AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೇ ಆದರೂ ‘ಕೆಜಿಎಫ್ 2’ ಮಾಡಿದ್ದ ದಾಖಲೆ ಮುರಿಯಲಿಲ್ಲ ‘ಜವಾನ್’ ಸಿನಿಮಾ

ಶಾರುಖ್ ಖಾನ್ ಅವರು ‘ಪಠಾಣ್​’ ಸಿನಿಮಾ ಮೂಲಕ ಗೆಲುವು ಕಂಡರು. ಇದಾದ ಬಳಿಕ ರಿಲೀಸ್ ಆಗಿದ್ದು ‘ಜವಾನ್’ ಸಿನಿಮಾ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. 43ನೇ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ 45 ಲಕ್ಷ ರೂಪಾಯಿ ಗಳಿಕೆ ಮಾಡಿದೆ.

ಏನೇ ಆದರೂ ‘ಕೆಜಿಎಫ್ 2’ ಮಾಡಿದ್ದ ದಾಖಲೆ ಮುರಿಯಲಿಲ್ಲ ‘ಜವಾನ್’ ಸಿನಿಮಾ
ಜವಾನ್-ಯಶ್
ರಾಜೇಶ್ ದುಗ್ಗುಮನೆ
|

Updated on:Oct 20, 2023 | 2:36 PM

Share

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದಿದೆ. ಈ ಸಿನಿಮಾ ಇನ್ನೂ ಥೀಯೇಟರ್​ಗಳಲ್ಲಿ ಕಲೆಕ್ಷನ್ ಮಾಡುತ್ತಿದೆ. ಈ ಚಿತ್ರದ ಗಳಿಕೆ ತಗ್ಗಿದೆಯಾದರೂ ತಕ್ಕ ಮಟ್ಟಿಗೆ ಸಿನಿಮಾ ಕಲೆಕ್ಷನ್ ಮಾಡುತ್ತಿದೆ. ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ‘ಕೆಜಿಎಫ್ 2’ ದಾಖಲೆಯನ್ನು ಮುರಿಯಲು ‘ಜವಾನ್’ ಸಿನಿಮಾ ಬಳಿ ಸಾಧ್ಯವಾಗಿಲ್ಲ. ಇದು ಅಸಾಧ್ಯ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಈ ವಿಚಾರ ಕೇಳಿ ಯಶ್ ಫ್ಯಾನ್ಸ್​ ನಿಟ್ಟುಸಿರು ಬಿಟ್ಟಿದ್ದಾರೆ.

ಶಾರುಖ್ ಖಾನ್ ಅವರು ‘ಪಠಾಣ್​’ ಸಿನಿಮಾ ಮೂಲಕ ಗೆಲುವು ಕಂಡರು. ಇದಾದ ಬಳಿಕ ರಿಲೀಸ್ ಆಗಿದ್ದು ‘ಜವಾನ್’ ಸಿನಿಮಾ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. 43ನೇ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ 45 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಗಳಿಕೆ 638.42 ಕೋಟಿ ರೂಪಾಯಿ ಆಗಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಚಿತ್ರದ ಗಳಿಕೆ 1138 ಕೋಟಿ ರೂಪಾಯಿ ಆಗಿದೆ. ಕೆಜಿಎಫ್ ಗಳಿಕೆ 1200 ಕೋಟಿ ರೂಪಾಯಿ ದಾಟಿದೆ. ಇದನ್ನು ಹಿಂದಿಕ್ಕಲು ‘ಜವಾನ್’ ಬಳಿ ಸಾಧ್ಯವಿಲ್ಲ.

‘ಜವಾನ್’ ಸಿನಿಮಾಗೆ ದಕ್ಷಿಣ ಭಾರತದ ನಿರ್ದೇಶಕ ಅಟ್ಲಿ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರ ದಕ್ಷಿಣ ಭಾರತದ ಶೈಲಿಯಲ್ಲಿ ಮೂಡಿ ಬಂದಿದೆ. ದೇಶದಲ್ಲಿರುವ ಸಮಸ್ಯೆಗಳ ಬಗ್ಗೆ ಈ ಸಿನಿಮಾ ಗಮನ ಹರಿಸಿದೆ. ಈ ಕಾರಣಕ್ಕೂ ಜನರಿಗೆ ಸಿನಿಮಾ ಇಷ್ಟವಾಗಿದೆ.

ಇದನ್ನೂ ಓದಿ: ಥಿಯೇಟರ್​ಗೆ Y+ ಭದ್ರತೆಯೊಂದಿಗೆ ಎಂಟ್ರಿಕೊಟ್ಟ ಶಾರುಖ್ ಖಾನ್; ಇಲ್ಲಿದೆ ವಿಡಿಯೋ

ಶಾರುಖ್ ಖಾನ್ ಅವರು ಸದ್ಯ ‘ಡಂಕಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಈ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ. ಮೂಲಗಳ ಪ್ರಕಾರ ಸಿನಿಮಾ ಬಿಡುಗಡೆ ದಿನಾಂಕ ವಿಳಂಬ ಆಗಲಿದೆ ಎಂದು ಕೂಡ ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:36 pm, Fri, 20 October 23

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?