಮದನ್​ ಕುಮಾರ್​
|

Updated on: Aug 27, 2023 | 11:44 AM

ನಟ ಶಾರುಖ್​ ಖಾನ್​ (Shah Rukh Khan) ಅವರು ಅಭಿಮಾನಿಗಳ ಜೊತೆ ಆಗಾಗ ಪ್ರಶ್ನೋತ್ತರ ನಡೆಸುತ್ತಾರೆ. ಟ್ವಿಟರ್​ ಮೂಲಕ ಅಭಿಮಾನಿಗಳು ಕೇಳುವ ಪ್ರಶ್ನೆಗೆ ಶಾರುಖ್​ ಉತ್ತರ ನೀಡುತ್ತಾರೆ. ಈ ವೇಳೆ ಕೆಲವು ಫನ್ನಿ ಪ್ರಶ್ನೆಗಳು ಕೂಡ ಎದುರಾಗುತ್ತವೆ. ಆಗ ಶಾರುಖ್​ ಖಾನ್​ ಅವರು ತುಂಬ ತಮಾಷೆಯ ರೂಪದಲ್ಲೇ ಉತ್ತರ ನೀಡುತ್ತಾರೆ. ಈ ವರ್ಷ ಅವರಿಗೆ ‘ಪಠಾಣ್​’ ಚಿತ್ರದ ಮೂಲಕ ದೊಡ್ಡ ಗೆಲುವು ಸಿಕ್ಕಿತು. ಈಗ ‘ಜವಾನ್​’ (Jawan Movie) ಚಿತ್ರದ ಬಿಡುಗಡೆಯನ್ನು ಅವರು ಎದುರು ನೋಡುತ್ತಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬರು ತಮ್ಮ ಹೆಂಡತಿಯಿಂದ ಆದ ಸಮಸ್ಯೆಯನ್ನು ಶಾರುಖ್​ ಖಾನ್​ ಬಳಿ ಹೇಳಿಕೊಂಡಿದ್ದಾರೆ. ಅದಕ್ಕೆ ಉತ್ತರಿಸಿರುವ ಶಾರುಖ್​, ‘ನನಗೆ ನನ್ನ ಹೆಂಡತಿಯನ್ನೇ ನಿಭಾಯಿಸೋಕೆ ಆಗ್ತಿಲ್ಲ’ ಎಂದು ಹೇಳಿದ್ದಾರೆ. ಅವರ ಈ ಟ್ವೀಟ್​ ಸಖತ್​ ವೈರಲ್​ ಆಗಿದೆ. ‘ಜವಾನ್​’ ಚಿತ್ರಕ್ಕೆ ಶಾರುಖ್​ ಪತ್ನಿ ಗೌರಿ ಖಾನ್ (Gauri Khan)​ ಅವರು ಬಂಡವಾಳ ಹೂಡಿದ್ದಾರೆ.

‘ಜವಾನ್​’ ಸಿನಿಮಾ ಸೆಪ್ಟೆಂಬರ್​ 7ರಂದು ಬಿಡುಗಡೆ ಆಗಲಿದೆ. ಈ ಚಿತ್ರವನ್ನು ನೋಡಲು ಫ್ಯಾನ್ಸ್​ ಕಾತರದಿಂದ ಕಾಯುತ್ತಿದ್ದಾರೆ. ಆದರೆ ನೆಟ್ಟಿಗರೊಬ್ಬರಿಗೆ ಹೆಂಡತಿಯಿಂದ ಸಮಸ್ಯೆ ಆಗಿದೆ. ಹೆಂಡತಿಯ ಕಾರಣದಿಂದ ಸರಿಯಾದ ಸಮಯಕ್ಕೆ ಚಿತ್ರಮಂದಿರಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಅವರು ಶಾರುಖ್​ ಖಾನ್​ ಬಳಿ ಸಮಸ್ಯೆ ಹೇಳಿಕೊಂಡಿದ್ದಾರೆ. ‘ಹೆಂಡತಿ ಜೊತೆ ಜವಾನ್​ ಸಿನಿಮಾ ನೋಡಬೇಕು ಅಂತ ಪ್ಲ್ಯಾನ್​ ಮಾಡಿದ್ದೇನೆ ಸರ್​. ಆದರೆ ಪ್ರತಿ ಬಾರಿ ಆಕೆ ಲೇಟ್​ ಮಾಡುತ್ತಾಳೆ. ಪಠಾಣ್​ ನೋಡಲು ಹೋದಾಗಲೂ ಹೀಗೆಯೇ ಆಗಿತ್ತು. ಬೇಗ ಚಿತ್ರಮಂದಿರವನ್ನು ತಲುಪಲು ಏನಾದರೂ ಟಿಪ್ಸ್​ ಕೊಡಿ’ ಎಂದು ಅಭಿಮಾನಿಯು ಕೇಳಿದ್ದಾರೆ.

ಅಭಿಮಾನಿ ಕೇಳಿದ ಪ್ರಶ್ನೆಗೆ ಶಾರುಖ್​ ಖಾನ್​ ಅವರು ತಮಾಷೆಯಾಗಿ ಉತ್ತರ ನೀಡಿದ್ದಾರೆ. ‘ದಯವಿಟ್ಟು.. ಹೆಂಡತಿಗೆ ಸಂಬಂಧಿಸಿದ ಸಮಸ್ಯೆಯನ್ನು ಬಗೆಹರಿಸುವಂತಹ ಪ್ರಶ್ನೆಗಳನ್ನು ಇನ್ಮುಂದೆ ಕೇಳಬೇಡಿ. ನನಗೆ ನನ್ನ ಹೆಂಡತಿಯನ್ನೇ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ನೀವು ನಿಮ್ಮ ಸಮಸ್ಯೆಯನ್ನೂ ನನ್ನ ಮೇಲೆ ಹಾಕುತ್ತಿದ್ದೀರಿ. ಎಲ್ಲ ಹೆಂಡತಿಯರೇ.. ಯಾವುದೇ ಚಿಂತೆ ಇಲ್ಲದೇ ಜವಾನ್​ ಸಿನಿಮಾ ನೋಡಲು ಹೋಗಿ’ ಎಂದು ಶಾರುಖ್​ ಖಾನ್​ ಟ್ವೀಟ್​ ಮಾಡಿದ್ದಾರೆ.

‘ಜವಾನ್​ ಚಿತ್ರ 500 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ’: ಭವಿಷ್ಯ ನುಡಿದ ಮನೋಜ್​ ದೇಸಾಯಿ

‘ಜವಾನ್​’ ಚಿತ್ರಕ್ಕೆ ಅಟ್ಲಿ ಅವರು ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್​ ಜೊತೆ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ, ಸಾನ್ಯಾ ಮಲ್ಹೋತ್ರಾ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಹಾಲಿವುಡ್​ನ ಸಾಹಸ ನಿರ್ದೇಶಕರು ಸ್ಟಂಟ್​ ಕೊರಿಯೋಗ್ರಫಿ ಮಾಡಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಅದ್ದೂರಿಯಾಗಿ ಈ ಸಿನಿಮಾ ಮೂಡಿಬಂದಿದೆ. ‘ಪಠಾಣ್​’ ರೀತಿಯೇ ಈ ಸಿನಿಮಾ ಕೂಡ ಬ್ಲಾಕ್​ ಬಸ್ಟರ್​ ಆಗುವ ಸಾಧ್ಯತೆ ಇದೆ. ಆದಷ್ಟು ಬೇಗ ಟ್ರೇಲರ್​ ರಿಲೀಸ್​ ಮಾಡಿ ಎಂದು ಫ್ಯಾನ್ಸ್​ ಬೇಡಿಕೆ ಇಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ಕಪ್​ಗೆ ಮುತ್ತಿಡಲು ಶಿವಕುಮಾರ್ ಆರ್​ಸಿಬಿ ತಂಡದ ಆಟಗಾರನೇ? ಭಾಸ್ಕರ್ ರಾವ್
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ನನ್ನ ಆರೋಗ್ಯ ಚೆನ್ನಾಗಿದೆ, ಅದನ್ನು ದೇವರು ನೋಡ್ಕೋತಾನೆ: ಕುಮಾರಸ್ವಾಮಿ
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ