AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಕಾಲಿಗೆ ನಮಸ್ಕರಿಸಿದ ‘ಜವಾನ್​’ ನಿರ್ದೇಶಕ ಅಟ್ಲಿ; ಕಿಂಗ್ ಖಾನ್​ ಪ್ರತಿಕ್ರಿಯೆ ಏನು?

‘ಜವಾನ್​’ ಸಿನಿಮಾದಿಂದ ಶಾರುಖ್​ ಖಾನ್​ ಅವರಿಗೆ ಭರ್ಜರಿ ಗೆಲುವು ಸಿಕ್ಕಿತು. ಆ ಸಿನಿಮಾದಿಂದ ನಿರ್ದೇಶಕ ಅಟ್ಲಿ ಅವರ ಜನಪ್ರಿಯತೆ ಕೂಡ ಹೆಚ್ಚಿತು. ಈಗ ಅವರು ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಪಡೆದಿದ್ದಾರೆ. ಅವಾರ್ಡ್​ ಸ್ವೀಕರಿಸುವುದಕ್ಕೂ ಮುನ್ನ ಅಟ್ಲಿ ಅವರು ಶಾರುಖ್​ ಖಾನ್​ ಕಾಲು ಮುಟ್ಟಿ ನಮಸ್ಕಾರ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ಶಾರುಖ್​ ಕಾಲಿಗೆ ನಮಸ್ಕರಿಸಿದ ‘ಜವಾನ್​’ ನಿರ್ದೇಶಕ ಅಟ್ಲಿ; ಕಿಂಗ್ ಖಾನ್​ ಪ್ರತಿಕ್ರಿಯೆ ಏನು?
ಶಾರುಖ್​ ಖಾನ್​, ಅಟ್ಲಿ
ಮದನ್​ ಕುಮಾರ್​
|

Updated on: Mar 11, 2024 | 3:26 PM

Share

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ (Atlee) ಅವರಿಗೆ ಬಾಲಿವುಡ್​ನಲ್ಲಿ ಈಗ ಸಖತ್ ಬೇಡಿಕೆ ಸೃಷ್ಟಿ ಆಗಿದೆ. ಅದಕ್ಕೆ ಕಾರಣ ಆಗಿದ್ದು ‘ಜವಾನ್’ (Jawan) ಸಿನಿಮಾದ ಗೆಲುವು. ಇದು ಅಟ್ಲಿ ನಿರ್ದೇಶನ ಮಾಡಿದ ಮೊದಲ ಹಿಂದಿ ಸಿನಿಮಾ. ಚೊಚ್ಚಲ ಬಾಲಿವುಡ್​ ಪ್ರಾಜೆಕ್ಟ್​ನಲ್ಲೇ ಶಾರುಖ್​ ಖಾನ್ ಜೊತೆ ಕೆಲಸ ಮಾಡುವ ಅವಕಾಶ ಅಟ್ಲಿ ಅವರಿಗೆ ಸಿಕ್ಕಿತು. 2023ರಲ್ಲಿ ತೆರೆಕಂಡು ಬಾಕ್ಸ್​ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡ ‘ಜವಾನ್​’ ಚಿತ್ರಕ್ಕೆ ಈಗ ಪ್ರಶಸ್ತಿಗಳು ಕೂಡ ಸಿಗುತ್ತಿವೆ. ಅವಾರ್ಡ್​ ಸ್ವೀಕರಿಸುವಾಗ ಅಟ್ಲಿ ಅವರು ಶಾರುಖ್​ ಖಾನ್​ (Shah Rukh Khan) ಕಾಲಿಗೆ ನಮಸ್ಕರಿಸಿದ್ದಾರೆ.

‘ಜವಾನ್​’ ಸಿನಿಮಾದ ನಿರ್ದೇಶನಕ್ಕಾಗಿ ಅಟ್ಲಿ ಅವರಿಗೆ ‘ಜೀ ಸಿನಿ ಅವಾರ್ಡ್ಸ್​ 2024’ರಲ್ಲಿ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಸಿಕ್ಕಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರ ಹೆಸರು ಘೋಷಣೆ ಆದಾಗ ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿದರು. ಪ್ರಶಸ್ತಿ ಸ್ವೀಕರಿಸಲು ವೇದಿಕೆ ಹತ್ತುವುದಕ್ಕೂ ಮುನ್ನ ಅಟ್ಲಿ ಅವರು ಶಾರುಖ್​ ಖಾನ್​ ಕಾಲಿಗೆ ನಮಸ್ಕರಿಸಿದರು. ಅದನ್ನು ತಡೆಯಲು ಶಾರುಖ್​ ಮುಂದಾದರು.

ಇದನ್ನೂ ಓದಿ: ನಾಟು ನಾಟು ಸ್ಟೆಪ್​ ಹಾಕಲಾಗದೇ ಸೋತ ಆಮಿರ್​, ಸಲ್ಲು, ಶಾರುಖ್​; ಮುಜುಗರ ತಪ್ಪಿಸಲು ಮಾಡಿದ್ದೇನು?

ತಮ್ಮ ಕಾಲಿಗೆ ಬೀಳಲು ಬಂದ ನಿರ್ದೇಶಕನನ್ನು ತಡೆಯಲು ಶಾರುಖ್​ ಖಾನ್​ ಪ್ರಯತ್ನಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ. ಕಿಂಗ್​ ಖಾನ್​ ಕಾಲಿಗೆ ನಮಸ್ಕರಿಸಿದ ಬಳಿಕವೇ ಅಟ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು. ಈಗ ಅಟ್ಲಿ ಅವರಿಗೆ 37 ವರ್ಷ ವಯಸ್ಸು. ಶಾರುಖ್​ ಖಾನ್​ ಅವರಿಗೆ 58 ವರ್ಷ ವಯಸ್ಸು. ಇಬ್ಬರ ನಡುವೆ 21 ವರ್ಷಗಳ ಅಂತರ ಇದೆ. ತಮಗಿಂತ ಹಿರಿಯರಾದ ಶಾರುಖ್​ ಖಾನ್​ಗೆ ಅಟ್ಲಿ ಅವರು ಗೌರವ ನೀಡಿದ್ದಾರೆ. ವೈರಲ್​ ಆಗಿರುವ ಈ ವಿಡಿಯೋಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುವ ಮೂಲಕ ತಮ್ಮ ಅನಿಸಿಕೆ ತಿಳಿಸುತ್ತಿದ್ದಾರೆ.

ಅಟ್ಲಿ ಅವರು ನಿರ್ದೇಶಕನಾಗಿ 10 ವರ್ಷ ಕಳೆದಿದೆ. ಈವರೆಗೂ ಅವರು ಡೈರೆಕ್ಷನ್​ ಮಾಡಿದ್ದು 5 ಸಿನಿಮಾಗಳಿಗೆ ಮಾತ್ರ. ಅವರ ಎಲ್ಲ ಸಿನಿಮಾಗಳು ಜನಮನ ಗೆದ್ದಿವೆ. ಮೊದಲೆಲ್ಲ ಕೇವಲ ತಮಿಳು ಸಿನಿಮಾಗಳಿಗೆ ನಿರ್ದೇಶನ ಮಾಡುತ್ತಿದ್ದ ಅವರು ಈಗ ಬಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ವರುಣ್​ ಧವನ್​ ನಟನೆಯ ‘ಬೇಬಿ ಜಾನ್​’ ಸಿನಿಮಾಗೆ ಈಗ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೇ 31ರಂದು ಈ ಸಿನಿಮಾ ಬಿಡುಗಡೆ ಆಗುವ ನಿರೀಕ್ಷೆ ಇದೆ. ದಕ್ಷಿಣ ಭಾರತದ ನಿರ್ದೇಶಕರಿಗೆ ಬಾಲಿವುಡ್​ನಲ್ಲಿ ಡಿಮ್ಯಾಂಡ್​ ಹೆಚ್ಚುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ