AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ನನ್ನ ಹೆಂಡತಿಯನ್ನೇ ನಿಭಾಯಿಸೋಕೆ ಆಗ್ತಿಲ್ಲ’: ಶಾರುಖ್​ ಖಾನ್​ ಹೀಗೆ ಹೇಳಿದ್ದೇಕೆ?

‘ಜವಾನ್​’ ಸಿನಿಮಾ ಸೆಪ್ಟೆಂಬರ್​ 7ರಂದು ಬಿಡುಗಡೆ ಆಗಲಿದೆ. ಈ ಚಿತ್ರವನ್ನು ನೋಡಲು ಫ್ಯಾನ್ಸ್​ ಕಾತರದಿಂದ ಕಾಯುತ್ತಿದ್ದಾರೆ. ಆದರೆ ನೆಟ್ಟಿಗರೊಬ್ಬರಿಗೆ ಹೆಂಡತಿಯಿಂದ ಸಮಸ್ಯೆ ಆಗಿದೆ. ಆ ಬಗ್ಗೆ ಅವರು ಶಾರುಖ್​ ಖಾನ್​ ಬಳಿ ಹೇಳಿಕೊಂಡಿದ್ದಾರೆ. ಅದಕ್ಕೆ ಸಖತ್​ ಫನ್ನಿಯಾಗಿ ಶಾರುಖ್​ ಉತ್ತರ ನೀಡಿದ್ದಾರೆ. ಅವರ ಟ್ವೀಟ್​ ವೈರಲ್​ ಆಗಿದೆ.

‘ನನಗೆ ನನ್ನ ಹೆಂಡತಿಯನ್ನೇ ನಿಭಾಯಿಸೋಕೆ ಆಗ್ತಿಲ್ಲ’: ಶಾರುಖ್​ ಖಾನ್​ ಹೀಗೆ ಹೇಳಿದ್ದೇಕೆ?
ಶಾರುಖ್​ ಖಾನ್​
ಮದನ್​ ಕುಮಾರ್​
|

Updated on: Aug 27, 2023 | 11:44 AM

Share

ನಟ ಶಾರುಖ್​ ಖಾನ್​ (Shah Rukh Khan) ಅವರು ಅಭಿಮಾನಿಗಳ ಜೊತೆ ಆಗಾಗ ಪ್ರಶ್ನೋತ್ತರ ನಡೆಸುತ್ತಾರೆ. ಟ್ವಿಟರ್​ ಮೂಲಕ ಅಭಿಮಾನಿಗಳು ಕೇಳುವ ಪ್ರಶ್ನೆಗೆ ಶಾರುಖ್​ ಉತ್ತರ ನೀಡುತ್ತಾರೆ. ಈ ವೇಳೆ ಕೆಲವು ಫನ್ನಿ ಪ್ರಶ್ನೆಗಳು ಕೂಡ ಎದುರಾಗುತ್ತವೆ. ಆಗ ಶಾರುಖ್​ ಖಾನ್​ ಅವರು ತುಂಬ ತಮಾಷೆಯ ರೂಪದಲ್ಲೇ ಉತ್ತರ ನೀಡುತ್ತಾರೆ. ಈ ವರ್ಷ ಅವರಿಗೆ ‘ಪಠಾಣ್​’ ಚಿತ್ರದ ಮೂಲಕ ದೊಡ್ಡ ಗೆಲುವು ಸಿಕ್ಕಿತು. ಈಗ ‘ಜವಾನ್​’ (Jawan Movie) ಚಿತ್ರದ ಬಿಡುಗಡೆಯನ್ನು ಅವರು ಎದುರು ನೋಡುತ್ತಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬರು ತಮ್ಮ ಹೆಂಡತಿಯಿಂದ ಆದ ಸಮಸ್ಯೆಯನ್ನು ಶಾರುಖ್​ ಖಾನ್​ ಬಳಿ ಹೇಳಿಕೊಂಡಿದ್ದಾರೆ. ಅದಕ್ಕೆ ಉತ್ತರಿಸಿರುವ ಶಾರುಖ್​, ‘ನನಗೆ ನನ್ನ ಹೆಂಡತಿಯನ್ನೇ ನಿಭಾಯಿಸೋಕೆ ಆಗ್ತಿಲ್ಲ’ ಎಂದು ಹೇಳಿದ್ದಾರೆ. ಅವರ ಈ ಟ್ವೀಟ್​ ಸಖತ್​ ವೈರಲ್​ ಆಗಿದೆ. ‘ಜವಾನ್​’ ಚಿತ್ರಕ್ಕೆ ಶಾರುಖ್​ ಪತ್ನಿ ಗೌರಿ ಖಾನ್ (Gauri Khan)​ ಅವರು ಬಂಡವಾಳ ಹೂಡಿದ್ದಾರೆ.

‘ಜವಾನ್​’ ಸಿನಿಮಾ ಸೆಪ್ಟೆಂಬರ್​ 7ರಂದು ಬಿಡುಗಡೆ ಆಗಲಿದೆ. ಈ ಚಿತ್ರವನ್ನು ನೋಡಲು ಫ್ಯಾನ್ಸ್​ ಕಾತರದಿಂದ ಕಾಯುತ್ತಿದ್ದಾರೆ. ಆದರೆ ನೆಟ್ಟಿಗರೊಬ್ಬರಿಗೆ ಹೆಂಡತಿಯಿಂದ ಸಮಸ್ಯೆ ಆಗಿದೆ. ಹೆಂಡತಿಯ ಕಾರಣದಿಂದ ಸರಿಯಾದ ಸಮಯಕ್ಕೆ ಚಿತ್ರಮಂದಿರಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಅವರು ಶಾರುಖ್​ ಖಾನ್​ ಬಳಿ ಸಮಸ್ಯೆ ಹೇಳಿಕೊಂಡಿದ್ದಾರೆ. ‘ಹೆಂಡತಿ ಜೊತೆ ಜವಾನ್​ ಸಿನಿಮಾ ನೋಡಬೇಕು ಅಂತ ಪ್ಲ್ಯಾನ್​ ಮಾಡಿದ್ದೇನೆ ಸರ್​. ಆದರೆ ಪ್ರತಿ ಬಾರಿ ಆಕೆ ಲೇಟ್​ ಮಾಡುತ್ತಾಳೆ. ಪಠಾಣ್​ ನೋಡಲು ಹೋದಾಗಲೂ ಹೀಗೆಯೇ ಆಗಿತ್ತು. ಬೇಗ ಚಿತ್ರಮಂದಿರವನ್ನು ತಲುಪಲು ಏನಾದರೂ ಟಿಪ್ಸ್​ ಕೊಡಿ’ ಎಂದು ಅಭಿಮಾನಿಯು ಕೇಳಿದ್ದಾರೆ.

ಅಭಿಮಾನಿ ಕೇಳಿದ ಪ್ರಶ್ನೆಗೆ ಶಾರುಖ್​ ಖಾನ್​ ಅವರು ತಮಾಷೆಯಾಗಿ ಉತ್ತರ ನೀಡಿದ್ದಾರೆ. ‘ದಯವಿಟ್ಟು.. ಹೆಂಡತಿಗೆ ಸಂಬಂಧಿಸಿದ ಸಮಸ್ಯೆಯನ್ನು ಬಗೆಹರಿಸುವಂತಹ ಪ್ರಶ್ನೆಗಳನ್ನು ಇನ್ಮುಂದೆ ಕೇಳಬೇಡಿ. ನನಗೆ ನನ್ನ ಹೆಂಡತಿಯನ್ನೇ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ನೀವು ನಿಮ್ಮ ಸಮಸ್ಯೆಯನ್ನೂ ನನ್ನ ಮೇಲೆ ಹಾಕುತ್ತಿದ್ದೀರಿ. ಎಲ್ಲ ಹೆಂಡತಿಯರೇ.. ಯಾವುದೇ ಚಿಂತೆ ಇಲ್ಲದೇ ಜವಾನ್​ ಸಿನಿಮಾ ನೋಡಲು ಹೋಗಿ’ ಎಂದು ಶಾರುಖ್​ ಖಾನ್​ ಟ್ವೀಟ್​ ಮಾಡಿದ್ದಾರೆ.

‘ಜವಾನ್​ ಚಿತ್ರ 500 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ’: ಭವಿಷ್ಯ ನುಡಿದ ಮನೋಜ್​ ದೇಸಾಯಿ

‘ಜವಾನ್​’ ಚಿತ್ರಕ್ಕೆ ಅಟ್ಲಿ ಅವರು ನಿರ್ದೇಶನ ಮಾಡಿದ್ದಾರೆ. ಶಾರುಖ್​ ಖಾನ್​ ಜೊತೆ ನಯನತಾರಾ, ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ, ಸಾನ್ಯಾ ಮಲ್ಹೋತ್ರಾ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಹಾಲಿವುಡ್​ನ ಸಾಹಸ ನಿರ್ದೇಶಕರು ಸ್ಟಂಟ್​ ಕೊರಿಯೋಗ್ರಫಿ ಮಾಡಿದ್ದಾರೆ. ದೊಡ್ಡ ಬಜೆಟ್​ನಲ್ಲಿ ಅದ್ದೂರಿಯಾಗಿ ಈ ಸಿನಿಮಾ ಮೂಡಿಬಂದಿದೆ. ‘ಪಠಾಣ್​’ ರೀತಿಯೇ ಈ ಸಿನಿಮಾ ಕೂಡ ಬ್ಲಾಕ್​ ಬಸ್ಟರ್​ ಆಗುವ ಸಾಧ್ಯತೆ ಇದೆ. ಆದಷ್ಟು ಬೇಗ ಟ್ರೇಲರ್​ ರಿಲೀಸ್​ ಮಾಡಿ ಎಂದು ಫ್ಯಾನ್ಸ್​ ಬೇಡಿಕೆ ಇಟ್ಟಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು