AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೇ ಆದರೂ ‘ಕೆಜಿಎಫ್ 2’ ಮಾಡಿದ್ದ ದಾಖಲೆ ಮುರಿಯಲಿಲ್ಲ ‘ಜವಾನ್’ ಸಿನಿಮಾ

ಶಾರುಖ್ ಖಾನ್ ಅವರು ‘ಪಠಾಣ್​’ ಸಿನಿಮಾ ಮೂಲಕ ಗೆಲುವು ಕಂಡರು. ಇದಾದ ಬಳಿಕ ರಿಲೀಸ್ ಆಗಿದ್ದು ‘ಜವಾನ್’ ಸಿನಿಮಾ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. 43ನೇ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ 45 ಲಕ್ಷ ರೂಪಾಯಿ ಗಳಿಕೆ ಮಾಡಿದೆ.

ಏನೇ ಆದರೂ ‘ಕೆಜಿಎಫ್ 2’ ಮಾಡಿದ್ದ ದಾಖಲೆ ಮುರಿಯಲಿಲ್ಲ ‘ಜವಾನ್’ ಸಿನಿಮಾ
ಜವಾನ್-ಯಶ್
ರಾಜೇಶ್ ದುಗ್ಗುಮನೆ
|

Updated on:Oct 20, 2023 | 2:36 PM

Share

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದಿದೆ. ಈ ಸಿನಿಮಾ ಇನ್ನೂ ಥೀಯೇಟರ್​ಗಳಲ್ಲಿ ಕಲೆಕ್ಷನ್ ಮಾಡುತ್ತಿದೆ. ಈ ಚಿತ್ರದ ಗಳಿಕೆ ತಗ್ಗಿದೆಯಾದರೂ ತಕ್ಕ ಮಟ್ಟಿಗೆ ಸಿನಿಮಾ ಕಲೆಕ್ಷನ್ ಮಾಡುತ್ತಿದೆ. ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ‘ಕೆಜಿಎಫ್ 2’ ದಾಖಲೆಯನ್ನು ಮುರಿಯಲು ‘ಜವಾನ್’ ಸಿನಿಮಾ ಬಳಿ ಸಾಧ್ಯವಾಗಿಲ್ಲ. ಇದು ಅಸಾಧ್ಯ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಈ ವಿಚಾರ ಕೇಳಿ ಯಶ್ ಫ್ಯಾನ್ಸ್​ ನಿಟ್ಟುಸಿರು ಬಿಟ್ಟಿದ್ದಾರೆ.

ಶಾರುಖ್ ಖಾನ್ ಅವರು ‘ಪಠಾಣ್​’ ಸಿನಿಮಾ ಮೂಲಕ ಗೆಲುವು ಕಂಡರು. ಇದಾದ ಬಳಿಕ ರಿಲೀಸ್ ಆಗಿದ್ದು ‘ಜವಾನ್’ ಸಿನಿಮಾ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. 43ನೇ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ 45 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಗಳಿಕೆ 638.42 ಕೋಟಿ ರೂಪಾಯಿ ಆಗಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಚಿತ್ರದ ಗಳಿಕೆ 1138 ಕೋಟಿ ರೂಪಾಯಿ ಆಗಿದೆ. ಕೆಜಿಎಫ್ ಗಳಿಕೆ 1200 ಕೋಟಿ ರೂಪಾಯಿ ದಾಟಿದೆ. ಇದನ್ನು ಹಿಂದಿಕ್ಕಲು ‘ಜವಾನ್’ ಬಳಿ ಸಾಧ್ಯವಿಲ್ಲ.

‘ಜವಾನ್’ ಸಿನಿಮಾಗೆ ದಕ್ಷಿಣ ಭಾರತದ ನಿರ್ದೇಶಕ ಅಟ್ಲಿ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರ ದಕ್ಷಿಣ ಭಾರತದ ಶೈಲಿಯಲ್ಲಿ ಮೂಡಿ ಬಂದಿದೆ. ದೇಶದಲ್ಲಿರುವ ಸಮಸ್ಯೆಗಳ ಬಗ್ಗೆ ಈ ಸಿನಿಮಾ ಗಮನ ಹರಿಸಿದೆ. ಈ ಕಾರಣಕ್ಕೂ ಜನರಿಗೆ ಸಿನಿಮಾ ಇಷ್ಟವಾಗಿದೆ.

ಇದನ್ನೂ ಓದಿ: ಥಿಯೇಟರ್​ಗೆ Y+ ಭದ್ರತೆಯೊಂದಿಗೆ ಎಂಟ್ರಿಕೊಟ್ಟ ಶಾರುಖ್ ಖಾನ್; ಇಲ್ಲಿದೆ ವಿಡಿಯೋ

ಶಾರುಖ್ ಖಾನ್ ಅವರು ಸದ್ಯ ‘ಡಂಕಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಈ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ. ಮೂಲಗಳ ಪ್ರಕಾರ ಸಿನಿಮಾ ಬಿಡುಗಡೆ ದಿನಾಂಕ ವಿಳಂಬ ಆಗಲಿದೆ ಎಂದು ಕೂಡ ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:36 pm, Fri, 20 October 23

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ