AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷಗಳ ಹಿಂದೆಯೇ ಶಾರುಖ್​ ಖಾನ್​ ಚಿತ್ರದ ಆಫರ್​ ತಿರಸ್ಕರಿಸಿದ್ದ ನಯನತಾರಾ; ಕಾರಣ ಏನು?

2013ರಲ್ಲಿ ತೆರೆಕಂಡ ‘ಚೆನ್ನೈ ಎಕ್ಸ್​ಪ್ರೆಸ್​’ ಸಿನಿಮಾದಲ್ಲಿ ಶಾರುಖ್​ ಖಾನ್​ ಜೊತೆ ನಟಿಸಬಾರದು ಎಂಬುದು ನಯನತಾರಾ ಅವರ ಉದ್ದೇಶ ಆಗಿರಲಿಲ್ಲ. ಆದರೂ ಅವರು ಆಫರ್​ ತಿರಸ್ಕರಿಸಿದ್ದರ ಹಿಂದೆ ಒಂದು ಬಲವಾದ ಕಾರಣ ಇತ್ತು. ನಂತರ ಆ ಚಾನ್ಸ್​ ಪ್ರಿಯಾಮಣಿ ಪಾಲಾಯಿತು. ಈಗ ‘ಜವಾನ್​’ ಚಿತ್ರದಲ್ಲಿ ಶಾರುಖ್​ ಮತ್ತು ನಯನತಾರಾ ಜೊತೆಯಾಗಿ ನಟಿಸಿದ್ದಾರೆ.

10 ವರ್ಷಗಳ ಹಿಂದೆಯೇ ಶಾರುಖ್​ ಖಾನ್​ ಚಿತ್ರದ ಆಫರ್​ ತಿರಸ್ಕರಿಸಿದ್ದ ನಯನತಾರಾ; ಕಾರಣ ಏನು?
ಶಾರುಖ್​ ಖಾನ್​, ನಯನತಾರಾ
ಮದನ್​ ಕುಮಾರ್​
|

Updated on: Sep 05, 2023 | 11:47 AM

Share

ನಟಿ ನಯನತಾರಾ ಅವರು ‘ಜವಾನ್​’ (Jawan) ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಸೆಪ್ಟೆಂಬರ್​ 7ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಇದು ಬಾಲಿವುಡ್​ ಸಿನಿಮಾ ಆಗಿದ್ದರೂ ಕೂಡ ದಕ್ಷಿಣ ಭಾರತದ ಅನೇಕರು ಈ ಚಿತ್ರದಲ್ಲಿ ನಟಿಸಿದ್ದಾರೆ. ತೆರೆ ಹಿಂದೆ ಕೂಡ ಸೌತ್​ ಸಿನಿಮಾ ಇಂಡಸ್ಟ್ರಿಯ ಹಲವರು ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಶಾರುಖ್ ಖಾನ್ (Shah Rukh Khan)​ ಮತ್ತು ನಯನತಾರಾ ಅವರು ಜೋಡಿಯಾಗಿ ‘ಜವಾನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಆದರೆ ಅಚ್ಚರಿಯ ವಿಚಾರ ಏನೆಂದರೆ, 10 ವರ್ಷಗಳ ಹಿಂದೆಯೇ ನಯನತಾರಾ (Nayanthara) ಅವರಿಗೆ ಶಾರುಖ್​ ಜೊತೆ ನಟಿಸುವ ಅವಕಾಶ ಸಿಕ್ಕಿತ್ತು. ಆದರೆ ಅದನ್ನು ಅವರು ತಿರಸ್ಕರಿಸಿದ್ದರು. ಆ ಬಗ್ಗೆ ಇಲ್ಲಿದೆ ಮಾಹಿತಿ..

2013ರಲ್ಲಿ ‘ಚೆನ್ನೈ ಎಕ್ಸ್​ಪ್ರೆಸ್​’ ಸಿನಿಮಾ ತೆರೆಕಂಡು ಸೂಪರ್​ ಹಿಟ್​ ಆಯಿತು. ಆ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಮತ್ತು ಶಾರುಖ್​ ಖಾನ್​ ಜೋಡಿಯಾಗಿ ನಟಿಸಿದ್ದರು. ಹಾಗಂತ ದೀಪಿಕಾ ಪಡುಕೋಣೆ ಮಾಡಬೇಕಿದ್ದ ಪಾತ್ರವನ್ನು ನಯನತಾರಾಗೆ ಆಫರ್​ ಮಾಡಿರಲಿಲ್ಲ. ಬದಲಿಗೆ ‘ಒನ್​ ಟು ತ್ರಿ ಫೋರ್​..’ ಐಟಂ ಹಾಡಿಗೆ ಹೆಜ್ಜೆ ಹಾಕುವಂತೆ ನಯನತಾರಾಗೆ ಕೇಳಿಕೊಳ್ಳಲಾಗಿತ್ತು. ಆದರೆ ಅದನ್ನು ಅವರು ತಿರಸ್ಕರಿಸಿದ್ದರು. ಬಳಿಕ ಆ ಅವಕಾಶ ಪ್ರಿಯಾಮಣಿಗೆ ಸಿಕ್ಕಿತು. ಅವರು ಬಿಂದಾಸ್​ ಆಗಿ ಡ್ಯಾನ್ಸ್​ ಮಾಡಿ ಜನಪ್ರಿಯತೆ ಹೆಚ್ಚಿಸಿಕೊಂಡರು.

ಇದನ್ನೂ ಓದಿ: ‘ಜವಾನ್’ ಚಿತ್ರಕ್ಕೆ ನಯನತಾರಾ ಪಡೆದ ಸಂಭಾವನೆ ಇಷ್ಟೊಂದಾ? ಕೇಳಿದ್ರೆ ಅಚ್ಚರಿಪಡ್ತೀರಿ

ಶಾರುಖ್​ ಖಾನ್​ ಜೊತೆ ನಟಿಸಬಾರದು ಎಂಬುದು ನಯನತಾರಾ ಅವರ ಉದ್ದೇಶ ಆಗಿರಲಿಲ್ಲ. ಆದರೆ, ಕೇವಲ ಐಟಂ ಡ್ಯಾನ್ಸ್​ನಲ್ಲಿ ಕಾಣಿಸಿಕೊಳ್ಳುವುದು ಅವರಿಗೆ ಇಷ್ಟ ಇರಲಿಲ್ಲ. ಹಾಗಾಗಿ ಅಂಥ ದೊಡ್ಡ ಸ್ಟಾರ್​ ನಟನ ಸಿನಿಮಾದಿಂದ ಆಫರ್​ ಬಂದರೂ ಕೂಡ ಅದನ್ನು ಅವರು ನಯವಾಗಿ ತಿರಸ್ಕರಿಸಿದ್ದರು. ಈಗ ‘ಜವಾನ್​’ ಸಿನಿಮಾದಲ್ಲಿ ನಯನತಾರಾಗೆ ಮುಖ್ಯವಾದ ಪಾತ್ರವೇ ಸಿಕ್ಕಿದೆ. ಆದ್ದರಿಂದ ಅವರು ಖುಷಿಯಿಂದ ಒಪ್ಪಿಕೊಂಡು ನಟಿಸಿದ್ದಾರೆ. ಇಬ್ಬರ ಕಾಂಬಿನೇಷನ್​ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಇದನ್ನೂ ಓದಿ: ‘ಸುಮ್ಮನಿರಿ.. 2 ಮಕ್ಕಳ ತಾಯಿ ಅವರು’: ನಯನತಾರಾ ಮೇಲೆ ಲವ್​ ಆಯ್ತಾ ಅಂತ ಕೇಳಿದ್ದಕ್ಕೆ ಶಾರುಖ್​ ಉತ್ತರ

ಅಟ್ಲಿ ನಿರ್ದೇಶನ ಮಾಡಿರುವ ‘ಜವಾನ್​’ ಸಿನಿಮಾದಲ್ಲಿ ಶಾರುಖ್​ ಖಾನ್​, ನಯನತಾರಾ ಮಾತ್ರವಲ್ಲದೇ ದೀಪಿಕಾ ಪಡುಕೋಣೆ, ವಿಜಯ್​ ಸೇತುಪತಿ, ಸಾನ್ಯಾ ಮಲ್ಹೋತ್ರಾ ಪ್ರಿಯಾಮಣಿ ಮುಂತಾದವರು ನಟಿಸಿದ್ದಾರೆ. ಈ ಚಿತ್ರದಲ್ಲಿ ಶಾರುಖ್​ ಖಾನ್​ ಅವರಿಗೆ ವಿವಿಧ ಗೆಟಪ್​ಗಳು ಇವೆ. ಭರ್ಜರಿ ಆ್ಯಕ್ಷನ್​ ಸನ್ನಿವೇಶಗಳು ಈ ಸಿನಿಮಾದಲ್ಲಿ ಇವೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಪೊಲೀಸ್​ ಅಧಿಕಾರಿ ಪಾತ್ರದಲ್ಲಿ ನಯನತಾರಾ ನಟಿಸಿದ್ದಾರೆ. ಆದರೆ ಪ್ರಚಾರ ಕಾರ್ಯದಲ್ಲಿ ಅವರು ಭಾಗವಹಿಸುತ್ತಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು