AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷಗಳ ಹಿಂದೆಯೇ ಶಾರುಖ್​ ಖಾನ್​ ಚಿತ್ರದ ಆಫರ್​ ತಿರಸ್ಕರಿಸಿದ್ದ ನಯನತಾರಾ; ಕಾರಣ ಏನು?

2013ರಲ್ಲಿ ತೆರೆಕಂಡ ‘ಚೆನ್ನೈ ಎಕ್ಸ್​ಪ್ರೆಸ್​’ ಸಿನಿಮಾದಲ್ಲಿ ಶಾರುಖ್​ ಖಾನ್​ ಜೊತೆ ನಟಿಸಬಾರದು ಎಂಬುದು ನಯನತಾರಾ ಅವರ ಉದ್ದೇಶ ಆಗಿರಲಿಲ್ಲ. ಆದರೂ ಅವರು ಆಫರ್​ ತಿರಸ್ಕರಿಸಿದ್ದರ ಹಿಂದೆ ಒಂದು ಬಲವಾದ ಕಾರಣ ಇತ್ತು. ನಂತರ ಆ ಚಾನ್ಸ್​ ಪ್ರಿಯಾಮಣಿ ಪಾಲಾಯಿತು. ಈಗ ‘ಜವಾನ್​’ ಚಿತ್ರದಲ್ಲಿ ಶಾರುಖ್​ ಮತ್ತು ನಯನತಾರಾ ಜೊತೆಯಾಗಿ ನಟಿಸಿದ್ದಾರೆ.

10 ವರ್ಷಗಳ ಹಿಂದೆಯೇ ಶಾರುಖ್​ ಖಾನ್​ ಚಿತ್ರದ ಆಫರ್​ ತಿರಸ್ಕರಿಸಿದ್ದ ನಯನತಾರಾ; ಕಾರಣ ಏನು?
ಶಾರುಖ್​ ಖಾನ್​, ನಯನತಾರಾ
ಮದನ್​ ಕುಮಾರ್​
|

Updated on: Sep 05, 2023 | 11:47 AM

Share

ನಟಿ ನಯನತಾರಾ ಅವರು ‘ಜವಾನ್​’ (Jawan) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸೆಪ್ಟೆಂಬರ್​ 7ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಇದು ಬಾಲಿವುಡ್​ ಸಿನಿಮಾ ಆಗಿದ್ದರೂ ಕೂಡ ದಕ್ಷಿಣ ಭಾರತದ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ತೆರೆ ಹಿಂದೆ ಕೂಡ ಸೌತ್​ ಸಿನಿಮಾ ಇಂಡಸ್ಟ್ರಿಯ ಹಲವರು ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಶಾರುಖ್ ಖಾನ್ (Shah Rukh Khan)​ ಮತ್ತು ನಯನತಾರಾ ಅವರು ಜೋಡಿಯಾಗಿ ‘ಜವಾನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಆದರೆ ಅಚ್ಚರಿಯ ವಿಚಾರ ಏನೆಂದರೆ, 10 ವರ್ಷಗಳ ಹಿಂದೆಯೇ ನಯನತಾರಾ (Nayanthara) ಅವರಿಗೆ ಶಾರುಖ್​ ಜೊತೆ ನಟಿಸುವ ಅವಕಾಶ ಸಿಕ್ಕಿತ್ತು. ಆದರೆ ಅದನ್ನು ಅವರು ತಿರಸ್ಕರಿಸಿದ್ದರು. ಆ ಬಗ್ಗೆ ಇಲ್ಲಿದೆ ಮಾಹಿತಿ..

2013ರಲ್ಲಿ ‘ಚೆನ್ನೈ ಎಕ್ಸ್​ಪ್ರೆಸ್​’ ಸಿನಿಮಾ ತೆರೆಕಂಡು ಸೂಪರ್​ ಹಿಟ್​ ಆಯಿತು. ಆ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್​ ಜೋಡಿಯಾಗಿ ನಟಿಸಿದ್ದರು. ಹಾಗಂತ ದೀಪಿಕಾ ಪಡುಕೋಣೆ ಮಾಡಬೇಕಿದ್ದ ಪಾತ್ರವನ್ನು ನಯನತಾರಾಗೆ ಆಫರ್​ ಮಾಡಿರಲಿಲ್ಲ. ಬದಲಿಗೆ ‘ಒನ್​ ಟು ತ್ರಿ ಫೋರ್​..’ ಐಟಂ ಹಾಡಿಗೆ ಹೆಜ್ಜೆ ಹಾಕುವಂತೆ ನಯನತಾರಾಗೆ ಕೇಳಿಕೊಳ್ಳಲಾಗಿತ್ತು. ಆದರೆ ಅದನ್ನು ಅವರು ತಿರಸ್ಕರಿಸಿದ್ದರು. ಬಳಿಕ ಆ ಅವಕಾಶ ಪ್ರಿಯಾಮಣಿಗೆ ಸಿಕ್ಕಿತು. ಅವರು ಬಿಂದಾಸ್​ ಆಗಿ ಡ್ಯಾನ್ಸ್​ ಮಾಡಿ ಜನಪ್ರಿಯತೆ ಹೆಚ್ಚಿಸಿಕೊಂಡರು.

ಇದನ್ನೂ ಓದಿ: ‘ಜವಾನ್’ ಚಿತ್ರಕ್ಕೆ ನಯನತಾರಾ ಪಡೆದ ಸಂಭಾವನೆ ಇಷ್ಟೊಂದಾ? ಕೇಳಿದ್ರೆ ಅಚ್ಚರಿಪಡ್ತೀರಿ

ಶಾರುಖ್​ ಖಾನ್​ ಜೊತೆ ನಟಿಸಬಾರದು ಎಂಬುದು ನಯನತಾರಾ ಅವರ ಉದ್ದೇಶ ಆಗಿರಲಿಲ್ಲ. ಆದರೆ, ಕೇವಲ ಐಟಂ ಡ್ಯಾನ್ಸ್​ನಲ್ಲಿ ಕಾಣಿಸಿಕೊಳ್ಳುವುದು ಅವರಿಗೆ ಇಷ್ಟ ಇರಲಿಲ್ಲ. ಹಾಗಾಗಿ ಅಂಥ ದೊಡ್ಡ ಸ್ಟಾರ್​ ನಟನ ಸಿನಿಮಾದಿಂದ ಆಫರ್​ ಬಂದರೂ ಕೂಡ ಅದನ್ನು ಅವರು ನಯವಾಗಿ ತಿರಸ್ಕರಿಸಿದ್ದರು. ಈಗ ‘ಜವಾನ್​’ ಸಿನಿಮಾದಲ್ಲಿ ನಯನತಾರಾಗೆ ಮುಖ್ಯವಾದ ಪಾತ್ರವೇ ಸಿಕ್ಕಿದೆ. ಆದ್ದರಿಂದ ಅವರು ಖುಷಿಯಿಂದ ಒಪ್ಪಿಕೊಂಡು ನಟಿಸಿದ್ದಾರೆ. ಇಬ್ಬರ ಕಾಂಬಿನೇಷನ್​ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ‘ಸುಮ್ಮನಿರಿ.. 2 ಮಕ್ಕಳ ತಾಯಿ ಅವರು’: ನಯನತಾರಾ ಮೇಲೆ ಲವ್​ ಆಯ್ತಾ ಅಂತ ಕೇಳಿದ್ದಕ್ಕೆ ಶಾರುಖ್​ ಉತ್ತರ

ಅಟ್ಲಿ ನಿರ್ದೇಶನ ಮಾಡಿರುವ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ ಖಾನ್​, ನಯನತಾರಾ ಮಾತ್ರವಲ್ಲದೇ ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ, ಸಾನ್ಯಾ ಮಲ್ಹೋತ್ರಾ ಪ್ರಿಯಾಮಣಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರದಲ್ಲಿ ಶಾರುಖ್​ ಖಾನ್​ ಅವರಿಗೆ ವಿವಿಧ ಗೆಟಪ್​ಗಳು ಇವೆ. ಭರ್ಜರಿ ಆ್ಯಕ್ಷನ್​ ಸನ್ನಿವೇಶಗಳು ಈ ಸಿನಿಮಾದಲ್ಲಿ ಇವೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಪೊಲೀಸ್​ ಅಧಿಕಾರಿ ಪಾತ್ರದಲ್ಲಿ ನಯನತಾರಾ ನಟಿಸಿದ್ದಾರೆ. ಆದರೆ ಪ್ರಚಾರ ಕಾರ್ಯದಲ್ಲಿ ಅವರು ಭಾಗವಹಿಸುತ್ತಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ