AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷಗಳ ಹಿಂದೆಯೇ ಶಾರುಖ್​ ಖಾನ್​ ಚಿತ್ರದ ಆಫರ್​ ತಿರಸ್ಕರಿಸಿದ್ದ ನಯನತಾರಾ; ಕಾರಣ ಏನು?

2013ರಲ್ಲಿ ತೆರೆಕಂಡ ‘ಚೆನ್ನೈ ಎಕ್ಸ್​ಪ್ರೆಸ್​’ ಸಿನಿಮಾದಲ್ಲಿ ಶಾರುಖ್​ ಖಾನ್​ ಜೊತೆ ನಟಿಸಬಾರದು ಎಂಬುದು ನಯನತಾರಾ ಅವರ ಉದ್ದೇಶ ಆಗಿರಲಿಲ್ಲ. ಆದರೂ ಅವರು ಆಫರ್​ ತಿರಸ್ಕರಿಸಿದ್ದರ ಹಿಂದೆ ಒಂದು ಬಲವಾದ ಕಾರಣ ಇತ್ತು. ನಂತರ ಆ ಚಾನ್ಸ್​ ಪ್ರಿಯಾಮಣಿ ಪಾಲಾಯಿತು. ಈಗ ‘ಜವಾನ್​’ ಚಿತ್ರದಲ್ಲಿ ಶಾರುಖ್​ ಮತ್ತು ನಯನತಾರಾ ಜೊತೆಯಾಗಿ ನಟಿಸಿದ್ದಾರೆ.

10 ವರ್ಷಗಳ ಹಿಂದೆಯೇ ಶಾರುಖ್​ ಖಾನ್​ ಚಿತ್ರದ ಆಫರ್​ ತಿರಸ್ಕರಿಸಿದ್ದ ನಯನತಾರಾ; ಕಾರಣ ಏನು?
ಶಾರುಖ್​ ಖಾನ್​, ನಯನತಾರಾ
ಮದನ್​ ಕುಮಾರ್​
|

Updated on: Sep 05, 2023 | 11:47 AM

Share

ನಟಿ ನಯನತಾರಾ ಅವರು ‘ಜವಾನ್​’ (Jawan) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸೆಪ್ಟೆಂಬರ್​ 7ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಇದು ಬಾಲಿವುಡ್​ ಸಿನಿಮಾ ಆಗಿದ್ದರೂ ಕೂಡ ದಕ್ಷಿಣ ಭಾರತದ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ತೆರೆ ಹಿಂದೆ ಕೂಡ ಸೌತ್​ ಸಿನಿಮಾ ಇಂಡಸ್ಟ್ರಿಯ ಹಲವರು ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಶಾರುಖ್ ಖಾನ್ (Shah Rukh Khan)​ ಮತ್ತು ನಯನತಾರಾ ಅವರು ಜೋಡಿಯಾಗಿ ‘ಜವಾನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಆದರೆ ಅಚ್ಚರಿಯ ವಿಚಾರ ಏನೆಂದರೆ, 10 ವರ್ಷಗಳ ಹಿಂದೆಯೇ ನಯನತಾರಾ (Nayanthara) ಅವರಿಗೆ ಶಾರುಖ್​ ಜೊತೆ ನಟಿಸುವ ಅವಕಾಶ ಸಿಕ್ಕಿತ್ತು. ಆದರೆ ಅದನ್ನು ಅವರು ತಿರಸ್ಕರಿಸಿದ್ದರು. ಆ ಬಗ್ಗೆ ಇಲ್ಲಿದೆ ಮಾಹಿತಿ..

2013ರಲ್ಲಿ ‘ಚೆನ್ನೈ ಎಕ್ಸ್​ಪ್ರೆಸ್​’ ಸಿನಿಮಾ ತೆರೆಕಂಡು ಸೂಪರ್​ ಹಿಟ್​ ಆಯಿತು. ಆ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್​ ಜೋಡಿಯಾಗಿ ನಟಿಸಿದ್ದರು. ಹಾಗಂತ ದೀಪಿಕಾ ಪಡುಕೋಣೆ ಮಾಡಬೇಕಿದ್ದ ಪಾತ್ರವನ್ನು ನಯನತಾರಾಗೆ ಆಫರ್​ ಮಾಡಿರಲಿಲ್ಲ. ಬದಲಿಗೆ ‘ಒನ್​ ಟು ತ್ರಿ ಫೋರ್​..’ ಐಟಂ ಹಾಡಿಗೆ ಹೆಜ್ಜೆ ಹಾಕುವಂತೆ ನಯನತಾರಾಗೆ ಕೇಳಿಕೊಳ್ಳಲಾಗಿತ್ತು. ಆದರೆ ಅದನ್ನು ಅವರು ತಿರಸ್ಕರಿಸಿದ್ದರು. ಬಳಿಕ ಆ ಅವಕಾಶ ಪ್ರಿಯಾಮಣಿಗೆ ಸಿಕ್ಕಿತು. ಅವರು ಬಿಂದಾಸ್​ ಆಗಿ ಡ್ಯಾನ್ಸ್​ ಮಾಡಿ ಜನಪ್ರಿಯತೆ ಹೆಚ್ಚಿಸಿಕೊಂಡರು.

ಇದನ್ನೂ ಓದಿ: ‘ಜವಾನ್’ ಚಿತ್ರಕ್ಕೆ ನಯನತಾರಾ ಪಡೆದ ಸಂಭಾವನೆ ಇಷ್ಟೊಂದಾ? ಕೇಳಿದ್ರೆ ಅಚ್ಚರಿಪಡ್ತೀರಿ

ಶಾರುಖ್​ ಖಾನ್​ ಜೊತೆ ನಟಿಸಬಾರದು ಎಂಬುದು ನಯನತಾರಾ ಅವರ ಉದ್ದೇಶ ಆಗಿರಲಿಲ್ಲ. ಆದರೆ, ಕೇವಲ ಐಟಂ ಡ್ಯಾನ್ಸ್​ನಲ್ಲಿ ಕಾಣಿಸಿಕೊಳ್ಳುವುದು ಅವರಿಗೆ ಇಷ್ಟ ಇರಲಿಲ್ಲ. ಹಾಗಾಗಿ ಅಂಥ ದೊಡ್ಡ ಸ್ಟಾರ್​ ನಟನ ಸಿನಿಮಾದಿಂದ ಆಫರ್​ ಬಂದರೂ ಕೂಡ ಅದನ್ನು ಅವರು ನಯವಾಗಿ ತಿರಸ್ಕರಿಸಿದ್ದರು. ಈಗ ‘ಜವಾನ್​’ ಸಿನಿಮಾದಲ್ಲಿ ನಯನತಾರಾಗೆ ಮುಖ್ಯವಾದ ಪಾತ್ರವೇ ಸಿಕ್ಕಿದೆ. ಆದ್ದರಿಂದ ಅವರು ಖುಷಿಯಿಂದ ಒಪ್ಪಿಕೊಂಡು ನಟಿಸಿದ್ದಾರೆ. ಇಬ್ಬರ ಕಾಂಬಿನೇಷನ್​ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ‘ಸುಮ್ಮನಿರಿ.. 2 ಮಕ್ಕಳ ತಾಯಿ ಅವರು’: ನಯನತಾರಾ ಮೇಲೆ ಲವ್​ ಆಯ್ತಾ ಅಂತ ಕೇಳಿದ್ದಕ್ಕೆ ಶಾರುಖ್​ ಉತ್ತರ

ಅಟ್ಲಿ ನಿರ್ದೇಶನ ಮಾಡಿರುವ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ ಖಾನ್​, ನಯನತಾರಾ ಮಾತ್ರವಲ್ಲದೇ ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ, ಸಾನ್ಯಾ ಮಲ್ಹೋತ್ರಾ ಪ್ರಿಯಾಮಣಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರದಲ್ಲಿ ಶಾರುಖ್​ ಖಾನ್​ ಅವರಿಗೆ ವಿವಿಧ ಗೆಟಪ್​ಗಳು ಇವೆ. ಭರ್ಜರಿ ಆ್ಯಕ್ಷನ್​ ಸನ್ನಿವೇಶಗಳು ಈ ಸಿನಿಮಾದಲ್ಲಿ ಇವೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಪೊಲೀಸ್​ ಅಧಿಕಾರಿ ಪಾತ್ರದಲ್ಲಿ ನಯನತಾರಾ ನಟಿಸಿದ್ದಾರೆ. ಆದರೆ ಪ್ರಚಾರ ಕಾರ್ಯದಲ್ಲಿ ಅವರು ಭಾಗವಹಿಸುತ್ತಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!