Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರುಖ್​ ಕಾಲಿಗೆ ನಮಸ್ಕರಿಸಿದ ‘ಜವಾನ್​’ ನಿರ್ದೇಶಕ ಅಟ್ಲಿ; ಕಿಂಗ್ ಖಾನ್​ ಪ್ರತಿಕ್ರಿಯೆ ಏನು?

‘ಜವಾನ್​’ ಸಿನಿಮಾದಿಂದ ಶಾರುಖ್​ ಖಾನ್​ ಅವರಿಗೆ ಭರ್ಜರಿ ಗೆಲುವು ಸಿಕ್ಕಿತು. ಆ ಸಿನಿಮಾದಿಂದ ನಿರ್ದೇಶಕ ಅಟ್ಲಿ ಅವರ ಜನಪ್ರಿಯತೆ ಕೂಡ ಹೆಚ್ಚಿತು. ಈಗ ಅವರು ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಪಡೆದಿದ್ದಾರೆ. ಅವಾರ್ಡ್​ ಸ್ವೀಕರಿಸುವುದಕ್ಕೂ ಮುನ್ನ ಅಟ್ಲಿ ಅವರು ಶಾರುಖ್​ ಖಾನ್​ ಕಾಲು ಮುಟ್ಟಿ ನಮಸ್ಕಾರ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್​ ಆಗಿದೆ.

ಶಾರುಖ್​ ಕಾಲಿಗೆ ನಮಸ್ಕರಿಸಿದ ‘ಜವಾನ್​’ ನಿರ್ದೇಶಕ ಅಟ್ಲಿ; ಕಿಂಗ್ ಖಾನ್​ ಪ್ರತಿಕ್ರಿಯೆ ಏನು?
ಶಾರುಖ್​ ಖಾನ್​, ಅಟ್ಲಿ
Follow us
ಮದನ್​ ಕುಮಾರ್​
|

Updated on: Mar 11, 2024 | 3:26 PM

ತಮಿಳು ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ (Atlee) ಅವರಿಗೆ ಬಾಲಿವುಡ್​ನಲ್ಲಿ ಈಗ ಸಖತ್ ಬೇಡಿಕೆ ಸೃಷ್ಟಿ ಆಗಿದೆ. ಅದಕ್ಕೆ ಕಾರಣ ಆಗಿದ್ದು ‘ಜವಾನ್’ (Jawan) ಸಿನಿಮಾದ ಗೆಲುವು. ಇದು ಅಟ್ಲಿ ನಿರ್ದೇಶನ ಮಾಡಿದ ಮೊದಲ ಹಿಂದಿ ಸಿನಿಮಾ. ಚೊಚ್ಚಲ ಬಾಲಿವುಡ್​ ಪ್ರಾಜೆಕ್ಟ್​ನಲ್ಲೇ ಶಾರುಖ್​ ಖಾನ್ ಜೊತೆ ಕೆಲಸ ಮಾಡುವ ಅವಕಾಶ ಅಟ್ಲಿ ಅವರಿಗೆ ಸಿಕ್ಕಿತು. 2023ರಲ್ಲಿ ತೆರೆಕಂಡು ಬಾಕ್ಸ್​ ಆಫೀಸ್​ನಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡ ‘ಜವಾನ್​’ ಚಿತ್ರಕ್ಕೆ ಈಗ ಪ್ರಶಸ್ತಿಗಳು ಕೂಡ ಸಿಗುತ್ತಿವೆ. ಅವಾರ್ಡ್​ ಸ್ವೀಕರಿಸುವಾಗ ಅಟ್ಲಿ ಅವರು ಶಾರುಖ್​ ಖಾನ್​ (Shah Rukh Khan) ಕಾಲಿಗೆ ನಮಸ್ಕರಿಸಿದ್ದಾರೆ.

‘ಜವಾನ್​’ ಸಿನಿಮಾದ ನಿರ್ದೇಶನಕ್ಕಾಗಿ ಅಟ್ಲಿ ಅವರಿಗೆ ‘ಜೀ ಸಿನಿ ಅವಾರ್ಡ್ಸ್​ 2024’ರಲ್ಲಿ ‘ಅತ್ಯುತ್ತಮ ನಿರ್ದೇಶಕ’ ಪ್ರಶಸ್ತಿ ಸಿಕ್ಕಿದೆ. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರ ಹೆಸರು ಘೋಷಣೆ ಆದಾಗ ಎಲ್ಲರೂ ಜೋರಾಗಿ ಚಪ್ಪಾಳೆ ತಟ್ಟಿದರು. ಪ್ರಶಸ್ತಿ ಸ್ವೀಕರಿಸಲು ವೇದಿಕೆ ಹತ್ತುವುದಕ್ಕೂ ಮುನ್ನ ಅಟ್ಲಿ ಅವರು ಶಾರುಖ್​ ಖಾನ್​ ಕಾಲಿಗೆ ನಮಸ್ಕರಿಸಿದರು. ಅದನ್ನು ತಡೆಯಲು ಶಾರುಖ್​ ಮುಂದಾದರು.

ಇದನ್ನೂ ಓದಿ: ನಾಟು ನಾಟು ಸ್ಟೆಪ್​ ಹಾಕಲಾಗದೇ ಸೋತ ಆಮಿರ್​, ಸಲ್ಲು, ಶಾರುಖ್​; ಮುಜುಗರ ತಪ್ಪಿಸಲು ಮಾಡಿದ್ದೇನು?

ತಮ್ಮ ಕಾಲಿಗೆ ಬೀಳಲು ಬಂದ ನಿರ್ದೇಶಕನನ್ನು ತಡೆಯಲು ಶಾರುಖ್​ ಖಾನ್​ ಪ್ರಯತ್ನಿಸಿದರು. ಆದರೆ ಅವರಿಗೆ ಸಾಧ್ಯವಾಗಲಿಲ್ಲ. ಕಿಂಗ್​ ಖಾನ್​ ಕಾಲಿಗೆ ನಮಸ್ಕರಿಸಿದ ಬಳಿಕವೇ ಅಟ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು. ಈಗ ಅಟ್ಲಿ ಅವರಿಗೆ 37 ವರ್ಷ ವಯಸ್ಸು. ಶಾರುಖ್​ ಖಾನ್​ ಅವರಿಗೆ 58 ವರ್ಷ ವಯಸ್ಸು. ಇಬ್ಬರ ನಡುವೆ 21 ವರ್ಷಗಳ ಅಂತರ ಇದೆ. ತಮಗಿಂತ ಹಿರಿಯರಾದ ಶಾರುಖ್​ ಖಾನ್​ಗೆ ಅಟ್ಲಿ ಅವರು ಗೌರವ ನೀಡಿದ್ದಾರೆ. ವೈರಲ್​ ಆಗಿರುವ ಈ ವಿಡಿಯೋಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುವ ಮೂಲಕ ತಮ್ಮ ಅನಿಸಿಕೆ ತಿಳಿಸುತ್ತಿದ್ದಾರೆ.

ಅಟ್ಲಿ ಅವರು ನಿರ್ದೇಶಕನಾಗಿ 10 ವರ್ಷ ಕಳೆದಿದೆ. ಈವರೆಗೂ ಅವರು ಡೈರೆಕ್ಷನ್​ ಮಾಡಿದ್ದು 5 ಸಿನಿಮಾಗಳಿಗೆ ಮಾತ್ರ. ಅವರ ಎಲ್ಲ ಸಿನಿಮಾಗಳು ಜನಮನ ಗೆದ್ದಿವೆ. ಮೊದಲೆಲ್ಲ ಕೇವಲ ತಮಿಳು ಸಿನಿಮಾಗಳಿಗೆ ನಿರ್ದೇಶನ ಮಾಡುತ್ತಿದ್ದ ಅವರು ಈಗ ಬಾಲಿವುಡ್​ನಲ್ಲಿ ಬೇಡಿಕೆ ಸೃಷ್ಟಿಸಿಕೊಂಡಿದ್ದಾರೆ. ವರುಣ್​ ಧವನ್​ ನಟನೆಯ ‘ಬೇಬಿ ಜಾನ್​’ ಸಿನಿಮಾಗೆ ಈಗ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೇ 31ರಂದು ಈ ಸಿನಿಮಾ ಬಿಡುಗಡೆ ಆಗುವ ನಿರೀಕ್ಷೆ ಇದೆ. ದಕ್ಷಿಣ ಭಾರತದ ನಿರ್ದೇಶಕರಿಗೆ ಬಾಲಿವುಡ್​ನಲ್ಲಿ ಡಿಮ್ಯಾಂಡ್​ ಹೆಚ್ಚುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ನೀರಿಗಾಗಿ ಪ್ರಾಣ ಕಳೆದುಕೊಂಡ ಕೋತಿ ಮರಿ: ಇಲ್ಲಿದೆ ಮನಕಲಕುವ ದೃಶ್ಯ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ