AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ದಿನ ಅಬ್ಬರಿಸಿದ ‘ಜವಾನ್​’ ಚಿತ್ರ ಗಳಿಸಿದ್ದೆಷ್ಟು? ‘ಪಠಾಣ್​’ ದಾಖಲೆ ಮುರಿಯಲು ಇನ್ನೆಷ್ಟು ಬಾಕಿ?

ಶಾರುಖ್​ ಖಾನ್​ ಪಾಲಿಗೆ 2023ರ ವರ್ಷ ಸಖತ್​ ಆಶಾದಾಯಕವಾಗಿದೆ. ಈ ವರ್ಷ ಆರಂಭದಲ್ಲಿ ತೆರೆಕಂಡ ‘ಪಠಾಣ್​’ ಸಿನಿಮಾ ಭಾರತದ ಬಾಕ್ಸ್​ ಆಫೀಸ್​ನಲ್ಲಿ ಒಟ್ಟು 543 ಕೋಟಿ ರೂಪಾಯಿ ಗಳಿಸಿತ್ತು. ಆ ಚಿತ್ರದ ಕಲೆಕ್ಷನ್​ ಹಿಂದಿಕ್ಕಲು ‘ಜವಾನ್​’ ಸಿನಿಮಾಗೆ ಇನ್ನು ಕೆಲವೇ ಕೋಟಿ ರೂಪಾಯಿಗಳು ಮಾತ್ರ ಬಾಕಿ ಇವೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

15 ದಿನ ಅಬ್ಬರಿಸಿದ ‘ಜವಾನ್​’ ಚಿತ್ರ ಗಳಿಸಿದ್ದೆಷ್ಟು? ‘ಪಠಾಣ್​’ ದಾಖಲೆ ಮುರಿಯಲು ಇನ್ನೆಷ್ಟು ಬಾಕಿ?
ಶಾರುಖ್​​ ಖಾನ್​
ಮದನ್​ ಕುಮಾರ್​
|

Updated on: Sep 22, 2023 | 12:11 PM

Share

ಬಾಲಿವುಡ್​ನ ಬಾದ್​ಷಾ ಶಾರುಖ್​ ಖಾನ್​ (Shah Rukh Khan) ಅವರು ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರು ನಟಿಸಿದ ‘ಜವಾನ್​’ ಸಿನಿಮಾ ಸೂಪರ್​ ಹಿಟ್​ ಆಗಿದೆ. ಸೆಪ್ಟೆಂಬರ್​ 7ರಂದು ಈ ಸಿನಿಮಾ ಬಿಡುಗಡೆ ಆಯಿತು. 15 ದಿನಗಳ ಕಾಲ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಅತ್ಯುತ್ತಮವಾಗಿ ಪ್ರದರ್ಶನ ಕಂಡಿದೆ. ನೂರಾರು ಚಿತ್ರಮಂದಿರಗಳಲ್ಲಿ ಇನ್ನೂ ಪ್ರದರ್ಶನ ಮುಂದುವರಿದಿದೆ. ಭಾರತ ಮಾತ್ರವಲ್ಲದೇ ವಿದೇಶದಲ್ಲೂ ‘ಜವಾನ್​’ (Jawan Movie) ಹವಾ ಜೋರಾಗಿದೆ. 15 ದಿನಕ್ಕೆ ಭಾರತದ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಕ್ಕೆ 526 ಕೋಟಿ ರೂಪಾಯಿ ಆಗಿದೆ. ಆ ಮೂಲಕ ಶಾರುಖ್​ ಖಾನ್​ ಅವರು ಗಲ್ಲಾಪೆಟ್ಟಿಗೆಯಲ್ಲಿ ಹೊಸ ಹೊಸ ದಾಖಲೆ ಬರೆದಿದ್ದಾರೆ. ಶಾರುಖ್​ ನಟನೆಯ ‘ಪಠಾಣ್​’ (Pathaan) ಚಿತ್ರದ ಕಲೆಕ್ಷನ್​ ಅನ್ನು ಹಿಂದಿಕ್ಕಲು ಇನ್ನು ಕೆಲವೇ ಕೋಟಿ ರೂಪಾಯಿಗಳು ಮಾತ್ರ ಬಾಕಿ ಇವೆ.

ಶಾರುಖ್​ ಖಾನ್​ ಪಾಲಿಗೆ 2023ರ ವರ್ಷ ಸಖತ್​ ಆಶಾದಾಯಕವಾಗಿದೆ. ಈ ವರ್ಷ ಆರಂಭದಲ್ಲಿ ತೆರೆಕಂಡ ‘ಪಠಾಣ್​’ ಸಿನಿಮಾ ಭಾರತದ ಬಾಕ್ಸ್​ ಆಫೀಸ್​ನಲ್ಲಿ ಒಟ್ಟು 543 ಕೋಟಿ ರೂಪಾಯಿ ಗಳಿಸಿತ್ತು. ಈಗ ‘ಜವಾನ್​’ ಸಿನಿಮಾ 526 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿದೆ. ‘ಪಠಾಣ್​’ ಚಿತ್ರವನ್ನು ಹಿಂದಿಕ್ಕಲು ಕೇವಲ 17 ಕೋಟಿ ರೂಪಾಯಿ ಮಾತ್ರ ಬಾಕಿ ಇದೆ. ಎರಡು ವೀಕೆಂಡ್​ಗಳಲ್ಲಿ ‘ಜವಾನ್​’ ಸಿನಿಮಾ ಅತ್ಯುತ್ತಮವಾಗಿ ಕಮಾಯಿ ಮಾಡಿದೆ. ಈಗ ಮೂರನೇ ವೀಕೆಂಡ್​ನಲ್ಲೂ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಆಗುವ ನಿರೀಕ್ಷೆ ಇದೆ. ಹಾಗಾಗಿ ಅನಾಯಾಸವಾಗಿ ‘ಪಠಾಣ್​’ ಚಿತ್ರದ ಕಲೆಕ್ಷನ್​ ಅನ್ನು ‘ಜವಾನ್​’ ಸಿನಿಮಾ ಹಿಂದಿಕ್ಕಲಿದೆ.

ಇದನ್ನೂ ಓದಿ: ಯುವ ನಟಿ ಲೆಹರ್​ ಖಾನ್​ಗೆ ‘ಜವಾನ್​’ ಸಿನಿಮಾದಿಂದ ಸಿಕ್ತು ಸೂಪರ್​ ಸಕ್ಸಸ್​

ತಮಿಳು ನಿರ್ದೇಶಕ ಅಟ್ಲಿ ಅವರು ಡೈರೆಕ್ಷನ್​ ಮಾಡಿದ ಮೊದಲ ಹಿಂದಿ ಸಿನಿಮಾ ‘ಜವಾನ್’. ಚೊಚ್ಚಲ ಪ್ರಯತ್ನದಲ್ಲೇ ಅವರಿಗೆ ಭರ್ಜರಿ ಗೆಲುವು ಸಿಕ್ಕಿದೆ. ಈ ಸಿನಿಮಾ ಬ್ಲಾಕ್​ ಬಸ್ಟರ್​ ಹಿಟ್​ ಆಗಿರುವುದರಿಂದ ಬಾಲಿವುಡ್​ನಲ್ಲಿ ಅವರಿಗೆ ಡಿಮ್ಯಾಂಡ್​ ಹೆಚ್ಚಾಗಿದೆ. ಶಾರುಖ್​ ಖಾನ್​ ಜೊತೆ ನಟಿಸಿದ ವಿಜಯ್​ ಸೇತುಪತಿ, ಪ್ರಿಯಾಮಣಿ, ನಯನತಾರಾ ಮುಂತಾದ ಕಲಾವಿದರು ಕೂಡ ಮಿಂಚುತ್ತಿದ್ದಾರೆ. ಸಂಗೀತ ನಿರ್ದೇಶಕ ಅನಿರುದ್ಧ್​ ರವಿಚಂದರ್​ ಅವರ ಹವಾ ಹೆಚ್ಚಾಗಿದೆ. ವಿಶ್ವಾದ್ಯಂತ ‘ಜವಾನ್​’ ಸಿನಿಮಾದ ಗಳಿಕೆ ಸಾವಿರ ಕೋಟಿ ರೂಪಾಯಿ ಸಮೀಪದಲ್ಲಿದೆ.

ಇದನ್ನೂ ಓದಿ: ದಳಪತಿ ವಿಜಯ್​ ಹೆಸರಲ್ಲಿ ಪ್ರಿಯಾಮಣಿಗೆ ಮೋಸ ಮಾಡಿದ ‘ಜವಾನ್​’ ನಿರ್ದೇಶಕ ಅಟ್ಲಿ

ಶಾರುಖ್​ ಖಾನ್​ ಅವರು ಈಗ ‘ಡಂಕಿ’ ಸಿನಿಮಾದ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಆ ಚಿತ್ರಕ್ಕೆ ನಿರ್ದೇಶನ ಮಾಡುತ್ತಿರುವುದು ರಾಜ್​ ಕುಮಾರ್​ ಹಿರಾನಿ. ಹಿಂದಿ ಚಿತ್ರರಂಗದಲ್ಲಿ ಹಿರಾನಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ಸಿನಿಮಾಗೆ ಹಣ ಹೂಡಿದರೆ ಶೇಕಡ 100ರಷ್ಟು ಸಕ್ಸಸ್​ ಗ್ಯಾರಂಟಿ ಎಂಬುದು ಸಾಬೀತಾಗಿದೆ. ಹಾಗಾಗಿ ‘ಡಂಕಿ’ ಸಿನಿಮಾ ಕೂಡ ಸೂಪರ್​ ಹಿಟ್​ ಆಗುವುದರಲ್ಲಿ ಅನುಮಾನವೇ ಇಲ್ಲ ಎಂದು ಟ್ರೇಡ್​ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ