Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೇ ಆದರೂ ‘ಕೆಜಿಎಫ್ 2’ ಮಾಡಿದ್ದ ದಾಖಲೆ ಮುರಿಯಲಿಲ್ಲ ‘ಜವಾನ್’ ಸಿನಿಮಾ

ಶಾರುಖ್ ಖಾನ್ ಅವರು ‘ಪಠಾಣ್​’ ಸಿನಿಮಾ ಮೂಲಕ ಗೆಲುವು ಕಂಡರು. ಇದಾದ ಬಳಿಕ ರಿಲೀಸ್ ಆಗಿದ್ದು ‘ಜವಾನ್’ ಸಿನಿಮಾ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. 43ನೇ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ 45 ಲಕ್ಷ ರೂಪಾಯಿ ಗಳಿಕೆ ಮಾಡಿದೆ.

ಏನೇ ಆದರೂ ‘ಕೆಜಿಎಫ್ 2’ ಮಾಡಿದ್ದ ದಾಖಲೆ ಮುರಿಯಲಿಲ್ಲ ‘ಜವಾನ್’ ಸಿನಿಮಾ
ಜವಾನ್-ಯಶ್
Follow us
ರಾಜೇಶ್ ದುಗ್ಗುಮನೆ
|

Updated on:Oct 20, 2023 | 2:36 PM

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದಿದೆ. ಈ ಸಿನಿಮಾ ಇನ್ನೂ ಥೀಯೇಟರ್​ಗಳಲ್ಲಿ ಕಲೆಕ್ಷನ್ ಮಾಡುತ್ತಿದೆ. ಈ ಚಿತ್ರದ ಗಳಿಕೆ ತಗ್ಗಿದೆಯಾದರೂ ತಕ್ಕ ಮಟ್ಟಿಗೆ ಸಿನಿಮಾ ಕಲೆಕ್ಷನ್ ಮಾಡುತ್ತಿದೆ. ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ‘ಕೆಜಿಎಫ್ 2’ ದಾಖಲೆಯನ್ನು ಮುರಿಯಲು ‘ಜವಾನ್’ ಸಿನಿಮಾ ಬಳಿ ಸಾಧ್ಯವಾಗಿಲ್ಲ. ಇದು ಅಸಾಧ್ಯ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಈ ವಿಚಾರ ಕೇಳಿ ಯಶ್ ಫ್ಯಾನ್ಸ್​ ನಿಟ್ಟುಸಿರು ಬಿಟ್ಟಿದ್ದಾರೆ.

ಶಾರುಖ್ ಖಾನ್ ಅವರು ‘ಪಠಾಣ್​’ ಸಿನಿಮಾ ಮೂಲಕ ಗೆಲುವು ಕಂಡರು. ಇದಾದ ಬಳಿಕ ರಿಲೀಸ್ ಆಗಿದ್ದು ‘ಜವಾನ್’ ಸಿನಿಮಾ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. 43ನೇ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ 45 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಗಳಿಕೆ 638.42 ಕೋಟಿ ರೂಪಾಯಿ ಆಗಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಚಿತ್ರದ ಗಳಿಕೆ 1138 ಕೋಟಿ ರೂಪಾಯಿ ಆಗಿದೆ. ಕೆಜಿಎಫ್ ಗಳಿಕೆ 1200 ಕೋಟಿ ರೂಪಾಯಿ ದಾಟಿದೆ. ಇದನ್ನು ಹಿಂದಿಕ್ಕಲು ‘ಜವಾನ್’ ಬಳಿ ಸಾಧ್ಯವಿಲ್ಲ.

‘ಜವಾನ್’ ಸಿನಿಮಾಗೆ ದಕ್ಷಿಣ ಭಾರತದ ನಿರ್ದೇಶಕ ಅಟ್ಲಿ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರ ದಕ್ಷಿಣ ಭಾರತದ ಶೈಲಿಯಲ್ಲಿ ಮೂಡಿ ಬಂದಿದೆ. ದೇಶದಲ್ಲಿರುವ ಸಮಸ್ಯೆಗಳ ಬಗ್ಗೆ ಈ ಸಿನಿಮಾ ಗಮನ ಹರಿಸಿದೆ. ಈ ಕಾರಣಕ್ಕೂ ಜನರಿಗೆ ಸಿನಿಮಾ ಇಷ್ಟವಾಗಿದೆ.

ಇದನ್ನೂ ಓದಿ: ಥಿಯೇಟರ್​ಗೆ Y+ ಭದ್ರತೆಯೊಂದಿಗೆ ಎಂಟ್ರಿಕೊಟ್ಟ ಶಾರುಖ್ ಖಾನ್; ಇಲ್ಲಿದೆ ವಿಡಿಯೋ

ಶಾರುಖ್ ಖಾನ್ ಅವರು ಸದ್ಯ ‘ಡಂಕಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಈ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ. ಮೂಲಗಳ ಪ್ರಕಾರ ಸಿನಿಮಾ ಬಿಡುಗಡೆ ದಿನಾಂಕ ವಿಳಂಬ ಆಗಲಿದೆ ಎಂದು ಕೂಡ ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:36 pm, Fri, 20 October 23

ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?