AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏನೇ ಆದರೂ ‘ಕೆಜಿಎಫ್ 2’ ಮಾಡಿದ್ದ ದಾಖಲೆ ಮುರಿಯಲಿಲ್ಲ ‘ಜವಾನ್’ ಸಿನಿಮಾ

ಶಾರುಖ್ ಖಾನ್ ಅವರು ‘ಪಠಾಣ್​’ ಸಿನಿಮಾ ಮೂಲಕ ಗೆಲುವು ಕಂಡರು. ಇದಾದ ಬಳಿಕ ರಿಲೀಸ್ ಆಗಿದ್ದು ‘ಜವಾನ್’ ಸಿನಿಮಾ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. 43ನೇ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ 45 ಲಕ್ಷ ರೂಪಾಯಿ ಗಳಿಕೆ ಮಾಡಿದೆ.

ಏನೇ ಆದರೂ ‘ಕೆಜಿಎಫ್ 2’ ಮಾಡಿದ್ದ ದಾಖಲೆ ಮುರಿಯಲಿಲ್ಲ ‘ಜವಾನ್’ ಸಿನಿಮಾ
ಜವಾನ್-ಯಶ್
ರಾಜೇಶ್ ದುಗ್ಗುಮನೆ
|

Updated on:Oct 20, 2023 | 2:36 PM

Share

ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ (Jawan Movie) ರಿಲೀಸ್ ಆಗಿ ಒಂದೂವರೆ ತಿಂಗಳು ಕಳೆದಿದೆ. ಈ ಸಿನಿಮಾ ಇನ್ನೂ ಥೀಯೇಟರ್​ಗಳಲ್ಲಿ ಕಲೆಕ್ಷನ್ ಮಾಡುತ್ತಿದೆ. ಈ ಚಿತ್ರದ ಗಳಿಕೆ ತಗ್ಗಿದೆಯಾದರೂ ತಕ್ಕ ಮಟ್ಟಿಗೆ ಸಿನಿಮಾ ಕಲೆಕ್ಷನ್ ಮಾಡುತ್ತಿದೆ. ವಿಶ್ವ ಬಾಕ್ಸ್ ಆಫೀಸ್​​ನಲ್ಲಿ ‘ಕೆಜಿಎಫ್ 2’ ದಾಖಲೆಯನ್ನು ಮುರಿಯಲು ‘ಜವಾನ್’ ಸಿನಿಮಾ ಬಳಿ ಸಾಧ್ಯವಾಗಿಲ್ಲ. ಇದು ಅಸಾಧ್ಯ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ಈ ವಿಚಾರ ಕೇಳಿ ಯಶ್ ಫ್ಯಾನ್ಸ್​ ನಿಟ್ಟುಸಿರು ಬಿಟ್ಟಿದ್ದಾರೆ.

ಶಾರುಖ್ ಖಾನ್ ಅವರು ‘ಪಠಾಣ್​’ ಸಿನಿಮಾ ಮೂಲಕ ಗೆಲುವು ಕಂಡರು. ಇದಾದ ಬಳಿಕ ರಿಲೀಸ್ ಆಗಿದ್ದು ‘ಜವಾನ್’ ಸಿನಿಮಾ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿದೆ. 43ನೇ ದಿನ ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಚಿತ್ರ 45 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಿನಿಮಾದ ಗಳಿಕೆ 638.42 ಕೋಟಿ ರೂಪಾಯಿ ಆಗಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಚಿತ್ರದ ಗಳಿಕೆ 1138 ಕೋಟಿ ರೂಪಾಯಿ ಆಗಿದೆ. ಕೆಜಿಎಫ್ ಗಳಿಕೆ 1200 ಕೋಟಿ ರೂಪಾಯಿ ದಾಟಿದೆ. ಇದನ್ನು ಹಿಂದಿಕ್ಕಲು ‘ಜವಾನ್’ ಬಳಿ ಸಾಧ್ಯವಿಲ್ಲ.

‘ಜವಾನ್’ ಸಿನಿಮಾಗೆ ದಕ್ಷಿಣ ಭಾರತದ ನಿರ್ದೇಶಕ ಅಟ್ಲಿ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರ ದಕ್ಷಿಣ ಭಾರತದ ಶೈಲಿಯಲ್ಲಿ ಮೂಡಿ ಬಂದಿದೆ. ದೇಶದಲ್ಲಿರುವ ಸಮಸ್ಯೆಗಳ ಬಗ್ಗೆ ಈ ಸಿನಿಮಾ ಗಮನ ಹರಿಸಿದೆ. ಈ ಕಾರಣಕ್ಕೂ ಜನರಿಗೆ ಸಿನಿಮಾ ಇಷ್ಟವಾಗಿದೆ.

ಇದನ್ನೂ ಓದಿ: ಥಿಯೇಟರ್​ಗೆ Y+ ಭದ್ರತೆಯೊಂದಿಗೆ ಎಂಟ್ರಿಕೊಟ್ಟ ಶಾರುಖ್ ಖಾನ್; ಇಲ್ಲಿದೆ ವಿಡಿಯೋ

ಶಾರುಖ್ ಖಾನ್ ಅವರು ಸದ್ಯ ‘ಡಂಕಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕೆ ರಾಜ್​ಕುಮಾರ್ ಹಿರಾನಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಹೆಚ್ಚಿನ ನಿರೀಕ್ಷೆ ಇದೆ. ಈ ಸಿನಿಮಾ ಡಿಸೆಂಬರ್ 22ರಂದು ರಿಲೀಸ್ ಆಗಲಿದೆ. ಮೂಲಗಳ ಪ್ರಕಾರ ಸಿನಿಮಾ ಬಿಡುಗಡೆ ದಿನಾಂಕ ವಿಳಂಬ ಆಗಲಿದೆ ಎಂದು ಕೂಡ ಹೇಳಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:36 pm, Fri, 20 October 23

Follow Us
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್​​ಲೈನ್
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ಜನಾರ್ದನ ರೆಡ್ಡಿಗೆ ಮತ್ತೆ 'ಗಣಿ' ಉರುಳು? 884 ಕೋಟಿ ನಷ್ಟ ವಸೂಲಿಗೆ ಆಗ್ರಹ
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್
ತಾನು ಕೆಲಸ ಮಾಡಿದ ಆಫೀಸಿಗೇ 91 ಲಕ್ಷ ರೂ. ಕನ್ನ! ಆರೋಪಿ ಕ್ಯಾಶಿಯರ್ ಅಂದರ್